ದಾವಣಗೆರೆ: ಓಮಿಕ್ರಾನ್ ಬಗ್ಗೆ ರಾಜ್ಯ ಸರ್ಕಾರ ತುರ್ತು ಕ್ರಮಕೈಗೊಳ್ಳುತ್ತಿದ್ದು, ಹೊರ ದೇಶಗಳಿಂದ ಬಂದವರನ್ನ ಪರೀಕ್ಷೆಗೆ ಒಳಪಡಿಸಲಾಗಿದೆ. ಶಾಲಾ ಕಾಲೇಜ್ಗಳಿಗೆ ರಜೆ ನೀಡುವ ಅಗತ್ಯವೇ ಇಲ್ಲ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.
ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಓಮಿಕ್ರಾನ್ ಬಗ್ಗೆ ರಾಜ್ಯ ಸರ್ಕಾರ ತುರ್ತು ಕ್ರಮಕೈಗೊಳ್ಳುತ್ತಿದೆ. ಹೊರ ದೇಶಗಳಿಂದ ಬಂದವರನ್ನ ಪರೀಕ್ಷೆಗೆ ಒಳಪಡಿಸಲಾಗಿದೆ. ಈಗಾಗಲೇ ಕೇರಳದಿಂದ ಪ್ರತಿಯೊಬ್ಬರನ್ನ ಕೋವಿಡ್ ಟೆಸ್ಟ ಮಾಡಲಾಗುತ್ತಿದೆ. ಲಾಕ್ಡೌನ್ ಬಗ್ಗೆ ಯಾವುದೇ ಪ್ರಸ್ತಾವನೆ ಇಲ್ಲ. ಜನ ಆತಂಕ ಪಡುವ ಅಗತ್ಯವಿಲ್ಲ. ನಾವು ಈಗ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುತ್ತಿದ್ದೇವೆ. ಬುಸ್ಟರ್ ಡೋಸ್ ಬಗ್ಗೆ ಕೇಂದ್ರ ಸರ್ಕಾರ ನಿರ್ಧಾರ ಕೈಗೊಳ್ಳಬೇಕು. ಈ ಬಗ್ಗೆ ನಾವು ನಿರ್ಧಾರಕೈಗೊಳ್ಳಲು ಆಗಲ್ಲ. ಶಾಲಾ ಕಾಲೇಜ್ಗಳಲ್ಲಿ ಕೋವಿಡ್ ಬಗ್ಗೆ ನಿಗಾ ವಹಿಸಿ ಅಂತಾ ಹೇಳಿದ್ದೇವೆ. ಶಾಲಾ ಕಾಲೇಜ್ಗಳಿಗೆ ರಜೆ ನೀಡುವ ಅಗತ್ಯವೇ ಇಲ್ಲ ಎಂದಿದ್ದಾರೆ.
ಸೌತ್ ಅಫ್ರಿಕಾದಿಂದ ಬಂದ ವ್ಯಕ್ತಿ ವಿಭಿನ್ನ ಸೋಂಕಿನ ಲಕ್ಷಣ ಕಂಡುಬಂದಿದೆ. ಐಸಿಎಂಆರ್ಗೆ ಜಿನೋಮ್ ಸಿಕ್ವೇನ್ಸ್ ಟೆಸ್ಟ್ಗೆ ಕಳಿಸಿದ್ದೇವೆ. ಐಸಿಎಂಆರ್ ವರದಿಗಾಗಿ ಕಾಯುತ್ತಿದ್ದೇವೆ. ಕೇರಳದಿಂದ ಬಂದವರ ಮೇಲೆ ವಿಶೇಷ ನಿಗಾವಹಿಸಲಾಗುತ್ತದೆ. ಕೇರಳದಿಂದ ಬಂದ ಎಲ್ಲರಿಗೂ ಟೆಸ್ಟ್ ಕಡ್ಡಾಯವಾಗಿದೆ. ಒಂದು ವೇಳೆ ನೆಗೆಟಿವ್ ಬಂದಿದ್ದರು ಏಳು ದಿನದ ನಂತರ ಮತ್ತೇ ಟೆಸ್ಟಿಂಗ್ ಮಾಡಬೇಕು. ದಾವಣಗೆರೆ ಸೇರಿದಂತೆ ಎಲ್ಲಾ ಶಾಲಾ ಕಾಲೇಜ್ಗಳಲ್ಲೂ ಕೇರಳ ವಿದ್ಯಾರ್ಥಿಗಳ ಬಗ್ಗೆ ನಿಗಾವಹಿಸಲಾಗುತ್ತದೆ ಎಂದು ತಿಳಿಸಿದ್ಧಾರೆ.
ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮಹಿಳೆಯ ಮೇಲೆ ಹಲ್ಲೆ ಆರೋಪ; ಸಾರ್ವಜನಿಕರ ಆಕ್ರೋಶ ಉಡುಪಿ: ಜಿಲ್ಲೆಯ ಮಲ್ಪೆ ಮೀನುಗಾರಿಕಾ ದಕ್ಕೆಯಲ್ಲಿ ಮಹಿಳೆಯ…
ವಿಧಾನಸಭಾ ಚುನಾವಣಾ ಸಮರ 2026: ಮೇ 4ಕ್ಕೆ ಐದು ರಾಜ್ಯಗಳ ಫಲಿತಾಂಶ ನವದೆಹಲಿ :ಕೇರಳ, ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು…
ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ.. ಏಸಿಯಲ್ಲಿ ಇರುವ ಗ್ಯಾಸ್ಗೆ ಯಾವುದೇ ರೀತಿಯಲ್ಲೂ ಬೆಂಕಿ ಹಿಡಿಯಲ್ಲ.. ಕರಾವಳಿಗೆ ಕೂಲರ್ಗಿಂದ…
ಕೌಟುಂಬಿಕ ಕಲಹ : ಕೊಲೆಯಲ್ಲಿ ಅಂತ್ಯ - ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ ಮೈಸೂರು: ಸಣ್ಣ…
ಲಡಾಖ್ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್ನಲ್ಲಿ4.1 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…
ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…