ಮುಂಬೈ: ಬೃಹತ್ ಮುಂಬಯಿ ಮಹಾನಗರಪಾಲಿ ಮುಂಬೈನ ಬಂಗಲೆಯೊಂದರಲ್ಲಿ ನಟಿ ಕಂಗನಾ ರನೌತ್ ಅವರ ಕಚೇರಿಯನ್ನು ನೆಲಸಮಗೊಳಿಸುವುದು ‘ಕಾನೂನಿನ ದುರುದ್ದೇಶವಲ್ಲದೆ ಮತ್ತೇನಲ್ಲ’ ಎಂದು ಬಾಂಬೆ ಹೈಕೋರ್ಟ್ ಇಂದು ಹೇಳಿದೆ.
ಕಂಗನಾ ಬಂಗಲೆ ಧ್ವಂಸ ಪ್ರಕರಣದ ವಿಚಾರಣೆ ನಡೆಸಿದ ಬಾಂಬೆ ಹೈಕೋರ್ಟ್ ಶುಕ್ರವಾರ, ಇದೊಂದು ದ್ವೇಷದ ನಡವಳಿಕೆಯೇ ಹೊರತು, ಕಾನೂನು ಸಮ್ಮತವಾದುದಲ್ಲ ಎಂದು ತಿಳಿಸಿದೆ.
ಸೆಪ್ಟೆಂಬರ್ 9 ರಂದು ಮುಂಬೈನ ಪಾಲಿ ಹಿಲ್ ಬಂಗಲೆಯೊಂದರಲ್ಲಿ ಕಂಗನಾ ರನೌತ್ ಅವರ ಕಚೇರಿ, ನಿವಾಸ ಒಂದು ಭಾಗವನ್ನು ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ಅಥವಾ ಬಿಎಂಸಿ ನೆಲಸಮ ಮಾಡಿತ್ತು. ಮಹಾರಾಷ್ಟ್ರ ಸರ್ಕಾರ ಮತ್ತು ಆಡಳಿತಾರೂಢ ಶಿವಸೇನಾ ವಿರುದ್ಧ ಅವರು ಮಾಡಿದ ಟೀಕೆಗಳ ಪರಿಣಾಮವಾಗಿ ನಾಗರಿಕ ಸಂಸ್ಥೆ ತನ್ನ ವಿರುದ್ಧದ ಕ್ರಮ ಎಂದು ಆರೋಪಿಸಿ ಕಂಗನಾ ಕೋರ್ಟ್ ಮೆಟ್ಟಿಲೇರಿದ್ದರು.
ನಟಿ ಕಂಗನಾ ರಣಾವತ್ ಅವರು ಅಕ್ರಮವಾಗಿ ಮನೆ ಕಟ್ಟಿರುವುದಾಗಿ ಬಿಎಂಸಿ ಆರೋಪಿಸಿತ್ತು. ಕಂಗನಾ ಅವರು ಸುಮಾರು 14 ನಿಯಮವನ್ನು ಉಲ್ಲಂಘಿಸಿರುವುದಾಗಿ ಬಿಎಂಸಿ ಪಟ್ಟಿ ಮಾಡಿತ್ತು.
ಯಾವುದೇ ನಾಗರಿಕರ ವಿರುದ್ಧ ಬಲ ಪ್ರಯೋಗವನ್ನು ಅಧಿಕಾರಿಗಳು ಅನುಮೋದಿಸುವುದಿಲ್ಲ ಎಂದು ನ್ಯಾಯಾಲಯ ಹೇಳಿದೆ. ಅಲ್ಲದೆ ಕಂಗನಾ ರಾಜ್ಯದಿಂದ ಹೊರಗಿದ್ದ ವೇಳೆ, ಕೇವಲ 24ಗಂಟೆಗಳ ಕಾಲಾವಧಿಯಲ್ಲಿ ಉತ್ತರ ನೀಡುವಂತೆ ಬಿಎಂಸಿ ಸೂಚಿಸಿತ್ತ. ಆದರೆ ಆಕೆಯ ಮನವಿಯನ್ನು ಪುರಸ್ಕರಿಸಿ ಹೆಚ್ಚಿನ ಸಮಯವನ್ನು ನೀಡದಿರುವುದನ್ನು ನ್ಯಾಯಾಲಯ ಗಮನಿಸಿದೆ ಎಂದು ಆದೇಶದಲ್ಲಿ ತಿಳಿಸಿದೆ.
ಹೈದರಾಬಾದ್ : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…
ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…
ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…
ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…
ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ : ಮೋದಿ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…
ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…