Featured

ಒಲಿಂಪಿಕ್ ಬ್ಲೇಜರ್ ಕಳವು ಮಾಡಿದ ಮಾನಗೆಟ್ಟವರು : ಎಫ್‌ಐಆರ್ ದಾಖಲು

ಪಟಿಯಾಲ: ಹಿರಿಯ ಹಾಕಿ ಆಟಗಾರ ಬಲಬೀರ್‌ ಸಿಂಗ್‌ ಅವರ ಒಲಿಂಪಿಕ್ ಬ್ಲೇಜರ್‌ ಕಳವಾಗಿದ್ದು, ಈ ಸಂಬಂಧ ಪೊಲೀಸರು ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.

ಸಿಂಗ್‌ ಅವರು 1956ರ ಮೆಲ್ಬರ್ನ್‌ ಒಲಿಂಪಿಕ್‌ನಲ್ಲಿ ತಮಗೆ ದೊರೆತಿದ್ದ ಬ್ಲೇಜರ್‌ ಅನ್ನು 1985ರಲ್ಲಿ ಭಾರತೀಯ ಕ್ರೀಡಾ ಪ್ರಾಧಿಕಾರದ (ಎಸ್‌ಎಐ) ಆಗಿನ ಕಾರ್ಯದರ್ಶಿಗೆ ಕಾಣಿಕೆ ನೀಡಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

‘ದೆಹಲಿಯಲ್ಲಿ ರಾಷ್ಟ್ರೀಯ ಕ್ರೀಡಾ ಮ್ಯೂಸಿಯಂ ಸ್ಥಾಪಿಸುವ ಪ್ರಸ್ತಾವನೆಯಿದ್ದು, ಇಲ್ಲಿ ಕ್ರೀಡಾಳುಗಳ ವಸ್ತುಗಳನ್ನು ಪ್ರದರ್ಶಿಸಲಾಗುತ್ತದೆ ಎಂದು ಆಗಿನ ಕಾರ್ಯದರ್ಶಿ ತಿಳಿಸಿದ್ದರು. ಆದ್ದರಿಂದ ಒಲಿಂಪಿಕ್ ಬ್ಲೇಜರ್‌, ಪದಕಗಳು ಹಾಗೂ ಇತರೆ ಸ್ಮರಣಿಕೆಗಳನ್ನು ಅವರಿಗೆ ನೀಡಿದ್ದೆ’ ಎಂದು 94 ವರ್ಷದ ಸಿಂಗ್‌ ಈ ಹಿಂದೆ ತಿಳಿಸಿದ್ದರು. ಆದರೆ ಅಂತಹ ಸಂಗ್ರಹಾಲಯ ಸ್ಥಾಪನೆಯೇ ಆಗಿಲ್ಲ.

2012ರಲ್ಲಿ ಲಂಡನ್‌ ಒಲಿಂಪಿಕ್ ವೇಳೆ ನಡೆಸುವ ಅಧಿಕೃತ ವಸ್ತುಪ್ರದರ್ಶನದಲ್ಲಿ ಇರಿಸುವ ಸಲುವಾಗಿ, ಈ ವಸ್ತುಗಳಿಗಾಗಿ ಒಲಿಂಪಿಕ್ಸ್‌ ಸಂಗ್ರಹಾಲಯ ಮನವಿ ಮಾಡಿತ್ತು. ಆದರೆ ಸಿಂಗ್‌ ಅವರು ನೀಡಿದ್ದರು ಎನ್ನಲಾದ ವಸ್ತುಗಳ ಕುರಿತು ಎಸ್‌ಎಐ ಅಧಿಕಾರಿಗಳಿಗೆ ಮಾಹಿತಿಯೇ ಇಲ್ಲ ಎನ್ನುವುದು ಈ ವೇಳೆ ಬಹಿರಂಗವಾಗಿತ್ತು.

ಪ್ರಕರಣ ಕುರಿತು ತನಿಖೆ ನಡೆಸುವಂತೆ ರಾಷ್ಟ್ರೀಯ ಕ್ರೀಡಾ ಮಂಡಳಿಯ (ಎನ್‌ಐಎಸ್‌) ಪಟಿಯಾಲದ ನಿರ್ದೇಶಕರು ಪೊಲೀಸರಿಗೆ ಪತ್ರ ಬರೆದಿದ್ದರು.

Vishwa News 24

Recent Posts

ಉಡುಪಿ : ಬಾಲಕಿ ನಾಪತ್ತೆ -vishwanews24

ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…

8 hours ago

ಮಂಗಳೂರು ವಿಮಾನ ನಿಲ್ದಾಣದಲ್ಲಿ ‘ಉಬರ್’ ಸೇವೆ ಆರಂಭ -vishwanews24

ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…

11 hours ago

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ -vishwanews24

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…

13 hours ago

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ -vishwanews24

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…

15 hours ago

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ -vishwanews24

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…

15 hours ago

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ -vishwanews24

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…

15 hours ago