ಅಲ್ಲೂರು: ಬಸ್ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಪರಿಣಾಮ 9 ಮಂದಿ ಪ್ರಯಾಣಿಕರು ಮೃತಪಟ್ಟಿದ್ದು, 12ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಆಂಧ್ರಪ್ರದೇಶದ ಅಲ್ಲೂರಿನಲ್ಲಿ ನಡೆದಿದೆ.
ಈ ಅಪಘಾತವು ಬೆಳಗಿನ ಜಾವ 5.30ರ ಸಮಯದಲ್ಲಿ, ತುಳಸಿಪಕಲು ಗ್ರಾಮದ ಬಳಿ ನಡೆದಿದೆ. ಘಟನೆಯಲ್ಲಿ ಬಸ್ ಸಂಪೂರ್ಣ ನಜ್ಜುಗುಜ್ಜಾಗಿದೆ. ಸ್ಥಳದಲ್ಲಿ ಮೃತದೇಹಗಳು ಚೆಲ್ಲಾಪಿಲ್ಲಿಯಾಗಿ ಬಟ್ಟೆಯ ರಾಶಿಯಂತೆ ಬಿದ್ದಿರುವುದು ಕಂಡುಬಂದಿದೆ.
“ಬಸ್ಸಿನಲ್ಲಿ 35 ಪ್ರಯಾಣಿಕರು, ಇಬ್ಬರು ಚಾಲಕರು ಮತ್ತು ಒಬ್ಬ ಕ್ಲೀನರ್ ಇದ್ದರು. 9 ಮಂದಿ ಸಾವನ್ನಪ್ಪಿದ್ದಾರೆ, 7 ಮಂದಿಯನ್ನು ಸ್ಥಳದಿಂದ 15 ಕಿ.ಮೀ ದೂರದಲ್ಲಿರುವ ಸಿಹೆಚ್ಸಿ ಚಿಂತೂರಿಗೆ ಸ್ಥಳಾಂತರಿಸಲಾಗಿದೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ” ಎಂದು ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದ್ದಾರೆ.
ತೀಕ್ಷ್ಣವಾದ ತಿರುವಿನಲ್ಲಿ ಸಾಗುವಾಗ ವಾಹನವು ರಸ್ತೆಯಿಂದ ಪಕ್ಕಕ್ಕೆ ಉರುಳಿ ಕಡಿದಾದ ಇಳಿಜಾರಿನ ಕೆಳಗೆ ಬಿದ್ದಿದೆ. ಸ್ಥಳೀಯ ಪೊಲೀಸರು ಮತ್ತು ರಕ್ಷಣಾ ತಂಡಗಳು ಪ್ರಯಾಣಿಕರಿಗೆ ಸಹಾಯ ಮಾಡಲು ಮತ್ತು ಅವಶೇಷಗಳನ್ನು ತೆರವುಗೊಳಿಸಲು ಸ್ಥಳಕ್ಕೆ ಧಾವಿಸಿವೆ ಎಂದು ವರದಿಯಾಗಿದೆ.
ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಘಟನೆಯ ಬಗ್ಗೆ ಆಘಾತ ವ್ಯಕ್ತಪಡಿಸಿ, ಗಾಯಾಳುಗಳಿಗೆ ನೀಡಲಾಗುವ ಪರಿಹಾರದ ಬಗ್ಗೆ ಅಧಿಕಾರಿಗಳೊಂದಿಗೆ ಮಾತನಾಡಿದರು. ಹಿರಿಯ ಅಧಿಕಾರಿಗಳು ತಕ್ಷಣ ಅಪಘಾತ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆಗಳನ್ನು ಕೈಗೊಳ್ಳುವಂತೆ ಅವರು ಆದೇಶಿಸಿದರು ಮತ್ತು ಎಲ್ಲಾ ಇಲಾಖೆಗಳು ಸಮನ್ವಯದಿಂದ ಕೆಲಸ ಮಾಡಲು ಮತ್ತು ಗಾಯಗೊಂಡವರಿಗೆ ಉತ್ತಮ ವೈದ್ಯಕೀಯ ಆರೈಕೆಯನ್ನು ನೀಡಬೇಕು ಎಂದು ಸೂಚನೆ ನೀಡಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…