ತಿರುವನಂತಪುರ: ಯುರೋಪ್ನಿಂದ ಕೇರಳಕ್ಕೆ ಆಗಮಿಸಿದ ವ್ಯಕ್ತಿಗೆ ಕೊರೊನಾ ರೂಪಾಂತರ ತಳಿ ಓಮಿಕ್ರಾನ್ ಸೋಂಕು ಧೃಡಪಟ್ಟಿದೆ. ಇದು ಕೇರಳದಲ್ಲಿ ಪತ್ತೆಯಾಗಿರುವ ಮೊದಲ ಓಮಿಕ್ರಾನ್ ಪ್ರಕರಣವಾಗಿದೆ.
ಡಿಸೆಂಬರ್ 6ರಂದು ಅಬುಧಾಬಿಯಿಂದ ಯುರೋಪ್ ಮುಖಾಂತರ ಡಿಸೆಂಬರ್ 8ರಂದು ಕೇರಳದ ಎರ್ನಾಕುಲಂಗೆ ರೋಗಿ ಬಂದಿದ್ದಾರೆ. ದುಬೈನಲ್ಲಿ ವ್ಯಕ್ತಿಗೆ ನೆಗೆಟಿವ್ ವರದಿ ಬಂದಿತ್ತು. ಆದರೆ ಡಿಸೆಂಬರ್ 8ರಂದು ಕೇರಳದಲ್ಲಿ ಸೋಂಕು ಧೃಡಪಟ್ಟಿದೆ. ಅಲ್ಲದೇ ಸೋಂಕಿತ ಸಮೀಪದಲ್ಲಿದ್ದ 149 ಪ್ರಯಾಣಿಕರ ಬಗ್ಗೆ ಮಾಹಿತಿ ಪಡೆಯಲಾಗಿದೆ. ಸದ್ಯ ರೋಗಿಯ ಸ್ಥಿತಿ ಸ್ಥಿರವಾಗಿದ್ದು, ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವ ವೀಣಾ ಜಾರ್ಜ್ ಹೇಳಿದ್ದಾರೆ.
ರೋಗಿಯ ಪತ್ನಿ ಹಾಗೂ ತಾಯಿಗೂ ಕೊರೊನಾ ಸೋಂಕು ಧೃಡಪಟ್ಟಿದ್ದು, ಅವರನ್ನು ಕ್ವಾರಂಟೈನ್ಗೊಳಿಸಲಾಗಿದೆ. ಕೇಂದ್ರ ಸರ್ಕಾರದ ಮಾರ್ಗಸೂಚಿಗಳ ಪ್ರಕಾರ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಸೋಂಕಿತನ ಸಂಪರ್ಕ ಹೊಂದಿದ್ದವರನ್ನು ಗುರುತಿಸಲಾಗಿದೆ. ನಾವು ಬಹಳ ಮುನ್ನೆಚ್ಚರಿಕೆಯಿಂದ ಹೆಜ್ಜೆ ಹಾಕುತ್ತಿದ್ದೇವೆ ಮತ್ತು ಯಾರು ಸಹ ಯಾವುದೇ ಆತಂಕ ಪಡುವ ಅಗತ್ಯವಿಲ್ಲ ತಿಳಿಸಿದ್ದಾರೆ.
ವಿಟ್ಲ: ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ…
ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…
ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…
ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…
ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…