ಉಡುಪಿ

ಕಂಚಿನಡ್ಕ: ಭೂಮಿ ಅತಿಕ್ರಮಣ, 45ಕ್ಕೂ ಮಿಕ್ಕಿ ಗುಡಿಸಲು ನಿರ್ಮಾಣ

ಪಡುಬಿದ್ರಿ: ಪಡುಬಿದ್ರಿ ಗ್ರಾ. ಪಂ. ವ್ಯಾಪ್ತಿಯಲ್ಲಿ ನಿವೇಶನ ರಹಿತರು ಸುಮಾರು 650ಕ್ಕೂ ಮೇಲ್ಪಟ್ಟು ಅರ್ಜಿ ನೀಡಿದ್ದು, 8 ವರ್ಷಗಳಿಂದಲೂ ಬಾಕಿ ಇದೆ. ಈ ನಿವೇಶನ ರಹಿತರಲ್ಲಿ ಸುಮಾರು 45ಕ್ಕೂ ಹೆಚ್ಚು ಮಂದಿ ಪಡುಬಿದ್ರಿಯ ಕಂಚಿನಡ್ಕ ಪೊಲೀಸ್‌ ಕ್ವಾರ್ಟರ್ಸ್‌ ಹಿಂಬದಿಯ ಪೊಲೀಸ್‌ ಇಲಾಖೆಗೆ ಹಾಗೂ ಸರಕಾರಿ ಜಿ. ಪಂ. ಶಾಲೆಗಳಿಗೆ ಒಳಪಟ್ಟಿರುವ 75 -3 ಎ 1.57ಎಕ್ರೆ ಭೂಮಿಯನ್ನು ಅತಿಕ್ರಮಿಸಿದ್ದಾರೆ. ವಾರದ ಹಿಂದೆಯಷ್ಟೇ ಈ ಗುಡಿಸಲುಗಳ ನಿರ್ಮಾಣವಾಗಿದೆ. ತಹಶೀಲ್ದಾರ್‌ ಜಾನ್‌ ಪ್ರಕಾಶ್‌ ರೋಡ್ರಿಗಸ್‌ ಪೊಲೀಸ್‌ ಅಧಿಕಾರಿಗಳ ಜತೆಗೆ ಆಗಮಿಸಿ ಸ್ಥಳ ತನಿಖೆಯನ್ನು ಈಗಾಗಲೇ ನಡೆಸಿದ್ದಾರೆ.

ಇದೇ ವೇಳೆ ಮೊಗವೀರ ಜನಾಂಗದವರಿಗೆ 1961ರಲ್ಲಿ ಮೀಸಲಿರಿಸಿದ್ದ ತುಳುವ ಸಂಗಮ ಬಳಿಯ ನಡಾಲು ಗ್ರಾಮದ ಸ. ನಂ. 77ರಲ್ಲಿನ ಅಂಶದಲ್ಲಿಯೂ ಸುಮಾರು ಐದಾರು ಗುಡಿಸಲುಗಳ ನಿರ್ಮಾಣವಾಗಿದ್ದು, ಗ್ರಾಮ ಲೆಕ್ಕಿಗ ಶ್ಯಾಮ್‌ಸುಂದರ್‌, ಕಂದಾಯ ಪರಿವೀಕ್ಷಣಾಧಿಕಾರಿ ರವಿಶಂಕರ್‌ ಈ ವಿವಾದಿತ ಸ್ಥಳದ ಪರಿಶೀಲನೆಯನ್ನು ನಡೆಸಿದ್ದಾರೆ.

ಗ್ರಾ. ಪಂ.ಗೆ ನಿವೇಶನ ರಹಿತರ ಅರ್ಜಿ
ಪೊಲೀಸ್‌ ಭೂಮಿಯಲ್ಲಿ ಗುಡಿಸಲುಗಳನ್ನು ನಿರ್ಮಿಸಿಕೊಂಡಿರುವ ಸುಮಾರು 25 – 30 ಮಂದಿ ಲೋಕೇಶ್‌ ಕಂಚಿನಡ್ಕ ನೇತೃತ್ವದಲ್ಲಿ ಪಂಚಾಯತಿಗೆ ಅರ್ಜಿಯೊಂದನ್ನು ನೀಡಿದ್ದು, ತಮಗೆ ಅದೇ ಸ್ಥಳದಲ್ಲಿ ಮನೆ ನಿವೇಶನಗಳನ್ನಿತ್ತು ಹಕ್ಕುಪತ್ರವನ್ನು ದೊರಕಿಸಿಕೊಡುವಂತೆ ಮನವಿ ಮಾಡಿರುತ್ತಾರೆ.

