Featured

ಓಲಾ  ಊಬರ್‌  ಓಡಿಸಬಾರದು ಎಂದು ಸರ್ಕಾರ ಯಾವುದೇ ಬಲವಂತದ ಕ್ರಮ ಕೈಗೊಳ್ಳುವಂತಿಲ್ಲ : ಹೈಕೋರ್ಟ್‌  ಮಧ್ಯಂತರ ಆದೇಶ – Vishwanews24

ಓಲಾ  ಊಬರ್‌  ಓಡಿಸಬಾರದು ಎಂದು ಸರ್ಕಾರ ಯಾವುದೇ ಬಲವಂತದ ಕ್ರಮ ಕೈಗೊಳ್ಳುವಂತಿಲ್ಲ : ಹೈಕೋರ್ಟ್‌  ಮಧ್ಯಂತರ ಆದೇಶ

ನವೆಂಬರ್‌ 7ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್

ಬೆಂಗಳೂರು: ಓಲಾ  ಊಬರ್‌  ಓಡಿಸಬಾರದು ಎಂದು ಸರ್ಕಾರ ಯಾವುದೇ ಬಲವಂತದ ಕ್ರಮ ಕೈಗೊಳ್ಳುವಂತಿಲ್ಲ ಎಂದು ಹೈಕೋರ್ಟ್‌  ಮಧ್ಯಂತರ ಆದೇಶ ಮಾಡಿದೆ.

ಓಲಾ, ಊಬರ್‌ ಸೇವೆಗೆ ಸಂಬಂಧಿಸಿದಂತೆ ಹೈಕೋರ್ಟ್‌ನ ಏಕಸದಸ್ಯ ಪೀಠ ಅರ್ಜಿ ವಿಚಾರಣೆ ನಡೆಸಿತು. ನಿನ್ನೆ ನಡೆದ ಸಭೆ ಕುರಿತು ಮಾಹಿತಿ ಪಡೆದ ನ್ಯಾಯಮೂರ್ತಿಗಳು, ಓಲಾ ಹಾಗೂ ಊಬರ್‌ ಓಡಿಸದಂತೆ ಸಾರಿಗೆ ಇಲಾಖೆ ಕೈಗೊಂಡಿದ್ದ ಕ್ರಮದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.

ಆಟೋಗೆ ಮಾತ್ರ ಅನುಮತಿ ಕೇಳುತ್ತಿದ್ದೀರಿ ಅಲ್ವಾ? ಕೇಂದ್ರ ಸರ್ಕಾರದ ನಿಯಮಾವಳಿ ಇದೆ. ಈ ನಿಯಮಾವಳಿ ಬಗ್ಗೆ ನಿನ್ನೆ ಯಾಕೆ ಹೇಳಿಲ್ಲ? ಸಭೆಯ ತೀರ್ಮಾನ ಏನು ಎಂದು ಪೀಠ ಪ್ರಶ್ನಿಸಿತು. ಕೆಲವೊಂದು ವಿಚಾರ ಪ್ರಸ್ತಾಪಕ್ಕೆ ಕಾಲಾವಕಾಶ ನೀಡುವಂತೆ ಅಡ್ವೊಕೇಟ್‌ ಜನರಲ್‌ ಪ್ರಭುಲಿಂಗ ನಾವದಗಿ ಮನವಿ ಮಾಡಿದರು. 12 ದಿನ ಕಾಲಾವಕಾಶ ಕಲ್ಪಿಸುವಂತೆ ಕೋರಿದರು. ಇದಕ್ಕೆ ಸಮ್ಮತಿಸಿದ ಪೀಠ, ಅಲ್ಲಿಯವರೆಗೂ ಯಾವುದೇ ಕ್ರಮಕೈಗೊಳ್ಳುವ ಹಾಗೇ ಇಲ್ಲ ಎಂದು ತಿಳಿಸಿತು.

ಶಾಸಕ ಹರೀಶ್ ಪೂಂಜಾರಿಗೆ ಬೆದರಿಕೆ ಖಂಡನೀಯ, ಆರೋಪಿಗಳನ್ನು ತಕ್ಷಣ ಬಂಧಿಸಿ..:ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ..

ಸಾರಿಗೆ ಇಲಾಖೆ ಕ್ರಮವನ್ನು ಪ್ರಶ್ನಿಸಿದ ಪೀಠ, ಸರ್ಕಾರ ಯಾವುದೇ ಬಲವಂತದ ಕ್ರಮಕೈಗೊಳ್ಳುವಂತೆ ಇಲ್ಲ. ಓಲಾ, ಊಬರ್ ಕಂಪನಿ ಅನುಕೂಲಕರ ದರವನ್ನು ವಿಧಿಸಬೇಕು. ಪರವಾನಗಿ ಕಾಲಾವಕಾಶ ವಿಸ್ತರಿಸಬೇಕು ಎಂದು ಆದೇಶ ಹೊರಡಿಸಿತು.

2021ರಲ್ಲಿ ಸಾರಿಗೆ ಇಲಾಖೆ ನಿಗದಿಪಡಿಸಿದ ದರವನ್ನು ಪಾಲಿಸಬೇಕು. ಹೆಚ್ಚುವರಿ ಸೇವೆಯ ಚಾರ್ಜ್ ಬಗ್ಗೆ ನ್ಯಾಯಾಲಯಕ್ಕೆ ತಿಳಿಸಬೇಕು. 10 ರಿಂದ 15 ದಿನದ ಒಳಗೆ ಸರ್ಕಾರ ವರದಿ ಸಲ್ಲಿಸಬೇಕು ಎಂದು ಸೂಚನೆ ನೀಡಿದ ನ್ಯಾಯಾಲಯ, ವಿಚಾರಣೆಯನ್ನು ನವೆಂಬರ್ 7ಕ್ಕೆ ಮುಂದೂಡಿದೆ.

Vishwa News 24

Recent Posts

ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಮತ್ತೊಬ್ಬ ಆರೋಪಿ ಬಂಧನ -vishwanews24

ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಉತ್ತರಾಖಂಡದಲ್ಲಿ ಮತ್ತೊಬ್ಬ ಆರೋಪಿ ಬಂಧನ ಉಡುಪಿ : ಕಾಪು ಜಿಲ್ಲೆಯ ಮುದರಂಗಡಿಯ ಸೇಂಟ್…

6 hours ago

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಪ್ರಯಾಣಿಕರು ಪಾರು -vishwanews24

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…

15 hours ago

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ -vishwanews24

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…

15 hours ago

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ -vishwanews24

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…

16 hours ago

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

1 day ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

1 day ago