ಓಮಿಕ್ರಾನ್ ಆತಂಕ : ಮದುವೆ ಸಮಾರಂಭಗಳಲ್ಲಿ 500 ಮಂದಿಗಷ್ಟೇ ಅವಕಾಶ , ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ – Vishwanews24

Featured, ರಾಜ್ಯ ನ್ಯೂಸ್

ಓಮಿಕ್ರಾನ್ ಆತಂಕ : ಮದುವೆ ಸಮಾರಂಭಗಳಲ್ಲಿ 500 ಮಂದಿಗಷ್ಟೇ ಅವಕಾಶ , ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ – Vishwanews24

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಓಮಿಕ್ರಾನ್ ಸೋಂಕು ಪತ್ತೆಯಾಗಿದ್ದು, ಆತಂಕ ಮೂಡಿಸಿದೆ. ಹೊಸ ತಳಿ ನಿಯಂತ್ರಣಕ್ಕಾಗಿ ಸರ್ಕಾರ ಹಲವು ನಿರ್ಬಂಧಗಳನ್ನು ವಿಧಿಸಲು ಮುಂದಾಗಿದೆ. ಮದುವೆ ಸಮಾರಂಭಗಳಲ್ಲಿ ಪಾಲ್ಗೊಳ್ಳುವವರ ಸಂಖ್ಯೆಯನ್ನು 500ಕ್ಕೆ ಮಿತಿಗೊಳಿಸಲು ಸರ್ಕಾರ ಮಾರ್ಗಸೂಚಿ ಹೊರಡಿಸಿದೆ.

ರಾಜ್ಯದಲ್ಲಿ ಓಮಿಕ್ರಾನ್ ಪತ್ತೆಯಾಗುತ್ತಿದ್ದಂತೆ ಎಚ್ಚೆತ್ತುಕೊಂಡಿರುವ ಸರ್ಕಾರ ತುರ್ತು ಸಭೆ ನಡೆಸಿತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಜರುಗಿತು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಆರ್.ಅಶೋಕ್, ಓಮಿಕ್ರಾನ್ ನಿಯಂತ್ರಿಸುವ ಉದ್ದೇಶದಿಂದ ಹಲವು ನಿರ್ಬಂಧಗಳನ್ನು ವಿಧಿಸುವ ಬಗ್ಗೆ ಚರ್ಚೆ ನಡೆಸಲಾಗಿದೆ. ಮದುವೆ ಸಮಾರಂಭಗಳಲ್ಲಿ ಪಾಲ್ಗೊಳ್ಳುವವರ ಸಂಖ್ಯೆಯನ್ನು 500ಕ್ಕೆ ಸೀಮಿತಗೊಳಿಸಲು ನಿರ್ಧರಿಸಲಾಗಿದೆ. ಯಾವುದೇ ಸಮಾರಂಭಗಳಲ್ಲಿ ಹೆಚ್ಚು ಜನರು ಪಾಲ್ಗೊಳ್ಳುವುದರಿಂದ ಸೋಂಕು ವೇಗವಾಗಿ ಹರಡುವ ಭೀತಿ ಇದೆ. ಅದನ್ನು ಈಗಿನಿಂದಲೇ ತಪ್ಪಿಸುವುದು ಅನಿವಾರ್ಯವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

 

ಮೊಟ್ಟ ಮೊದಲ ಬಾರಿಗೆ ದಕ್ಷಿಣ ಆಫ್ರಿಕಾದಲ್ಲಿ ಕಾಣಿಸಿಕೊಂಡಿದ್ದ ಕೊರೊನಾ ವೈರಸ್ ಹೊಸ ರೂಪಾಂತರಿ ಓಮಿಕ್ರಾನ್ ಈಗ ಭಾರತಕ್ಕೂ ಕಾಲಿಟ್ಟಿದೆ. ಕರ್ನಾಟಕದಲ್ಲಿ ಎರಡು ಪ್ರಕರಣಗಳು ದೃಢಪಟ್ಟಿದ್ದು, ಸೋಂಕಿತರಿಬ್ಬರೂ ಬೆಂಗಳೂರಿನವರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಹಲವು ಮುಂಜಾಗ್ರತೆ ಕ್ರಮಕೈಗೊಳ್ಳಲು ಸರ್ಕಾರ ಮುಂದಾಗಿದೆ.

ಬ್ರೇಕಿಂಗ್ : ಒಮಿಕ್ರಾನ್ ಕಂಟಕ – ರಾಜ್ಯ ಸರ್ಕಾರದಿಂದ ಕಠಿಣ ನಿಯಮ ಜಾರಿಗೆ – Vishwanews24