ಅಲ್ಲಗಳೆವ ಮೊಗವೀರರು
ಆದರೆ ಈ ವಾದವನ್ನು ಮೊಗವೀರ ನಾಯಕ ಸದಾಶಿವ ಪಡುಬಿದ್ರಿ ಅಲ್ಲಗೆಳೆಯುತ್ತಿದ್ದಾರೆ. 1961ರಲ್ಲಿ ಸಮುದ್ರ ಕೊರೆತವುಂಟಾಗಿ ಅಳಿವೆ ಕಡಿದು ಹೋದ ಸಂದರ್ಭ ಮನೆ, ಮಠಗಳನ್ನು ಕಳೆದುಕೊಂಡ ಮೊಗವೀರ ಜನಾಂಗದ 42 ಮಂದಿಗೆ ಕಾದಿರಿಸಿದ ಸ್ಥಳ ಇದಾಗಿತ್ತು. ತಾವೀಗ ಕುಂದಾಪುರ ಸಹಾಯಕ ಕಮಿಶನರ್‌ ನ್ಯಾಯಾಲಯ ಹಾಗೂ ರಾಜ್ಯ ಉಚ್ಚ ನ್ಯಾಯಾಲಯದಲ್ಲೂ ತಮ್ಮ ಜಾಗವನ್ನು ತಮಗೆ ಮರಳಿಸಿ ಎಂದು ಮೇಲ್ಮನವಿಯನ್ನು ಸಲ್ಲಿಸಿದ್ದೇವೆ. ಈಗ ವಾಸವಿರುವ ಕುಟುಂಬಗಳಿಗೆ ಹಕ್ಕುಪತ್ರ ನೀಡಿರುವುದನ್ನೂ ನಾವು ಆಕ್ಷೇಪಿಸಿದ್ದೇವೆ. ನ್ಯಾಯಾಲಯದಲ್ಲಿ ಕೇಸು ವಿಚಾರಣೆಯಲ್ಲಿರುವ ವೇಳೆಯೇ ಸುಮಿತ್ರಾ ಎಂಬವರು ಮನೆಯೊಂದನ್ನು ಕಟ್ಟಿದ್ದು, ಅದನ್ನು ತೆರವುಗೊಳಿಸುವಂತೆ ಕಂದಾಯ ಇಲಾಖೆ ಈಚೆಗಷ್ಟೇ ಆದೇಶಿಸಿದೆ. ಪಡುಬಿದ್ರಿ ಗ್ರಾ. ಪಂ. ಕೂಡ ಸರ್ವಾನುಮತದಿಂದ ಈ ಜಾಗವನ್ನು ಯಾರಿಗೂ ಅತಿಕ್ರಮಿಸಲು ಬಿಡಬಾರದಾಗಿ ನಿರ್ಣಯ ಕೈಗೊಂಡಿದೆ ಎಂದಿದ್ದಾರೆ. ಆದರೆ ಈ ಸಂಬಂಧ ಇದುವರೆಗೂ ಯಾವುದೇ ಆದೇಶ ಜಾರಿಯಾಗಿಲ್ಲ ಎಂದು ಸದಾಶಿವ ಪಡುಬಿದ್ರಿ ಹೇಳುತ್ತಾರೆ.

