Featured

ಓಂಕಾರದ ಹಿಂದೆ ಅಡಗಿದೆ ಈ ಸತ್ಯ..!

ಸಾಮಾನ್ಯವಾಗಿ ಎಲ್ಲಾ ಮಂತ್ರಗಳೂ ಓಂಕಾರದಿಂದ ಶುರುವಾಗುತ್ತವೆ. ಯೋಗದಲ್ಲೂ ಓಂಕಾರೋಪಾಸನೆ ಇದೆ. ಕೇವಲ ಓಂ ಎಂದು ದೀರ್ಘವಾಗಿ ಪಠಿಸುವುದರಿಂದಲೇ ಹಲವು ಲಾಭಗಳಿವೆ ಎಂದು ಯೋಗ ಗುರುಗಳು ಹೇಳುತ್ತಾರೆ. ಹಾಗೆ ಓಂಕಾರವನ್ನು ಪಠಿಸುವುದಕ್ಕೂ ಬೇರೆ ಬೇರೆ ವಿಧಾನಗಳಿವೆ. ಒಟ್ಟಿನಲ್ಲಿ ಭಾರತೀಯರಿಗೆ ಓಂಕಾರ ಬಹಳ ಪವಿತ್ರ.

ಜಗತ್ತು ಹುಟ್ಟಿದ್ದೇ ಓಂಕಾರದಿಂದ ಎಂಬ ವಾದವಿದೆ. ಇದನ್ನು ಕಾಸ್ಮಿಕ್ ಸೌಂಡ್ ಎಂದು ಕರೆಯುತ್ತಾರೆ. ಬಿಗ್ ಬ್ಯಾಂಗ್ ಥಿಯರಿಯ ಪ್ರಕಾರ ಜಗತ್ತು ಹುಟ್ಟುವುದಕ್ಕೆ ಓಂಕಾರವೇ ಕಾರಣವಂತೆ. ಅದನ್ನು ಪಕ್ಕಕ್ಕಿಟ್ಟು ನೋಡಿದರೂ, ಓಂಕಾರದಲ್ಲಿರುವ ಧ್ವನಿ, ತರಂಗ ಹಾಗೂ ನಾದಕ್ಕೆ ಭೌತಶಾಸ್ತ್ರೀಯ ಮಹತ್ವಗಳಿವೆ.

ಓಂಕಾರದಲ್ಲಿ ಉಕಾರ, ಅಕಾರ ಹಾಗೂ ಮಕಾರಗಳು ಸೇರಿರುವುದರಿಂದ ಅವುಗಳನ್ನು ಒಟ್ಟಿಗೇ ಉಚ್ಛಾರ ಮಾಡಿದಾಗ ಹೊಟ್ಟೆ, ಬೆನ್ನುಹುರಿ, ಗಂಟಲು, ಮೂಗು ಹಾಗೂ ಮೆದುಳಿನ ಭಾಗಗಳು ಕ್ರಿಯಾಶೀಲವಾಗುತ್ತವೆ. – ಆಗ ಹೊಟ್ಟೆಯಿಂದ ಶಕ್ತಿಯು ಮೆದುಳಿನವರೆಗೆ ಸಂಚರಿಸಿ, ಇಡೀ ದೇಹವನ್ನು ಚುರುಕುಗೊಳಿಸುತ್ತದೆ.
– ಇದರಿಂದ ಏಕಾಗ್ರತೆ ಹೆಚ್ಚುತ್ತದೆ. ಮನಸ್ಸಿಗೆ ಶಾಂತಿ ಸಿಗುತ್ತದೆ ಹಾಗೂ ಒತ್ತಡ ಕಡಿಮೆಯಾಗುತ್ತದೆ.
– ಎಲ್ಲ ಲೌಕಿಕ ಯೋಚನೆಗಳೂ ಹೊರಟುಹೋಗಿ ಮನಸ್ಸು ಆನಂದದಲ್ಲಿ ಮುಳುಗುತ್ತದೆ. ಈ ಬಗ್ಗೆ ವೈಜ್ಞಾನಿಕ ಅಧ್ಯಯನಗಳೂ ನಡೆದಿವೆ. – ಯಾವತ್ತೂ ಓಂಕಾರವನ್ನು ಪಠಿಸದೆ ಇದ್ದವರ ಮೆದುಳಿನ ತರಂಗಗಳನ್ನು ಅಧ್ಯಯನ ಮಾಡಿ, ನಂತರ ಅವರಿಗೆ ನಿಯಮಿತವಾಗಿ ಓಂಕಾರ ಪಠಿಸಲು ಹೇಳಿ, ನಂತರ ಅವರ ಮೆದುಳಿನ ತರಂಗವನ್ನು ಅಧ್ಯಯನ ಮಾಡಿದಾಗ ಅವರಲ್ಲಿ ಏಕಾಗ್ರತೆ, ಮಾನಸಿಕ ಶಾಂತಿ ಹೆಚ್ಚಿರುವುದು ಮತ್ತು ಒತ್ತಡ ಕಡಿಮೆಯಾಗಿರುವುದು ಕಂಡುಬಂದಿದೆ.
– ಓಂಕಾರವನ್ನು ಪಠಿಸುವುದರಿಂದ ರಕ್ತದೊತ್ತಡ ಕೂಡ ಕಡಿಮೆಯಾದ ಉದಾಹರಣೆಯಿದೆ.
– ಮನುಷ್ಯನ ಶಾರೀರಿಕ ಹಾಗೂ ಮಾನಸಿಕ ಸ್ವಾಸ್ಥ್ಯವನ್ನು ಹೆಚ್ಚಿಸುವ ಶಕ್ತಿ ಓಂಕಾರಕ್ಕಿದೆ ಎಂದೇ ಯೋಗಿಗಳು ಇದರ ಪಠಣಕ್ಕೆ ಧಾರ್ಮಿಕ ಲೇಪನ ಮಾಡಿರಿಸಿರಬಹುದು.

Vishwa News 24

Recent Posts

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

8 hours ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

9 hours ago

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

1 day ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

1 day ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

1 day ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

1 day ago