Featured

ಕಂಗನಾ ರಣಾವತ್ ಬಂಗಲೆ ನೆಲಸಮ ಆದೇಶ ರದ್ದುಪಡಿಸಿದ ಬಾಂಬೆ ಹೈಕೋರ್ಟ್ -Vishwanews24

ಕಂಗನಾ ರಣಾವತ್ ಬಂಗಲೆ ನೆಲಸಮ ಆದೇಶ ರದ್ದುಪಡಿಸಿದ ಬಾಂಬೆ ಹೈಕೋರ್ಟ್

ಮುಂಬೈ: ಬೃಹತ್ ಮುಂಬಯಿ ಮಹಾನಗರಪಾಲಿ ಮುಂಬೈನ ಬಂಗಲೆಯೊಂದರಲ್ಲಿ ನಟಿ ಕಂಗನಾ ರನೌತ್ ಅವರ ಕಚೇರಿಯನ್ನು ನೆಲಸಮಗೊಳಿಸುವುದು ‘ಕಾನೂನಿನ ದುರುದ್ದೇಶವಲ್ಲದೆ ಮತ್ತೇನಲ್ಲ’ ಎಂದು ಬಾಂಬೆ ಹೈಕೋರ್ಟ್ ಇಂದು ಹೇಳಿದೆ.

ಕಂಗನಾ ಬಂಗಲೆ ಧ್ವಂಸ ಪ್ರಕರಣದ ವಿಚಾರಣೆ ನಡೆಸಿದ ಬಾಂಬೆ ಹೈಕೋರ್ಟ್ ಶುಕ್ರವಾರ, ಇದೊಂದು ದ್ವೇಷದ ನಡವಳಿಕೆಯೇ ಹೊರತು, ಕಾನೂನು ಸಮ್ಮತವಾದುದಲ್ಲ ಎಂದು ತಿಳಿಸಿದೆ.

ಸೆಪ್ಟೆಂಬರ್ 9 ರಂದು ಮುಂಬೈನ ಪಾಲಿ ಹಿಲ್ ಬಂಗಲೆಯೊಂದರಲ್ಲಿ ಕಂಗನಾ ರನೌತ್ ಅವರ ಕಚೇರಿ, ನಿವಾಸ ಒಂದು ಭಾಗವನ್ನು ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ಅಥವಾ ಬಿಎಂಸಿ ನೆಲಸಮ ಮಾಡಿತ್ತು. ಮಹಾರಾಷ್ಟ್ರ ಸರ್ಕಾರ ಮತ್ತು ಆಡಳಿತಾರೂಢ ಶಿವಸೇನಾ ವಿರುದ್ಧ ಅವರು ಮಾಡಿದ ಟೀಕೆಗಳ ಪರಿಣಾಮವಾಗಿ ನಾಗರಿಕ ಸಂಸ್ಥೆ ತನ್ನ ವಿರುದ್ಧದ ಕ್ರಮ ಎಂದು ಆರೋಪಿಸಿ ಕಂಗನಾ ಕೋರ್ಟ್ ಮೆಟ್ಟಿಲೇರಿದ್ದರು.

ನಟಿ ಕಂಗನಾ ರಣಾವತ್ ಅವರು ಅಕ್ರಮವಾಗಿ ಮನೆ ಕಟ್ಟಿರುವುದಾಗಿ ಬಿಎಂಸಿ ಆರೋಪಿಸಿತ್ತು. ಕಂಗನಾ ಅವರು ಸುಮಾರು 14 ನಿಯಮವನ್ನು ಉಲ್ಲಂಘಿಸಿರುವುದಾಗಿ ಬಿಎಂಸಿ ಪಟ್ಟಿ ಮಾಡಿತ್ತು.

