ಮುಂಬೈ: ಬೃಹತ್ ಮುಂಬಯಿ ಮಹಾನಗರಪಾಲಿ ಮುಂಬೈನ ಬಂಗಲೆಯೊಂದರಲ್ಲಿ ನಟಿ ಕಂಗನಾ ರನೌತ್ ಅವರ ಕಚೇರಿಯನ್ನು ನೆಲಸಮಗೊಳಿಸುವುದು ‘ಕಾನೂನಿನ ದುರುದ್ದೇಶವಲ್ಲದೆ ಮತ್ತೇನಲ್ಲ’ ಎಂದು ಬಾಂಬೆ ಹೈಕೋರ್ಟ್ ಇಂದು ಹೇಳಿದೆ.
ಕಂಗನಾ ಬಂಗಲೆ ಧ್ವಂಸ ಪ್ರಕರಣದ ವಿಚಾರಣೆ ನಡೆಸಿದ ಬಾಂಬೆ ಹೈಕೋರ್ಟ್ ಶುಕ್ರವಾರ, ಇದೊಂದು ದ್ವೇಷದ ನಡವಳಿಕೆಯೇ ಹೊರತು, ಕಾನೂನು ಸಮ್ಮತವಾದುದಲ್ಲ ಎಂದು ತಿಳಿಸಿದೆ.
ಸೆಪ್ಟೆಂಬರ್ 9 ರಂದು ಮುಂಬೈನ ಪಾಲಿ ಹಿಲ್ ಬಂಗಲೆಯೊಂದರಲ್ಲಿ ಕಂಗನಾ ರನೌತ್ ಅವರ ಕಚೇರಿ, ನಿವಾಸ ಒಂದು ಭಾಗವನ್ನು ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ಅಥವಾ ಬಿಎಂಸಿ ನೆಲಸಮ ಮಾಡಿತ್ತು. ಮಹಾರಾಷ್ಟ್ರ ಸರ್ಕಾರ ಮತ್ತು ಆಡಳಿತಾರೂಢ ಶಿವಸೇನಾ ವಿರುದ್ಧ ಅವರು ಮಾಡಿದ ಟೀಕೆಗಳ ಪರಿಣಾಮವಾಗಿ ನಾಗರಿಕ ಸಂಸ್ಥೆ ತನ್ನ ವಿರುದ್ಧದ ಕ್ರಮ ಎಂದು ಆರೋಪಿಸಿ ಕಂಗನಾ ಕೋರ್ಟ್ ಮೆಟ್ಟಿಲೇರಿದ್ದರು.
ನಟಿ ಕಂಗನಾ ರಣಾವತ್ ಅವರು ಅಕ್ರಮವಾಗಿ ಮನೆ ಕಟ್ಟಿರುವುದಾಗಿ ಬಿಎಂಸಿ ಆರೋಪಿಸಿತ್ತು. ಕಂಗನಾ ಅವರು ಸುಮಾರು 14 ನಿಯಮವನ್ನು ಉಲ್ಲಂಘಿಸಿರುವುದಾಗಿ ಬಿಎಂಸಿ ಪಟ್ಟಿ ಮಾಡಿತ್ತು.
ಯಾವುದೇ ನಾಗರಿಕರ ವಿರುದ್ಧ ಬಲ ಪ್ರಯೋಗವನ್ನು ಅಧಿಕಾರಿಗಳು ಅನುಮೋದಿಸುವುದಿಲ್ಲ ಎಂದು ನ್ಯಾಯಾಲಯ ಹೇಳಿದೆ. ಅಲ್ಲದೆ ಕಂಗನಾ ರಾಜ್ಯದಿಂದ ಹೊರಗಿದ್ದ ವೇಳೆ, ಕೇವಲ 24ಗಂಟೆಗಳ ಕಾಲಾವಧಿಯಲ್ಲಿ ಉತ್ತರ ನೀಡುವಂತೆ ಬಿಎಂಸಿ ಸೂಚಿಸಿತ್ತ. ಆದರೆ ಆಕೆಯ ಮನವಿಯನ್ನು ಪುರಸ್ಕರಿಸಿ ಹೆಚ್ಚಿನ ಸಮಯವನ್ನು ನೀಡದಿರುವುದನ್ನು ನ್ಯಾಯಾಲಯ ಗಮನಿಸಿದೆ ಎಂದು ಆದೇಶದಲ್ಲಿ ತಿಳಿಸಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…