ಉಡುಪಿ

ಒಲಿಂಪಿಕ್ಸ್‌ ಪದಕ ಗುರಿ : ಕಾಮನ್‌ನ್ವೆಲ್ತ್‌ ಬಂಗಾರದ ಪದಕ ವಿಜೇತ ಲಿಫ್ಟರ್‌ ಗುರುರಾಜ್‌ಗೆ ಸಮ್ಮಾನ..

ಉಡುಪಿ: ಒಲಿಂಪಿಕ್ಸ್‌ ಪದಕ ನನ್ನ ಗುರಿ ಎಂದು ಕಾಮನ್ವೆಲ್ತ್‌ ಕ್ರೀಡಾಕೂಟದಲ್ಲಿ ವೇಟ್‌ ಲಿಫ್ಟಿಂಗ್‌ ಬೆಳ್ಳಿ ಪದಕ ಗೆದ್ದಿರುವ ಕುಂದಾಪುರದ ಗುರುರಾಜ್‌ ಹೇಳಿದ್ದಾರೆ. ಗುರುವಾರ ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಡಳಿತದ ವತಿಯಿಂದ ಸಮ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ನಾನು ಹುಟ್ಟೂರಿಗೆ ಬಂದ ಸಂದರ್ಭ ಭವ್ಯ ಸ್ವಾಗತ ದೊರೆತಿದೆ. ಇತರ ಕ್ರೀಡಾಪಟುಗಳಿಗೂ ಇದೇ ಮಾದರಿಯ ಪ್ರೋತ್ಸಾಹ ದೊರೆಯಲಿ. ಆಗ ಮಾತ್ರ ಹ‌ಳ್ಳಿಯ ಕ್ರೀಡಾಪಟುಗಳು ಕೂಡ ಸಾಧನೆ ಮಾಡಲು ಸಾಧ್ಯ ಎಂದರು. 2015ರಿಂದ ಪಂಜಾಬ್‌ನ ಪಟಿಯಾಲಾದಲ್ಲಿ ಬೆಳಗ್ಗೆ ಮತ್ತು ಮಧ್ಯಾಹ್ನ ತಲಾ 2 ತಾಸು, ಸಂಜೆ 3 ತಾಸು ನಿರಂತರ ಅಭ್ಯಾಸ ಮಾಡುತ್ತಿದ್ದೇನೆ. ಸೆಪ್ಟಂಬರ್‌ನಲ್ಲಿ ನಡೆಯುವ ಏಷ್ಯನ್‌ ಗೇಮ್ಸ್‌ಗೆ ಸಿದ್ಧನಾಗುತ್ತಿದ್ದೇನೆ. ಮುಂದಿನ ಒಲಿಂಪಿಕ್ಸ್‌ನಲ್ಲಿ ಪದಕ ಗೆಲ್ಲುವ ಗುರಿ ಇದೆ. ಕಾಮನ್ವೆಲ್ತ್‌ನಲ್ಲಿ ಎತ್ತಿರುವ ಭಾರಕ್ಕಿಂತ 20ರಿಂದ 30 ಕೆಜಿ ಜಾಸ್ತಿ ಎತ್ತಿದರೆ ಒಲಿಂಪಿಕ್ಸ್‌ ಪದಕ ಗೆಲ್ಲಬಹುದಾಗಿದೆ ಎಂದರು.

ಪ್ರೋತ್ಸಾಹ ಸಾಲದು
ನಾಲ್ಕು ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಒಟ್ಟು 2 ಚಿನ್ನ, ತಲಾ 1 ಬೆಳ್ಳಿ ಮತ್ತು ಕಂಚು ಗೆದ್ದುಕೊಂಡಿದ್ದೇನೆ. ಏಕಲವ್ಯ ಪ್ರಶಸ್ತಿ ದೊರೆತಿದೆ. ಉಳಿದಂತೆ ಸರಕಾರಗಳ ಪ್ರೋತ್ಸಾಹ ಅಷ್ಟಾಗಿ ಸಿಕ್ಕಿಲ್ಲ. ಎ. 20ರಂದು ರಕ್ಷಣಾ ಇಲಾಖೆಯಿಂದ ಸಮ್ಮಾನವಿದೆ ಎಂದು ಹೇಳಿದರು.

ಜಿಲ್ಲೆಗೆ ಹೆಮ್ಮೆ
ಸಮ್ಮಾನ ನಡೆಸಿದ ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್‌ ಅವರು, ಗುರುರಾಜ್‌ ಅವರು ಉಡುಪಿ ಜಿಲ್ಲೆಯವರಾಗಿರುವುದು ನಮಗೆ ಹೆಮ್ಮೆ ಮತ್ತು ಸಂತೋಷವನ್ನುಂಟು ಮಾಡಿದೆ. ಇವರು ಇತರರಿಗೂ ಸ್ಫೂರ್ತಿಯಾಗಿ ಮತ್ತಷ್ಟು ಮಂದಿ ಕ್ರೀಡೆಯಲ್ಲಿ ಸಾಧನೆ ಮಾಡುವಂತಾಗಲಿ ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ| ರೋಶನ್‌ ಕುಮಾರ್‌ ಶೆಟ್ಟಿ, ಗುರುರಾಜ್‌ ಹುಟ್ಟೂರಿಗೆ ಆಗಮಿಸುತ್ತಿರುವ ಈ ಸಂದರ್ಭದಲ್ಲಿ ಜಿಲ್ಲಾಡಳಿತವೇ ವಿಮಾನ ನಿಲ್ದಾಣದಿಂದ ಅವರ ಮನೆಯವರೆಗೆ ವಾಹನ ವ್ಯವಸ್ಥೆ ಮಾಡಿದೆ. ಎ. 20ರಂದು ಅವರು ದಿಲ್ಲಿಗೆ ತೆರಳಲಿದ್ದಾರೆ ಎಂದು ತಿಳಿಸಿದರು. ಅಪರ ಜಿಲ್ಲಾಧಿಕಾರಿ ಅನುರಾಧಾ, ಸಿಇಒ ಶಿವಾನಂದ ಕಾಪಶಿ, ಗುರುರಾಜ್‌ ತಂದೆ ಮಹಾಬಲ ಪೂಜಾರಿ ಉಪಸ್ಥಿತರಿದ್ದರು.

ಜಿಲ್ಲೆಯ ಮತ ಜಾಗೃತಿ ಐಕಾನ್‌
ಮತದಾನ ಜಾಗೃತಿಗಾಗಿ ಗುರುರಾಜ ಅವರನ್ನು ಉಡುಪಿ ಜಿಲ್ಲೆಯ ಐಕಾನ್‌ ಆಗಿ ಜಿಲ್ಲಾಡಳಿತ ನಿಯೋಜಿಸುತ್ತಿದೆ ಎಂದು ಜಿಲ್ಲಾಧಿಕಾರಿ ಘೋಷಿಸಿದರು. ‘ಎಲ್ಲರೂ ತಪ್ಪದೇ ಮತದಾನ ಮಾಡಿ’ ಎಂಬ ಸಂದೇಶವನ್ನು ಒಳಗೊಂಡ ಗುರುರಾಜ್‌ ಅವರ ಧ್ವನಿಚಿತ್ರವನ್ನು ಮುದ್ರಿಸಿಕೊಳ್ಳಲಾಯಿತು.

 

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

2 days ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago