ಬೆಂಗಳೂರು: ಬಿಡದಿ ಬಳಿಯ ಈಗಲ್ಟೌನ್ ರೆಸಾರ್ಟ್ನಲ್ಲಿ ನಡೆದಿದ್ದ ಶಾಸಕ ಆನಂದ್ ಸಿಂಗ್ ಮೇಲಿನ ಹಲ್ಲೆ ಪ್ರಕರಣ ಸಂಬಂಧ ಕಂಪ್ಲಿಯ ಕಾಂಗ್ರೆಸ್ ಶಾಸಕ ಜೆ.ಎನ್. ಗಣೇಶ್ ಅವರನ್ನು ಗುಜರಾತ್ನಲ್ಲಿ ಬಂಧಿಸಲಾಗಿದೆ.
ಆನಂದ್ ಸಿಂಗ್ ಮೇಲೆ ತೀವ್ರ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಗಣೇಶ್ ಘಟನೆ ನಡೆದ ನಂತರ ತಲೆಮರೆಸಿಕೊಂಡಿದ್ದರು. ಗಣೇಶ್ರನ್ನು ಬಂಧಿಸಲು ಪೊಲೀಸರು ಸಾಕಷ್ಟು ಹುಡುಕಾಟ ನಡೆಸಿದ್ದರು. ಈಗ ಹಲ್ಲೆ ನಡೆದು ಬರೋಬ್ಬರಿ 1 ತಿಂಗಳ ಬಳಿಕ ಪೊಲೀಸರು ಗಣೇಶ್ ಅವರನ್ನು ಬಂಧಿಸಿದ್ದಾರೆ.
ಈ ನಡುವೆ ಗಣೇಶ್ ನಿರೀಕ್ಷಣಾ ಜಾಮೀನು ಕೋರಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ಸ್ವೀಕರಿಸಿದ ನ್ಯಾಯಾಲಯ ಫೆ. 25 ಕ್ಕೆ ವಿಚಾರಣೆ ನಿಗದಿಪಡಿಸಿತ್ತು. ಆದರೆ ಮಂಗಳವಾರ ಗಣೇಶ್ ಪರ ವಕೀಲರು ಜಾಮೀನು ಅರ್ಜಿ ವಾಪಸ್ ಪಡೆದಿದ್ದರು ಎಂದು ತಿಳಿದು ಬಂದಿತ್ತು.
ಜನವರಿ 20ರಂದು ಬಿಡದಿಯ ಈಗಲ್ಟನ್ ರೆಸಾರ್ಟ್ ನಲ್ಲಿ ಕಾಂಗ್ರೆಸ್ ಶಾಸಕರಾದ ಆನಂದ್ ಸಿಂಗ್ ಅವರ ಮೇಲೆ ಅದೇ ಪಕ್ಷದ ಶಾಸಕ ಕಂಪ್ಲಿ ಗಣೇಶ್ ಹಲ್ಲೆ ನಡೆದಿದ್ದರು. ಪರಿಣಾಮ ಆನಂದ್ ಸಿಂಗ್ ಅವರ ಕಣ್ಣು, ಮುಖ, ತಲೆ ಹಾಗೂ ಕಿಬ್ಬೊಟ್ಟೆಗೆ ಗಾಯಗಳಾಗಿತ್ತು. ಅವರು ಬಳಿಕ ಶೇಷಾದ್ರಿಪುರ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದರು.ಹಲ್ಲೆ ನಡೆಸಿದ್ದ ಗಣೇಶ್ ವಿರುದ್ಧ ಬಿಡದಿ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿತ್ತು.
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…
ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…
ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…