Featured

ಕಂದಾಯ ದಾಖಲೆ ಮನೆ ಬಾಗಿಲಿಗೆ : ಜಿಲ್ಲಾಧಿಕಾರಿ ಕೂರ್ಮಾರಾವ್ ಎಂಂ-Vishwanews24

ಕಂದಾಯ ದಾಖಲೆ ಮನೆ ಬಾಗಿಲಿಗೆ : ಜಿಲ್ಲಾಧಿಕಾರಿ ಕೂರ್ಮಾರಾವ್ ಎಂಂ-Vishwanews24

ಉಡುಪಿ  : ಸಾರ್ವಜನಿಕರಿಗೆ ಕಂದಾಯ ಇಲಾಖೆವತಿಯಿಂದ ನೀಡಲಾಗುತ್ತಿರುವ ಮೂಲ ದಾಖಲೆಗಳನ್ನು ರೈತರ ಮನೆ ಬಾಗಿಲಿಗೆ ಉಚಿತವಾಗಿ ತಲುಪಿಸುವ ಕಂದಾಯ ದಾಖಲೆ ಮನೆ ಬಾಗಿಲಿಗೆ ಕಾರ್ಯಕ್ರಮವು ಶನಿವಾರ ಬೆಳಗ್ಗೆ 11 ಗಂಟೆಗೆ ಜಿಲ್ಲೆಯಾದ್ಯಂತ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು.

ಅವರು ಇಂದು ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ ಹಾಲ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಕಂದಾಯ ಇಲಾಖೆ ವತಿಯಿಂದ ಸಾರ್ವಜನಿಕರಿಗೆ ನೀಡುತ್ತಿರುವ ಮೂಲ ದಾಖಲೆಗಳಾದ ಪಹಣಿ, ಅಟ್ಲಾಸ್,ಹಿಸ್ಸಾ ಸ್ಕೆಚ್,ಆದಾಯ ಪ್ರಮಾಣ ಪತ್ರ ಮತ್ತು ಜಾತಿ ಪ್ರಮಾಣಪತ್ರಗಳನ್ನು ,ಈಗಾಗಲೇ ಪ್ರೂಟ್ಸ್ ತಂತ್ರಾoಶದಲ್ಲಿ ನೊಂದಣಿಯಾಗಿರುವ ರೈತರ ಮನೆ ಮನೆಗೆ ಭೇಟಿ, ಉಚಿತವಾಗಿ ವಿತರಿಸಲಾಗುವುದು. ಇದಕ್ಕಾಗಿ ಜಿಲ್ಲೆಯ 1,73,979 ರೈತರಿಗೆ ಸಂಬoದಿಸಿದ , 6,61,979 ಪಹಣಿಗಳು, 13,10,481 ಜಾತಿ ಪ್ರಮಾಣ ಪತ್ರ, 8,01,851 ಆದಾಯ ಪ್ರಮಾಣ ಪತ್ರಗಳು ಮತ್ತು 4,62,861 ಅಟ್ಲಾಸ್ ಗಳನ್ನು ವಿತರಿಸಲು ಗುರಿ ಹೊಂದಲಾಗಿದ್ದು, ಈಗಾಗಲೇ 3,79,824 ಪಹಣಿ, 2,13,081 ಜಾತಿ ಮತ್ತು ಆದಾಯ ಪ್ರಮಾಣ ಪತ್ರ 25,081 ಅಟ್ಲಾಸ್ ಗಳನ್ನು ಮುದ್ರಣ ಮಾಡಿ ವಿತರಿಸಲು ಸಿದ್ದಪಡಿಸಿಕೊಳ್ಳಲಾಗಿದ್ದು, ಈ ಎಲ್ಲಾ ದಾಖಲಾತಿಗಳನ್ನು ಕುಟುಂಬವಾರು ಜೋಡಿಸಿ, ಕಂದಾಯ ಇಲಾಖೆ ಸಿಬ್ಬಂದಿಗಳ ಮೂಲಕ ಜಿಲ್ಲೆಯ 267 ಕಂದಾಯ ಗ್ರಾಮಗಳ ರೈತರ ಮನೆ ಬಾಗಿಲಿಗೆ ವಿತರಿಸಲಾಗುವುದು ಎಂದರು.

ಒಂದು ವೇಳೆ ದಾಖಲೆಗಳು ಮುದ್ರಣವಾಗದೇ , ರೈತರಿಗೆ ಮುದ್ದಾಂ ವಿತರಿಸಲು ಸಾಧ್ಯವಾಗದೇ ಇದ್ದಲ್ಲಿ , ಅಂತಹ ರೈತರಿಗೆ ಮಾರ್ಚ್ 21 ರಿಂದ 26 ರ ವರೆಗೆ ವಿಶೇಷ ಅಭಿಯಾನದ ಮೂಲಕ , ಜಿಲ್ಲೆಯ ತಾಲೂಕು ಕಚೇರಿ, ನಾಡ ಕಚೇರಿ, ಗ್ರಾಮ ಲೆಕ್ಕಾದಿಕಾರಿಗಳ ಕಚೇರಿಯಲ್ಲಿ ಉಚಿತವಾಗಿ ವಿತರಿಸಲಾಗುವುದು, ದಾಖಲೆಗಳನ್ನು ಪಡೆದ ರೈತರು ಗ್ರಾಮ ಕರಣಿಕರ ಬಳಿ ಇರುವ ಸ್ವೀಕೃತಿಯಲ್ಲಿ ದಾಖಲೆ ಪಡೆದ ಬಗ್ಗೆ ದೂರವಾಣಿ ಸಂಖ್ಯೆಯೊoದಿಗೆ ಸಹಿ ನಮೂದಿಸುವಂತೆ ತಿಳಿಸಿದರು.

ಮಾರ್ಚ್ 12 ರಂದು ಉಡುಪಿ ತಾಲೂಕಿನ ತೆಂಕನಿಡಿಯೂರು, ಕಾಪು ವಿನ ಉಳಿಯಾರುಗೋಳಿ, ಬ್ರಹ್ಮಾವರದ ಚೇರ್ಕಾಡಿ, ಕಾರ್ಕಳದ ಕುಕ್ಕಂದೂರು, ಹೆಬ್ರಿಯ ಹೆಬ್ರಿ, ಕುಂದಾಪುರದ ಕರ್ಕುಂಜೆ, ಬೈಂದೂರು ನ ಕಾಲ್ತೋಡು ನಲ್ಲಿ ಕಂದಾಯ ದಾಖಲೆ ಮನೆ ಬಾಗಿಲಿಗೆ ಕಾರ್ಯಕ್ರಮದ ಉದ್ಘಾಟನೆ ನಡೆಯಲಿದೆ ಎಂದರು.

ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಉಪಸ್ಥಿತರಿದ್ದರು.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

2 days ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago