Featured

ಒಲಿಂಪಿಕ್ ಬ್ಲೇಜರ್ ಕಳವು ಮಾಡಿದ ಮಾನಗೆಟ್ಟವರು : ಎಫ್‌ಐಆರ್ ದಾಖಲು

ಪಟಿಯಾಲ: ಹಿರಿಯ ಹಾಕಿ ಆಟಗಾರ ಬಲಬೀರ್‌ ಸಿಂಗ್‌ ಅವರ ಒಲಿಂಪಿಕ್ ಬ್ಲೇಜರ್‌ ಕಳವಾಗಿದ್ದು, ಈ ಸಂಬಂಧ ಪೊಲೀಸರು ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.

ಸಿಂಗ್‌ ಅವರು 1956ರ ಮೆಲ್ಬರ್ನ್‌ ಒಲಿಂಪಿಕ್‌ನಲ್ಲಿ ತಮಗೆ ದೊರೆತಿದ್ದ ಬ್ಲೇಜರ್‌ ಅನ್ನು 1985ರಲ್ಲಿ ಭಾರತೀಯ ಕ್ರೀಡಾ ಪ್ರಾಧಿಕಾರದ (ಎಸ್‌ಎಐ) ಆಗಿನ ಕಾರ್ಯದರ್ಶಿಗೆ ಕಾಣಿಕೆ ನೀಡಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

‘ದೆಹಲಿಯಲ್ಲಿ ರಾಷ್ಟ್ರೀಯ ಕ್ರೀಡಾ ಮ್ಯೂಸಿಯಂ ಸ್ಥಾಪಿಸುವ ಪ್ರಸ್ತಾವನೆಯಿದ್ದು, ಇಲ್ಲಿ ಕ್ರೀಡಾಳುಗಳ ವಸ್ತುಗಳನ್ನು ಪ್ರದರ್ಶಿಸಲಾಗುತ್ತದೆ ಎಂದು ಆಗಿನ ಕಾರ್ಯದರ್ಶಿ ತಿಳಿಸಿದ್ದರು. ಆದ್ದರಿಂದ ಒಲಿಂಪಿಕ್ ಬ್ಲೇಜರ್‌, ಪದಕಗಳು ಹಾಗೂ ಇತರೆ ಸ್ಮರಣಿಕೆಗಳನ್ನು ಅವರಿಗೆ ನೀಡಿದ್ದೆ’ ಎಂದು 94 ವರ್ಷದ ಸಿಂಗ್‌ ಈ ಹಿಂದೆ ತಿಳಿಸಿದ್ದರು. ಆದರೆ ಅಂತಹ ಸಂಗ್ರಹಾಲಯ ಸ್ಥಾಪನೆಯೇ ಆಗಿಲ್ಲ.

2012ರಲ್ಲಿ ಲಂಡನ್‌ ಒಲಿಂಪಿಕ್ ವೇಳೆ ನಡೆಸುವ ಅಧಿಕೃತ ವಸ್ತುಪ್ರದರ್ಶನದಲ್ಲಿ ಇರಿಸುವ ಸಲುವಾಗಿ, ಈ ವಸ್ತುಗಳಿಗಾಗಿ ಒಲಿಂಪಿಕ್ಸ್‌ ಸಂಗ್ರಹಾಲಯ ಮನವಿ ಮಾಡಿತ್ತು. ಆದರೆ ಸಿಂಗ್‌ ಅವರು ನೀಡಿದ್ದರು ಎನ್ನಲಾದ ವಸ್ತುಗಳ ಕುರಿತು ಎಸ್‌ಎಐ ಅಧಿಕಾರಿಗಳಿಗೆ ಮಾಹಿತಿಯೇ ಇಲ್ಲ ಎನ್ನುವುದು ಈ ವೇಳೆ ಬಹಿರಂಗವಾಗಿತ್ತು.

ಪ್ರಕರಣ ಕುರಿತು ತನಿಖೆ ನಡೆಸುವಂತೆ ರಾಷ್ಟ್ರೀಯ ಕ್ರೀಡಾ ಮಂಡಳಿಯ (ಎನ್‌ಐಎಸ್‌) ಪಟಿಯಾಲದ ನಿರ್ದೇಶಕರು ಪೊಲೀಸರಿಗೆ ಪತ್ರ ಬರೆದಿದ್ದರು.

Vishwa News 24

Recent Posts

ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ – vishwanews24

ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ‌ ರಾಷ್ಟ್ರೀಯ…

19 hours ago

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌ – vishwanews24

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…

19 hours ago

ದ. ಕ, ಉಡುಪಿ ಸೇರಿದಂತೆ  5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ – vishwanews24

ದ. ಕ, ಉಡುಪಿ ಸೇರಿದಂತೆ  5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …

20 hours ago

ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ – vishwanews24

ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…

23 hours ago

ಮಂಗಳೂರು: ಸ್ಕೂಟರ್‌ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು – vishwanews24

ಮಂಗಳೂರು: ಸ್ಕೂಟರ್‌ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…

23 hours ago

ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ – vishwanews24

ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…

23 hours ago