ನವದೆಹಲಿ: ಮಹಾಮಾರಿ ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಕಳೆದ ಎರಡು ವರ್ಷದಿಂದ ನಿಗದಿತ ಅಂತರಾಷ್ಟ್ರೀಯ ವಿಮಾನ ಸೇವೆ ಸ್ಥಗಿತಗೊಳಿಸಲಾಗಿದ್ದು, ಇದೀಗ ಅದನ್ನು ಮುಂದಿನ ವರ್ಷ ಜನವರಿ 31ರವರೆಗೆ ವಿಸ್ತರಿಸಲಾಗಿದೆ.
ಅಂತಾರಾಷ್ಟ್ರೀಯ ವಾಣಿಜ್ಯ ಪ್ರಯಾಣಿಕರ ಸೇವೆಗೆ ವಿಧಿಸಲಾಗಿದ್ದ ನಿರ್ಬಂಧವನ್ನು 2022, ಜನವರಿ 31ರ ವರೆಗೆ ವಿಸ್ತರಿಸಲಾಗಿದೆ ಎಂದು ನಾಗರಿಕ ವಿಮಾನಯಾನ ನಿರ್ದೇಶನಾಲಯ(ಡಿಜಿಸಿಎ) ಗುರುವಾರ ಅಧಿಸೂಚನೆ ಹೊರಡಿಸಿದೆ.
ಗೃಹ ಸಚಿವಾಲಯದಿಂದ ಅನುಮತಿ ಪಡೆದವರು ಮಾತ್ರವೇ ವಿಮಾನದಲ್ಲಿ ಪ್ರಯಾಣಿಸಬಹುದಾಗಿದೆ ಮತ್ತು ಈ ನಿರ್ಬಂಧವೂ ಕಾರ್ಗೋ ವಿಮಾನ ಸೇವೆಗೆ ಅನ್ವಯವಾಗುವುದಿಲ್ಲ ಎಂದು ಡಿಜಿಸಿಎ ಸ್ಪಷ್ಟಪಡಿಸಿದೆ.
ಡಿಜಿಸಿಎ ಡಿಸೆಂಬರ್ 15 ರಿಂದ ನಿಗದಿತ ಅಂತರಾಷ್ಟ್ರೀಯ ವಿಮಾನ ಸೇವೆ ಆರಂಭಿಸಲು ನಿರ್ಧರಿಸಿತ್ತು. ಆದರೆ ಕೊರೋನಾ ಹೊಸ ರೂಪಾಂತರಿ ಓಮಿಕ್ರಾನ್ ಪ್ರಕರಣಗಳು ವರದಿಯಾದ ನಂತರ ತನ್ನ ನಿರ್ಧಾರ ಬದಲಿಸಿದ ಡಿಜಿಸಿಎ ಮುಂದಿನ ಜನವರಿ 31ರ ವರೆಗೆ ಅಂತರಾಷ್ಟ್ರೀಯ ವಿಮಾನಗಳ ಮೇಲಿನ ನಿರ್ಬಂಧವನ್ನು ಮುಂದುವರೆಸಿದೆ.
ಕಳೆದ ವರ್ಷ ಮಾರ್ಚ್ 25ರಂದು ಕೊರೋನಾ ವೈರಸ್ ನಿಯಂತ್ರಿಸುವುದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶಾದ್ಯಂತ ಲಾಕ್ ಡೌನ್ ಘೋಷಿಸಿದ ನಂತರ ಎಲ್ಲಾ ದೇಶಿಯ ಮತ್ತು ಅಂತರಾಷ್ಟ್ರೀಯ ವಿಮಾನ ಸೇವೆಯನ್ನು ರದ್ದುಗೊಳಿಸಲಾಗಿತ್ತು.
ಮೇ 2020 ರಿಂದ ವಂದೇ ಭಾರತ್ ಮಿಷನ್ ಅಡಿಯಲ್ಲಿ ಮತ್ತು ಜುಲೈನಿಂದ ಆಯ್ದ ದೇಶಗಳೊಂದಿಗೆ ದ್ವಿಪಕ್ಷೀಯ ‘ಏರ್ ಬಬಲ್’ ವ್ಯವಸ್ಥೆಗಳ ಅಡಿಯಲ್ಲಿ ವಿಶೇಷ ಅಂತರಾಷ್ಟ್ರೀಯ ವಿಮಾನಯಾನವನ್ನು ಅನುಮತಿಸಲಾಗಿದೆ.
ಭಾರತವು ಯುನೈಟೆಡ್ ಸ್ಟೇಟ್ಸ್, ಯುನೈಟೆಡ್ ಕಿಂಗ್ಡಮ್, ಯುನೈಟೆಡ್ ಅರಬ್ ಎಮಿರೇಟ್ಸ್, ಕೀನ್ಯಾ, ಭೂತಾನ್ ಮತ್ತು ಫ್ರಾನ್ಸ್ ಸೇರಿದಂತೆ ಹಲವಾರು ದೇಶಗಳೊಂದಿಗೆ ಏರ್ ಬಬಲ್ ಒಪ್ಪಂದಗಳನ್ನು ರೂಪಿಸಿದೆ. ಎರಡು ದೇಶಗಳ ನಡುವಿನ ಏರ್ ಬಬಲ್ ಒಪ್ಪಂದದಡಿಯಲ್ಲಿ, ವಿಶೇಷ ಅಂತರಾಷ್ಟ್ರೀಯ ವಿಮಾನಗಳನ್ನು ತಮ್ಮ ವಿಮಾನಯಾನ ಸಂಸ್ಥೆಗಳು ಪ್ರಾಂತ್ಯಗಳ ನಡುವೆ ನಿರ್ವಹಿಸಬಹುದು.
ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು ಉಡುಪಿ: ಮುದರಂಗಡಿ ಗ್ರಾ.ಪಂ ಮಾಜಿ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ ಉಡುಪಿ: ಮುದರಂಗಡಿಯಲ್ಲಿ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಡೇವಿಡ್…
ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು ಶಿಮ್ಲಾ :…
ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ 32ನೇ ಕಂತಿನ ಹಣ ಬಿಡುಗಡೆಯಾಗಿದೆ.…
ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ ಮೈಸೂರು: ನನ್ನ ಅವಶ್ಯಕತೆ ಇರಲಿಲ್ಲವೇನೋ ?…
ಶಿರ್ವ: ರಸ್ತೆ ದಾಟಲು ನಿಂತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು ಶಿರ್ವ : ರಸ್ತೆ ದಾಟಲು ನಿಂತಿದ್ದ…