Featured

ಓಮಾನ್ ಮಸ್ಕತ್‌ನಲ್ಲಿ ಕರ್ನಾಟಕ ಜಾನಪದ ಪರಿಷತ್ತು ಘಟಕ ಉದ್ಘಾಟನೆ – vishwanews24

ಓಮಾನ್ ಮಸ್ಕತ್‌ನಲ್ಲಿ ಕರ್ನಾಟಕ ಜಾನಪದ ಪರಿಷತ್ತು ಘಟಕ ಉದ್ಘಾಟನೆ

ಮಸ್ಕತ್, ಓಮಾನ್: ಕರ್ನಾಟಕ ಜಾನಪದ ಪರಿಷತ್ತು ಮಸ್ಕತ್ ಓಮಾನ್ ಘಟಕವನ್ನು ಸನ್ಮಾನ್ಯ ಶ್ರೀ ಶಿವಾನಂದ ಕೋಟ್ಯಾನ್ ಕಟಪಾಡಿ ಇವರ ಅಧ್ಯಕ್ಷತೆಯಲ್ಲಿ ಮಸ್ಕತ್ತಿನ ಸ್ಟಾರ್ ಆಫ್ ಕೊಚ್ಚಿನ್ ಸಭಾಂಗಣದಲ್ಲಿ ಅದ್ದೂರಿಯಾಗಿ ಉದ್ಘಾಟಿಸಲಾಯಿತು.

ಕರ್ನಾಟಕ ಜಾನಪದ ಪರಿಷತ್ತು ಬೆಂಗಳೂರು ಇದರ ಅಧ್ಯಕ್ಷರಾದ ಸನ್ಮಾನ್ಯ ಡಾ. ಹಿ. ಚಿ. ಬೋರಲಿಂಗಯ್ಯ ಅವರು ಓಮಾನ್ ದೇಶದ ಗಣ್ಯರು‌, ಕನಾರ್ಟಕ ಗಡಿ ಪ್ರಾಧಿಕಾರದ ಸದಸ್ಯರಾದ ಶ್ರೀ ಎ.ಆರ್ ಸುಬ್ಬಯ್ಯ ಕಟ್ಟೆ ಕಾಸರಗೋಡು ಗಡಿನಾಡು ಪ್ರಾಧಿಕಾರದ ಸದಸ್ಯ ಶ್ರೀ ಝೆಡ್ ಎ ಕೆಯ್ಯರ್ ಉಪಸ್ಥಿತಿಯಲ್ಲಿ ಘಟಕವನ್ನು ಉದ್ಘಾಟಿಸಲಾಯಿತು. ಈ ಸಂದರ್ಭದಲ್ಲಿ ಮಸ್ಕತ್ತಿನ ಜಾನಪದ ಅಸಕ್ತರು, ಸ್ಥಳೀಯ ಕಲಾವಿದರು, ಗಾಯಕರಿಂದ ಹಲವು ಮನಮೋಹಕ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

ಓಮಾನ್ ಕನ್ನಡ ಸಂಘದ ಅಧ್ಯಕ್ಷರಾದ ಶ್ರೀ ಮಂಜುನಾಥ ಸಂಗಟ್ಟಿ, ಶ್ರೀ ಎಸ್.ಕೆ. ಪೂಜಾರಿ, ಶ್ರೀ ಶಶಿಧರ ಶೆಟ್ಟಿ ಮಲ್ಲಾರ್ ಮತ್ತು ವಿವಿಧ ಸಂಘ ಮತ್ತು ಕೂಟಗಳ ಪ್ರಮುಖರು ಹಾಗೂ ಘಟಕದ ಕಾರ್ಯಕಾರಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಡಾ. ಬೋರಲಿಂಗಯ್ಯ ನವರು ಕರ್ನಾಟಕದ ವೈವಿಧ್ಯಮಯ ಜಾನಪದ ಸಂಸ್ಕೃತಿಯ ಮಹತ್ವವನ್ನು ವಿವರಿಸಿದರು. ಎಚ್.ಎಲ್. ನಾಗೇಗೌಡರ ನೇತೃತ್ವದಲ್ಲಿ ಸ್ಥಾಪಿತವಾದ ಯೂನೆಸ್ಕೋ ಮಾನ್ಯತೆ ಪಡೆದಿರುವ ಜಾನಪದ ಲೋಕ ಕುರಿತು ಮಾಹಿತಿಯನ್ನು ಹಂಚಿಕೊಂಡರು.

