ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ಹೊಸ ರೂಪಾಂತರಿ ಓಮಿಕ್ರಾನ್ ಸೋಂಕು ಪ್ರಕರಣಗಳ ಸಂಖ್ಯೆ ವ್ಯಾಪಕವಾಗಿ ಹರಡುತ್ತಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ನಡೆಯಲಿದೆ.
ನಾಳಿನ ಸಭೆಯಲ್ಲಿ ರಾಜ್ಯದಲ್ಲಿ ಓಮಿಕ್ರಾನ್ ಸೋಂಕು ಪ್ರಕರಣಗಳ ಸ್ಥಿತಿಗತಿ ಬಗ್ಗೆ ಚರ್ಚೆ ನಡೆಯಲಿದೆ. ಅಲ್ಲದೇ ನೈಟ್ ಕರ್ಫ್ಯೂ ಜಾರಿ ಬಗ್ಗೆ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ. ಜೊತೆಗೆ ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಸೂಕ್ತ ಕ್ರಮಕೈಗೊಳ್ಳುವ ಚಿಂತನೆಯನ್ನೂ ಸರ್ಕಾರ ನಡೆಸಿದೆ. ಪ್ರಕರಣಗಳ ಸಂಖ್ಯೆ ಏರುತ್ತಿರುವುದಕ್ಕೆ ಸಿಎಂ ಬೊಮ್ಮಾಯಿ ಆತಂಕ ವ್ಯಕ್ತಪಡಿಸಿದ್ದಾರೆ.
ರಾಜ್ಯದಲ್ಲಿ ಓಮಿಕ್ರಾನ್ ಸೋಂಕು ಪ್ರಕರಣಗಳ ಸಂಖ್ಯೆ ಏರುತ್ತಿದೆ. ಈವರೆಗೆ 31 ಓಮಿಕ್ರಾನ್ ಪ್ರಕರಣಗಳು ದೃಢಪಟ್ಟಿವೆ. ದೇಶದಲ್ಲಿ ಅತಿಹೆಚ್ಚು ಓಮಿಕ್ರಾನ್ ಸೋಂಕು ಪ್ರಕರಣಗಳನ್ನು ಹೊಂದಿರುವ ರಾಜ್ಯಗಳಲ್ಲಿ ಕಾರ್ನಾಟಕ 7ನೇ ಸ್ಥಾನದಲ್ಲಿದೆ.
ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವುದರಿಂದ ಈಗಾಗಲೇ ಮಹಾರಾಷ್ಟ್ರ, ಉತ್ತರ ಪ್ರದೇಶ, ಮಧ್ಯಪ್ರದೇಶದಲ್ಲಿ ನೈಟ್ ಕರ್ಫ್ಯೂ ಜಾರಿಗೊಳಿಸಲಾಗಿದೆ. ಇದೇ ಕ್ರಮವನ್ನು ರಾಜ್ಯದಲ್ಲೂ ಮತ್ತೆ ಜಾರಿಗೊಳಿಸುವ ಚಿಂತನೆಯನ್ನು ರಾಜ್ಯ ಸರ್ಕಾರ ನಡೆಸಿದೆ.
ಕಾರವಾರ : ವೀರ ಯೋಧ ಹುತಾತ್ಮ ವಿನೋದ ನಾಯಕ್ ಅವರ 21ನೇ ಪುಣ್ಯತಿಥಿ ಹಾಗೂ ಸ್ಮಾರಕಕ್ಕೆ ನೂತನ ಕಾಂಪೌಂಡ್ ಗೋಡೆ…
ಕಾನ್ಪುರದಲ್ಲಿ ಖಾಸಗಿ ತರಬೇತಿ ವಿಮಾನ ಅಪಘಾತ: ಉಡುಪಿ ಮೂಲದ ಪೈಲಟ್ ಸಾವು ಉಡುಪಿ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಆಗಸ್ಟ್ 27ರಂದು…
ಅಮೆರಿಕದ ಪ್ರತಿಷ್ಠಿತ ಗ್ರ್ಯಾಂಡ್ ಚೆಸ್ ಟೂರ್ ಗೆದ್ದು ಇತಿಹಾಸ ನಿರ್ಮಿಸಿದ ಪ್ರಜ್ಞಾನಂದ ವಾಷಿಂಗ್ಟನ್: ಭಾರತದ ಯುವ ಗ್ರ್ಯಾಂಡ್ಮಾಸ್ಟರ್ ಆರ್. ಪ್ರಜ್ಞಾನಂದ…
ಮೈಸೂರು ದಸರಾಕ್ಕೆ ಅದ್ದೂರಿ ಸಿದ್ಧತೆ : ಅರಮನೆ ಪ್ರವೇಶಿಸಿದ ಗಜಪಡೆಗೆ ಭರ್ಜರಿ ಸ್ವಾಗತ ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ…
ಕುಂದಾಪುರ : ಗಂಗೊಳ್ಳಿ ಸಮುದ್ರದಲ್ಲಿ ಮುಳುಗಿದ್ದ ದೋಣಿಯ ಅವಶೇಷ ಪತ್ತೆ ಕುಂದಾಪುರ : ಗಂಗೊಳ್ಳಿ ನದೀಮುಖದ ಬಳಿ ಬುಧವಾರ ಸಮುದ್ರದಲ್ಲಿ…
2019 – 2023ರ ವರೆಗೆ ಮುಡಾದಿಂದ ಹಂಚಿಕೆಯಾದ ಎಲ್ಲಾ 50:50 ಸೈಟುಗಳು ರದ್ದು .. ಅಕ್ರಮ ನಡೆದಿದ್ದರೆ 2018ರ ಹಿಂದೆ…