Featured

ಕಂದಕಕ್ಕೆ ಉರುಳಿದ ಕಾರು : ಎಂಟು ಮಂದಿ ಸಾವು – vishwanews24

ಕಂದಕಕ್ಕೆ ಉರುಳಿದ ಕಾರು : ಎಂಟು ಮಂದಿ ಸಾವು

ಜೈಪುರ: ಸ್ಕಾರ್ಪಿಯೋ ಎಸ್‌ಯುವಿ  ಕಾರೊಂದು ಸುಮಾರು 700 ಅಡಿ ಕಂದಕಕ್ಕೆ ಉರುಳಿ ಬಿದ್ದು, ಕನಿಷ್ಠ 8 ಮಂದಿ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ  ರಾಯಗಡದ ಅಂಬೆನಾಲಿ ಘಾಟ್ ಬಳಿ ನಡೆದಿದೆ.

ಮಹಾಬಲೇಶ್ವರ ಮತ್ತು ಪೋಲಾದ್‌ಪುರದ ನಡುವೆ ಇರುವ ಅಂಬೆನಾಲಿ ಘಾಟ್‌ ಬಳಿ ದುರಂತ ಸಂಭವಿಸಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಎಲ್ಲಾ 8 ಮಂದಿಯೂ ಸಾವನ್ನಪ್ಪಿದ್ದಾರೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ರಕ್ಷಣಾ ತಂಡಗಳು ಹಾಗೂ ಸ್ಥಳೀಯ ಪೊಲೀಸರು ಶೋಧ ಆರಂಭಿಸಿದ್ದಾರೆ.

ಇದನ್ನೂ ಓದಿ: 

ಅಂಶ್ ಸಮೀರ್ ಚವ್ಹಾಣ್ (19), ರಿತೇಶ್ ರಾಜೇಂದ್ರ ಲೋಖಂಡೆ (22), ಸುಹಾಸ್ ಜಿತೇಂದ್ರ ಲೋಖಂಡೆ (20), ಉತ್ಕರ್ಷ್ ಆನಂದ್ ಶಿಂಗ್ಟೆ (21), ನಿಖಿಲ್ ಅಭಿಮನ್ಯು ಶಿಂಗ್ಟೆ (25), ಮಹೇಶ್ ಅನಿಲ್ ಪವಾರ್ (25), ಆದಿತ್ಯ ಅಶೋಕ್ ಸಾಳುಂಖೆ (21), ರಾಜೇಶ್ ಅಶೋಕ್ ಕಾಟ್ಕರ್ (35) ಮೃತರು. ಬಲಿಪಶುಗಳೆಲ್ಲರೂ ಸತಾರಾ ಜಿಲ್ಲೆಯ ಮೂಲದವರೆಂದು ತಿಳಿದುಬಂದಿದೆ.

ಮೂಲಗಳ ಪ್ರಕಾರ, ಸ್ಕಾರ್ಪಿಯೋ ಎಸ್‌ಯುವಿ ಸತಾರಾ ಜಿಲ್ಲೆಯ ಅಸ್ಗಾಂವ್ ಗ್ರಾಮಕ್ಕೆ ಸೇರಿದ ವ್ಯಕ್ತಿಯದ್ದಾಗಿದೆ. ದಪೋಲಿಯಿಂದ ಸತಾರಾಗೆ ಹೋಗುತ್ತಿದ್ದಾಗ ವಾಹನ ಕಮರಿಗೆ ಬಿದ್ದಿದೆ. ಸುಮಾರು 500 ರಿಂದ 700 ಅಡಿ ಆಳದ ಕಂದಕಕ್ಕೆ ಉರುಳಿದ ಪರಿಣಾಮ ಕಾರಿನಲ್ಲಿದ್ದ ಎಲ್ಲರೂ ಮೃತಪಟ್ಟಿದ್ದಾರೆ. ಈಗಾಗಲೇ ರಕ್ಷಣಾ ತಂಡಗಳು 2 ಮೃತದೇಹಗಳನ್ನ ಹೊರತೆಗೆಯಲಾಗಿದ್ದು, ಇನ್ನುಳಿದ ಶವಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ ಎಂದು ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: 

ರಾಯಗಢ ಮತ್ತು ಸತಾರ ಜಿಲ್ಲೆಗಳ ಗಡಿಯಲ್ಲಿರುವ ಅಂಬೇನಾಲಿ ಘಾಟ್‌ ಅಪಘಾತಗಳ ಹಾಟ್‌ಸ್ಪಾಟ್‌ ಎಂದೇ ಕರೆಯಲಾಗುತ್ತದೆ. ಏಕೆಂದ್ರೆ ಇಲ್ಲಿ ಆಗಾಗ್ಗೆ ಭೀಕರ ರಸ್ತೆ ಅಪಘಾತಗಳು ನಡೆಯುತ್ತಲೇ ಇರುತ್ತವೆ. ಮೃತರು ಕೊಂಕಣ ಅಥವಾ ಮಹಾಬಲೇಶ್ವರಕ್ಕೆ ಭೇಟಿ ನೀಡಲು ಬಂದಿರಬೇಕು ಶಂಕಿಸಲಾಗಿದೆ. ಸದ್ಯ ರಕ್ಷಣಾ ತಂಡಗಳು ಶೋಧ ನಡೆಸುತ್ತಿದ್ದು, ಮತ್ತೊಂದು ಕಡೆ ಪೊಲೀಸರು ಅಪಘಾತದ ಕುರಿತು ತನಿಖೆ ನಡೆಸುತ್ತಿದ್ದಾರೆ.

Vishwa News 24

Recent Posts

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

16 hours ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…

16 hours ago

ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ -vishwanews24

ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…

17 hours ago

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…

17 hours ago

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

19 hours ago

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…

19 hours ago