ಅಲ್ಲೂರು: ಬಸ್ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಪರಿಣಾಮ 9 ಮಂದಿ ಪ್ರಯಾಣಿಕರು ಮೃತಪಟ್ಟಿದ್ದು, 12ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಆಂಧ್ರಪ್ರದೇಶದ ಅಲ್ಲೂರಿನಲ್ಲಿ ನಡೆದಿದೆ.
ಈ ಅಪಘಾತವು ಬೆಳಗಿನ ಜಾವ 5.30ರ ಸಮಯದಲ್ಲಿ, ತುಳಸಿಪಕಲು ಗ್ರಾಮದ ಬಳಿ ನಡೆದಿದೆ. ಘಟನೆಯಲ್ಲಿ ಬಸ್ ಸಂಪೂರ್ಣ ನಜ್ಜುಗುಜ್ಜಾಗಿದೆ. ಸ್ಥಳದಲ್ಲಿ ಮೃತದೇಹಗಳು ಚೆಲ್ಲಾಪಿಲ್ಲಿಯಾಗಿ ಬಟ್ಟೆಯ ರಾಶಿಯಂತೆ ಬಿದ್ದಿರುವುದು ಕಂಡುಬಂದಿದೆ.
“ಬಸ್ಸಿನಲ್ಲಿ 35 ಪ್ರಯಾಣಿಕರು, ಇಬ್ಬರು ಚಾಲಕರು ಮತ್ತು ಒಬ್ಬ ಕ್ಲೀನರ್ ಇದ್ದರು. 9 ಮಂದಿ ಸಾವನ್ನಪ್ಪಿದ್ದಾರೆ, 7 ಮಂದಿಯನ್ನು ಸ್ಥಳದಿಂದ 15 ಕಿ.ಮೀ ದೂರದಲ್ಲಿರುವ ಸಿಹೆಚ್ಸಿ ಚಿಂತೂರಿಗೆ ಸ್ಥಳಾಂತರಿಸಲಾಗಿದೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ” ಎಂದು ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದ್ದಾರೆ.
ತೀಕ್ಷ್ಣವಾದ ತಿರುವಿನಲ್ಲಿ ಸಾಗುವಾಗ ವಾಹನವು ರಸ್ತೆಯಿಂದ ಪಕ್ಕಕ್ಕೆ ಉರುಳಿ ಕಡಿದಾದ ಇಳಿಜಾರಿನ ಕೆಳಗೆ ಬಿದ್ದಿದೆ. ಸ್ಥಳೀಯ ಪೊಲೀಸರು ಮತ್ತು ರಕ್ಷಣಾ ತಂಡಗಳು ಪ್ರಯಾಣಿಕರಿಗೆ ಸಹಾಯ ಮಾಡಲು ಮತ್ತು ಅವಶೇಷಗಳನ್ನು ತೆರವುಗೊಳಿಸಲು ಸ್ಥಳಕ್ಕೆ ಧಾವಿಸಿವೆ ಎಂದು ವರದಿಯಾಗಿದೆ.
ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಘಟನೆಯ ಬಗ್ಗೆ ಆಘಾತ ವ್ಯಕ್ತಪಡಿಸಿ, ಗಾಯಾಳುಗಳಿಗೆ ನೀಡಲಾಗುವ ಪರಿಹಾರದ ಬಗ್ಗೆ ಅಧಿಕಾರಿಗಳೊಂದಿಗೆ ಮಾತನಾಡಿದರು. ಹಿರಿಯ ಅಧಿಕಾರಿಗಳು ತಕ್ಷಣ ಅಪಘಾತ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆಗಳನ್ನು ಕೈಗೊಳ್ಳುವಂತೆ ಅವರು ಆದೇಶಿಸಿದರು ಮತ್ತು ಎಲ್ಲಾ ಇಲಾಖೆಗಳು ಸಮನ್ವಯದಿಂದ ಕೆಲಸ ಮಾಡಲು ಮತ್ತು ಗಾಯಗೊಂಡವರಿಗೆ ಉತ್ತಮ ವೈದ್ಯಕೀಯ ಆರೈಕೆಯನ್ನು ನೀಡಬೇಕು ಎಂದು ಸೂಚನೆ ನೀಡಿದ್ದಾರೆ.
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್ಸಿಇಆರ್ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್ಸಿಇಆರ್ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…