ಯಾವುದೇ ನಾಗರಿಕರ ವಿರುದ್ಧ ಬಲ ಪ್ರಯೋಗವನ್ನು ಅಧಿಕಾರಿಗಳು ಅನುಮೋದಿಸುವುದಿಲ್ಲ ಎಂದು ನ್ಯಾಯಾಲಯ ಹೇಳಿದೆ. ಅಲ್ಲದೆ ಕಂಗನಾ ರಾಜ್ಯದಿಂದ ಹೊರಗಿದ್ದ ವೇಳೆ, ಕೇವಲ 24ಗಂಟೆಗಳ ಕಾಲಾವಧಿಯಲ್ಲಿ ಉತ್ತರ ನೀಡುವಂತೆ ಬಿಎಂಸಿ ಸೂಚಿಸಿತ್ತ. ಆದರೆ ಆಕೆಯ ಮನವಿಯನ್ನು ಪುರಸ್ಕರಿಸಿ ಹೆಚ್ಚಿನ ಸಮಯವನ್ನು ನೀಡದಿರುವುದನ್ನು ನ್ಯಾಯಾಲಯ ಗಮನಿಸಿದೆ ಎಂದು ಆದೇಶದಲ್ಲಿ ತಿಳಿಸಿದೆ.

Vishwa News 24

Recent Posts

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು – vishwanews24

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…

29 minutes ago

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು – vishwanews24

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…

36 minutes ago

ಅಕ್ಷಯ್‌ ಕಲ್ಲೇಗ ಕೊಲೆ ಪ್ರಕರಣ : 3 ಮತ್ತು 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು – vishwanews24

ಪುತ್ತೂರು: ಅಕ್ಷಯ್‌ ಕಲ್ಲೇಗ ಕೊಲೆ ಪ್ರಕರಣ: 3ನೇ ಮತ್ತು 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು ಪುತ್ತೂರು: ಕಲ್ಲೇಗ ಟೈಗರ್ಸ್…

51 minutes ago

ಎಲ್​ಪಿಜಿ ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ ಯಾವುದೇ ಬದಲಾವಣೆ ಇಲ್ಲ : ಕೇಂದ್ರ ಸ್ಪಷ್ಟನೆ – vishwanews24

ಎಲ್​ಪಿಜಿ ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ ಯಾವುದೇ ಬದಲಾವಣೆ ಇಲ್ಲ : ಕೇಂದ್ರ ಸ್ಪಷ್ಟನೆ ನವದೆಹಲಿ: ಎಲ್​ಪಿಜಿ(LPG) ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ…

1 hour ago

ಸುಳ್ಯ : ಕಂಬಕ್ಕೆ ಬೈಕ್ ಡಿಕ್ಕಿ; ಮೆಸ್ಕಾಂ ಸಿಬ್ಬಂದಿ ಮೃತ್ಯು – vishwanews24

ಸುಳ್ಯ : ಕಂಬಕ್ಕೆ ಬೈಕ್ ಡಿಕ್ಕಿ; ಮೆಸ್ಕಾಂ ಸಿಬ್ಬಂದಿ ಮೃತ್ಯು ಸುಳ್ಯ,: ತಾಲೂಕಿನ ನಿಂತಿಕಲ್ಲು ಬಳಿ ವಿದ್ಯುತ್ ಕಂಬಕ್ಕೆ ಬೈಕ್…

1 hour ago

13 ವರ್ಷದ ಕೋಮಾ ಜೀವನ ಅಂತ್ಯ : ದಯಾಮರಣಕ್ಕೆ ಅನುಮತಿ ಪಡೆದಿದ್ದ ಹರೀಶ್ ರಾಣಾ ನಿಧನ – vishwanews24

13 ವರ್ಷದ ಕೋಮಾ ಜೀವನ ಅಂತ್ಯ : ದಯಾಮರಣಕ್ಕೆ ಅನುಮತಿ ಪಡೆದಿದ್ದ ಹರೀಶ್ ರಾಣಾ ನಿಧನ ಹೊಸದಿಲ್ಲಿ: 13 ವರ್ಷಗಳಿಂದ…

3 hours ago