Featured

ಓಮಿಕ್ರಾನ್ ಆತಂಕ : ಜಿಲ್ಲಾಮಟ್ಟದಲ್ಲಿ ಕಠಿಣ ನಿಯಮಗಳನ್ನು ಜಾರಿಗೊಳಿಸಿ : ಎಲ್ಲಾ ರಾಜ್ಯಗಳಿಗೆ ಕೇಂದ್ರ ಸರಕಾರ ಸೂಚನೆ  – Vishwanews24

ಓಮಿಕ್ರಾನ್ ಆತಂಕ : ಜಿಲ್ಲಾಮಟ್ಟದಲ್ಲಿ ಕಠಿಣ ನಿಯಮಗಳನ್ನು ಜಾರಿಗೊಳಿಸಿ : ಎಲ್ಲಾ ರಾಜ್ಯಗಳಿಗೆ ಕೇಂದ್ರ ಸರಕಾರ ಸೂಚನೆ  – Vishwanews24

ನವದೆಹಲಿ: ಓಮಿಕ್ರಾನ್ ರೂಪಾಂತರವು ಡೆಲ್ಟಾಕ್ಕಿಂತ ಕನಿಷ್ಠ ಮೂರು ಪಟ್ಟು ಹೆಚ್ಚು ಸಾಂಕ್ರಾಮಿಕವಾಗಿದ್ದು, ಜಿಲ್ಲಾ ಮಟ್ಟದಲ್ಲಿ ಕಠಿಣ ನಿಯಮಗಳನ್ನು ಜಾರಿಗೊಳಿಸಲು ಕೇಂದ್ರ ಸರಕಾರವು ಎಲ್ಲಾ ರಾಜ್ಯಗಳಿಗೆ ಸೂಚನೆ ನೀಡಿದೆ.

ಭಾರತದಲ್ಲಿ ಕೋವಿಡ್ 19 ಪ್ರಕರಣಗಳ ಉಲ್ಬಣದ ಆರಂಭಿಕ ಚಿಹ್ನೆಗಳು ಮತ್ತು ದೇಶದ ವಿವಿಧ ಭಾಗಗಳಲ್ಲಿ ಓಮಿಕ್ರಾನ್ ರೂಪಾಂತರದ ಹೆಚ್ಚಿದ ಪತ್ತೆ ಹಚ್ಚುವಿಕೆಯ ದೃಷ್ಟಿಯಿಂದ ಕಠಿಣ ಕ್ರಮಗಳ ಅಗತ್ಯ ಇದೆ ಎಂದು ಕೇಂದ್ರ ಸರಕಾರ ತಿಳಿಸಿದೆ.

ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರು ಎಲ್ಲಾ ಮುಖ್ಯ ಕಾರ್ಯದರ್ಶಿಗಳಿಗೆ ಬರೆದ ಪತ್ರದಲ್ಲಿ, ಒಂದು ವಾರದ ಅವಧಿಯಲ್ಲಿ ಕೋವಿಡ್‌ ದೃಢಪಡುವ ಪ್ರಮಾಣವು ಶೇ 10ರಷ್ಟು ಮತ್ತು ಅದಕ್ಕಿಂತ ಹೆಚ್ಚು ಇರುವ ಜಿಲ್ಲೆಗಳಲ್ಲಿ ನಿಯಂತ್ರಣ ಕ್ರಮಗಳು ಮತ್ತು ನಿರ್ಬಂಧಗಳನ್ನು ಜಾರಿಗೆ ತನ್ನಿ. ಜಿಲ್ಲೆಯಲ್ಲಿ ಲಭ್ಯವಿರುವ ತೀವ್ರ ನಿಗಾ ಘಟಕಗಳು ಮತ್ತು ಆಮ್ಲಜನಕ ಪೂರೈಕೆ ವ್ಯವಸ್ಥೆ ಇರುವ ಹಾಸಿಗೆಗಳ ಭರ್ತಿ ಪ್ರಮಾಣವು ಶೇ 40ನ್ನು ದಾಟಿದರೆ, ಆ ಜಿಲ್ಲೆಗಳಲ್ಲೂ ನಿಯಂತ್ರಣ ಕ್ರಮ ಮತ್ತು ನಿರ್ಬಂಧಗಳನ್ನು ಜಾರಿಗೆ ತನ್ನಿ’ ಎಂದು ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರು ರಾಜ್ಯ ಸರ್ಕಾರಗಳಿಗೆ ಬರೆದಿರುವ ಪತ್ರದಲ್ಲಿ ಸೂಚಿಸಿದ್ದಾರೆ.

ಡೆಲ್ಟಾಗಿಂತ ಓಮೈಕ್ರಾನ್‌ ರೂಪಾಂತರ ತಳಿಯು ಮೂರು ಪಟ್ಟು ಹೆಚ್ಚು ತೀವ್ರವಾಗಿ ಹರಡುತ್ತದೆ. ಜತೆಗೆ ದೇಶದ ಹಲವೆಡೆ ಇನ್ನೂ ಡೆಲ್ಟಾ ಪ್ರಕರಣಗಳು ಇವೆ. ಇವುಗಳನ್ನು ಗಮನದಲ್ಲಿ ಇರಿಸಿಕೊಂಡು ಜಿಲ್ಲಾ ಮಟ್ಟದಲ್ಲಿ ಅಗತ್ಯ ನಿಯಂತ್ರಣ ಕ್ರಮಗಳನ್ನು ತೆಗೆದುಕೊಳ್ಳುವ ಅಗತ್ಯವಿದೆ’ ಎಂದು ಅವರು ಪತ್ರದಲ್ಲಿ ವಿವರಿಸಿದ್ದಾರೆ.

Vishwa News 24

Recent Posts

ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು -vishwanews24

ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು ಉಡುಪಿ: ಮುದರಂಗಡಿ ಗ್ರಾ.ಪಂ ಮಾಜಿ…

5 hours ago

ಮುದರಂಗಡಿ ಡೇವಿಡ್‌ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ -vishwanews24

ಮುದರಂಗಡಿ ಡೇವಿಡ್‌ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ ಉಡುಪಿ: ಮುದರಂಗಡಿಯಲ್ಲಿ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಡೇವಿಡ್‌…

7 hours ago

ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು -vishwanews24

ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು ಶಿಮ್ಲಾ :…

7 hours ago

ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ -vishwanews24

ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ 32ನೇ ಕಂತಿನ ಹಣ ಬಿಡುಗಡೆಯಾಗಿದೆ.…

8 hours ago

ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ -vishwanews24

ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ ಮೈಸೂರು: ನನ್ನ ಅವಶ್ಯಕತೆ ಇರಲಿಲ್ಲವೇನೋ ?…

8 hours ago

ಶಿರ್ವ: ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು -vishwanews24

ಶಿರ್ವ: ರಸ್ತೆ ದಾಟಲು ನಿಂತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು ಶಿರ್ವ : ರಸ್ತೆ ದಾಟಲು ನಿಂತಿದ್ದ…

8 hours ago