Featured

ಒಲಿಂಪಿಕ್ ಬ್ಲೇಜರ್ ಕಳವು ಮಾಡಿದ ಮಾನಗೆಟ್ಟವರು : ಎಫ್‌ಐಆರ್ ದಾಖಲು

ಪಟಿಯಾಲ: ಹಿರಿಯ ಹಾಕಿ ಆಟಗಾರ ಬಲಬೀರ್‌ ಸಿಂಗ್‌ ಅವರ ಒಲಿಂಪಿಕ್ ಬ್ಲೇಜರ್‌ ಕಳವಾಗಿದ್ದು, ಈ ಸಂಬಂಧ ಪೊಲೀಸರು ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.

ಸಿಂಗ್‌ ಅವರು 1956ರ ಮೆಲ್ಬರ್ನ್‌ ಒಲಿಂಪಿಕ್‌ನಲ್ಲಿ ತಮಗೆ ದೊರೆತಿದ್ದ ಬ್ಲೇಜರ್‌ ಅನ್ನು 1985ರಲ್ಲಿ ಭಾರತೀಯ ಕ್ರೀಡಾ ಪ್ರಾಧಿಕಾರದ (ಎಸ್‌ಎಐ) ಆಗಿನ ಕಾರ್ಯದರ್ಶಿಗೆ ಕಾಣಿಕೆ ನೀಡಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

‘ದೆಹಲಿಯಲ್ಲಿ ರಾಷ್ಟ್ರೀಯ ಕ್ರೀಡಾ ಮ್ಯೂಸಿಯಂ ಸ್ಥಾಪಿಸುವ ಪ್ರಸ್ತಾವನೆಯಿದ್ದು, ಇಲ್ಲಿ ಕ್ರೀಡಾಳುಗಳ ವಸ್ತುಗಳನ್ನು ಪ್ರದರ್ಶಿಸಲಾಗುತ್ತದೆ ಎಂದು ಆಗಿನ ಕಾರ್ಯದರ್ಶಿ ತಿಳಿಸಿದ್ದರು. ಆದ್ದರಿಂದ ಒಲಿಂಪಿಕ್ ಬ್ಲೇಜರ್‌, ಪದಕಗಳು ಹಾಗೂ ಇತರೆ ಸ್ಮರಣಿಕೆಗಳನ್ನು ಅವರಿಗೆ ನೀಡಿದ್ದೆ’ ಎಂದು 94 ವರ್ಷದ ಸಿಂಗ್‌ ಈ ಹಿಂದೆ ತಿಳಿಸಿದ್ದರು. ಆದರೆ ಅಂತಹ ಸಂಗ್ರಹಾಲಯ ಸ್ಥಾಪನೆಯೇ ಆಗಿಲ್ಲ.

2012ರಲ್ಲಿ ಲಂಡನ್‌ ಒಲಿಂಪಿಕ್ ವೇಳೆ ನಡೆಸುವ ಅಧಿಕೃತ ವಸ್ತುಪ್ರದರ್ಶನದಲ್ಲಿ ಇರಿಸುವ ಸಲುವಾಗಿ, ಈ ವಸ್ತುಗಳಿಗಾಗಿ ಒಲಿಂಪಿಕ್ಸ್‌ ಸಂಗ್ರಹಾಲಯ ಮನವಿ ಮಾಡಿತ್ತು. ಆದರೆ ಸಿಂಗ್‌ ಅವರು ನೀಡಿದ್ದರು ಎನ್ನಲಾದ ವಸ್ತುಗಳ ಕುರಿತು ಎಸ್‌ಎಐ ಅಧಿಕಾರಿಗಳಿಗೆ ಮಾಹಿತಿಯೇ ಇಲ್ಲ ಎನ್ನುವುದು ಈ ವೇಳೆ ಬಹಿರಂಗವಾಗಿತ್ತು.

ಪ್ರಕರಣ ಕುರಿತು ತನಿಖೆ ನಡೆಸುವಂತೆ ರಾಷ್ಟ್ರೀಯ ಕ್ರೀಡಾ ಮಂಡಳಿಯ (ಎನ್‌ಐಎಸ್‌) ಪಟಿಯಾಲದ ನಿರ್ದೇಶಕರು ಪೊಲೀಸರಿಗೆ ಪತ್ರ ಬರೆದಿದ್ದರು.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

16 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

16 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

16 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

16 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

17 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

17 hours ago