ನಮ್ಮ ಜಾಗವನ್ನು ಗುರುತಿಸಿಕೊಡಿ
ಈ ನಡುವೆ ಪೊಲೀಸ್‌ ಇಲಾಖೆ ಅಧಿಕಾರಿಗಳು ತಮಗೆ ಕಾದಿರಿಸಿದ ಸ್ಥಳವನ್ನು ಅಳತೆ ಮಾಡಿಸಿ ಗಡಿ ಗುರುತನ್ನು ಹಾಕಿ ಕೊಡುವಂತೆ ಪಡುಬಿದ್ರಿ ಪಿಎಸ್‌ಐ ಸತೀಶ್‌ ಅವರ ಮೂಲಕ ಕಂದಾಯ ಇಲಾಖೆಗೆ ಅರ್ಜಿ ಸಲ್ಲಿಸಿದ್ದಾರೆ. ಗಡಿ ಗುರುತು ಆದ ಕೂಡಲೇ ತಾವು ಮುಳ್ಳುತಂತಿ ಬೇಲಿಯನ್ನು ನಿರ್ಮಿಸುವುದಾಗಿ ಪೊಲೀಸರು ತಿಳಿಸಿದ್ದಾರೆ.

ಮೀಸಲು ಸ್ಥಳದಲ್ಲಿ ನಿವೇಶನ ಹಂಚಿಕೆ ಇಲ್ಲ
ಅದು ವಿವಿಧ ಇಲಾಖೆಗಳಿಗೆ ಕಾದಿರಿಸಿದ ಸ್ಥಳವಾಗಿರುವುದರಿಂದ ಹಾಗೂ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಅರ್ಜಿಗೆ ಯಾವುದೇ ಹಿಂಬರಹ ನೀಡಲಾಗಿಲ್ಲ. ಮುಂದೆ ಕಂದಾಯ ಇಲಾಖೆ ಈ ಜಮೀನನ್ನು ಈಗ ನೀಡಲಾಗಿರುವ ಪೊಲೀಸ್‌ ಮತ್ತು ಶಿಕ್ಷಣ ಇಲಾಖೆಗಳಿಂದ ವಿರಹಿತಗೊಳಿಸಿ ಗ್ರಾ.ಪಂ.ಗೆ ಹಸ್ತಾಂತರಿಸಿದಲ್ಲಿ ಮಾತ್ರ ಅರ್ಹರಿಗೆ ಮನೆ ನಿವೇಶನಗಳನ್ನು ತಾವು ಹಂಚಿಕೊಡಬಹುದಾಗಿದೆ ಎಂದು ಗ್ರಾ. ಪಂ. ಪಿಡಿಒ ಪಂಚಾಕ್ಷರಿ ಸ್ವಾಮಿ ಕೆರಿಮಠ ತಿಳಿಸಿದ್ದಾರೆ.

ಅತಿಕ್ರಮಿಸಿ ಗುಡಿಸಲು ನಿರ್ಮಿಸಲಾಗಿರುವ ನಡಾಲು ಗ್ರಾಮದ ಮೊಗವೀರ ಜನಾಂಗ ದವರ ಜಾಗವೂ ಈಗ ಸರಕಾರಿ ಸ್ಥಳವಾಗಿದೆ. ಈಗ 10 – 20 ವರ್ಷಗಳಿಂದ ಅಲ್ಲಿ ವಾಸಿಸುತ್ತಿದ್ದ ಸುಮಾರು 30 ಕುಟುಂಬಗಳಿಗೆ 94 – ಸಿ ಅನ್ವಯ ಹಕ್ಕುಪತ್ರವನ್ನು ನೀಡಲಾಗಿದೆ ಎಂದೂ ಗ್ರಾ. ಪಂ. ಪಿಡಿಒ ವಿವರಿಸಿದ್ದಾರೆ.

 

Vishwa News 24

Recent Posts

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…

1 day ago

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ : ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! vishwanews24

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…

1 day ago

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  – vishwanews24

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…

1 day ago

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು – vishwanews24

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…

1 day ago

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ – vishwanews24

 ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್‌.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…

1 day ago

ಉಡುಪಿ: ತುಳುನಾಡಿನ, ತುಳು ಜನರ ಭಾವನೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬೆಲೆ ಕೊಟ್ಟಿದ್ದಾರೆ : ರಮೇಶ್ ಕಾಂಚನ್ – vishwanews24

ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…

1 day ago