ಸ್ಥಳೀಯ ಅನಿವಾಸಿಗಳು ತಮ್ಮ ಕಲೆ, ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಉದ್ದೇಶದಿಂದ ಈ ಘಟಕವನ್ನು ಸ್ಥಾಪಿಸಲಾಗಿದೆ. ನಮ್ಮ ನಾಡು ನುಡಿಯ ಬಗ್ಗೆ ವಾರ್ಷಿಕವಾಗಿ ನಡೆಯುವ ವೈವಿಧ್ಯಮಯ ಕಾರ್ಯಕ್ರಮಗಳಿಂದ ಇಲ್ಲಿ ಘಟಕದ ಅವಶ್ಯಕತೆ ಇದೆ ಎಂದು ಮನಗಂಡ ರಾಜ್ಯದಿಂದ ಅಗಮಿಸಿದ ಅತಿಥಿಗಳ ಸೂಚನೆ ಮತ್ತು ಮಾರ್ಗದರ್ಶನದಲ್ಲಿ ಫಟಕ ಸ್ಥಾಪಿಸಲಾಯಿತು ಎಂದು ನೂತನ ಘಟಕದ ಅದ್ಯಕ್ಷರಾದ ಶಿವಾನಂದ ಕೋಟ್ಯಾನ್ ವಿವರಿಸಿದರು. .

ಮಸ್ಕತ್ ನ ಸಮಾಜಿಕ ಸಹಕಾರ ನೀಡುವ ಶ್ರೀ ಗಣೇಶ್ ಶೆಟ್ಟಿ ಮತ್ತು ಸತೀಶ್ ಪೂಜಾರಿ ಬರ್ಕ ಹಾಗೂ ಸ್ಕೂಲ್ ಲೀಡರ್ ಚಲನಚಿತ್ರದ ನಿರ್ಮಾಪಕರಾದ ಕಟಪಾಡಿ ಶ್ರೀ ಸತ್ಯೇಂದ್ರ ಪೈ , ನಿರ್ದೇಶಕ ಶ್ರೀ ರಝಾಕ್ ಪೂತ್ತೂರು, ಪತ್ರಕರ್ತ ಶ್ರೀ ಪ್ರಕಾಶ್ ಸುವರ್ಣ, ಮೂರು ಮುತ್ತು ಕಲಾವಿದ ಶ್ರೀ ನಾಗೇಶ್ ಕಾಮತ್, ಛಾಯಾಗ್ರಾಹಕ ಶ್ರೀ ಮೋಹನ್ ಪಡ್ರೆ ,ಯುವ ಜಾದುಗಾರ ಪ್ರಥಮ್ ಕಾಮತ್ ಇವರನ್ನು ಸಮಾರಂಭದಲ್ಲಿ ಸನ್ಮಾನಿಸಲಾಯಿತು.
ಮಾಸ್ಟರ್ ಅಯುಷ್ ಮರಾಠೆ ಹಾಡು ಮತ್ತು ಮಾಸ್ಟರ್ ಹರ್ಪಿಲ್ ಅಂಚನ್ ನವರ ಜಾನಪದ ಕಥೆಯು ಮನೂರಂಜನೆಯಾಗಿ ಮೂಡಿ ಬಂದಿತು.
ಕಾರ್ಯಕ್ರಮದಲ್ಲಿ ಫಟಕದ ಕಾರ್ಯದರ್ಶಿ ಶ್ರೀಧರ್ ಶೆಟ್ಟಿ ವಂದಿಸಿದರು, ಗೌರವ ಸಲಹೆಗಾರದ ಶ್ರೀ ಯುವರಾಜ್ ಸಾಲ್ಯಾನ್, ಸುರೇಂದ್ರ ಅಮಿನ್, ಜೂಯಿಸನ್, ಅನಿಲ್ ಪೂತ್ತೂರು, ಬಾಲಕೃಷ್ಣ ಕೋಟ್ಯಾನ್ ಕಾಪು, ದಿನಕರ ಸುವರ್ಣ ಕಾರ್ಯಕ್ರಮ ನಿರ್ವಹಿಸಿದರು ಹಾಗೂ ಅಕ್ಷಯ ಮೂಡಬಿದ್ರೆಯವರು ಕಾರ್ಯಕ್ರಮ ನಿರೂಪಿಸಿದರು.

Vishwa News 24

Recent Posts

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

12 hours ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

13 hours ago

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ – vishwanews24

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…

13 hours ago

ಟೈಮಿಂಗ್‌ ವಿವಾದ: ಕಾಪು ಸರ್ವಿಸ್ ರಸ್ತೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ – vishwanews24

ಟೈಮಿಂಗ್‌ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…

15 hours ago

ಉಡುಪಿ: ‘ಭಗವತಿ ಟೂರಿಸ್ಟ್’ ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ – vishwanews24

ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…

15 hours ago

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ – vishwanews24

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…

15 hours ago