ಬೆಂಗಳೂರು: ಬಿಡದಿ ಬಳಿಯ ಈಗಲ್ಟೌನ್ ರೆಸಾರ್ಟ್ನಲ್ಲಿ ನಡೆದಿದ್ದ ಶಾಸಕ ಆನಂದ್ ಸಿಂಗ್ ಮೇಲಿನ ಹಲ್ಲೆ ಪ್ರಕರಣ ಸಂಬಂಧ ಕಂಪ್ಲಿಯ ಕಾಂಗ್ರೆಸ್ ಶಾಸಕ ಜೆ.ಎನ್. ಗಣೇಶ್ ಅವರನ್ನು ಗುಜರಾತ್ನಲ್ಲಿ ಬಂಧಿಸಲಾಗಿದೆ.
ಆನಂದ್ ಸಿಂಗ್ ಮೇಲೆ ತೀವ್ರ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಗಣೇಶ್ ಘಟನೆ ನಡೆದ ನಂತರ ತಲೆಮರೆಸಿಕೊಂಡಿದ್ದರು. ಗಣೇಶ್ರನ್ನು ಬಂಧಿಸಲು ಪೊಲೀಸರು ಸಾಕಷ್ಟು ಹುಡುಕಾಟ ನಡೆಸಿದ್ದರು. ಈಗ ಹಲ್ಲೆ ನಡೆದು ಬರೋಬ್ಬರಿ 1 ತಿಂಗಳ ಬಳಿಕ ಪೊಲೀಸರು ಗಣೇಶ್ ಅವರನ್ನು ಬಂಧಿಸಿದ್ದಾರೆ.
ಈ ನಡುವೆ ಗಣೇಶ್ ನಿರೀಕ್ಷಣಾ ಜಾಮೀನು ಕೋರಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ಸ್ವೀಕರಿಸಿದ ನ್ಯಾಯಾಲಯ ಫೆ. 25 ಕ್ಕೆ ವಿಚಾರಣೆ ನಿಗದಿಪಡಿಸಿತ್ತು. ಆದರೆ ಮಂಗಳವಾರ ಗಣೇಶ್ ಪರ ವಕೀಲರು ಜಾಮೀನು ಅರ್ಜಿ ವಾಪಸ್ ಪಡೆದಿದ್ದರು ಎಂದು ತಿಳಿದು ಬಂದಿತ್ತು.
ಜನವರಿ 20ರಂದು ಬಿಡದಿಯ ಈಗಲ್ಟನ್ ರೆಸಾರ್ಟ್ ನಲ್ಲಿ ಕಾಂಗ್ರೆಸ್ ಶಾಸಕರಾದ ಆನಂದ್ ಸಿಂಗ್ ಅವರ ಮೇಲೆ ಅದೇ ಪಕ್ಷದ ಶಾಸಕ ಕಂಪ್ಲಿ ಗಣೇಶ್ ಹಲ್ಲೆ ನಡೆದಿದ್ದರು. ಪರಿಣಾಮ ಆನಂದ್ ಸಿಂಗ್ ಅವರ ಕಣ್ಣು, ಮುಖ, ತಲೆ ಹಾಗೂ ಕಿಬ್ಬೊಟ್ಟೆಗೆ ಗಾಯಗಳಾಗಿತ್ತು. ಅವರು ಬಳಿಕ ಶೇಷಾದ್ರಿಪುರ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದರು.ಹಲ್ಲೆ ನಡೆಸಿದ್ದ ಗಣೇಶ್ ವಿರುದ್ಧ ಬಿಡದಿ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿತ್ತು.
ಪಡುಬಿದ್ರಿ : ವ್ಯಕ್ತಿ ನಾಪತ್ತೆ ; ಪತ್ತೆಗೆ ಮನವಿ ಪಡುಬಿದ್ರಿ : ಕಂಚಿನಡ್ಕದ ನಿವಾಸಿ ರವೀಂದ್ರ (35) ಪಡುಬಿದ್ರಿ ಪೇಟೆಗೆ…
ಪಡುಬಿದ್ರಿ ಪೊಲೀಸರ ವಿಶೇಷ ಕಾರ್ಯಾಚರಣೆ :ರಸ್ತೆ ಅಪಘಾತ ಪ್ರಕರಣದಲ್ಲಿ 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕ ಅರೆಸ್ಟ್ ಉಡುಪಿ: 2002ರಲ್ಲಿ…
ಬೆಂಗಳೂರು : ಸ್ವಾಮೀಜಿ ವೇಷದಲ್ಲಿ ಬಂದು ಕೈಚಳಕ; ಮನೆಯಲ್ಲಿ ದೋಷ, ಸಾವಿನ ಕಂಟಕ ಎಂದು ಹೆದರಿಸಿ ಚಿನ್ನಾಭರಣ ದೋಚಿ ಪರಾರಿ…
ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ ; ಆರೋಪಿ ಅರೆಸ್ಟ್ ಬೆಳ್ತಂಗಡಿ : ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಬಾಲಕಿ…
ಮಂತ್ರಾಲಯ ಬಳಿ ಅಪಘಾತ: ಮಂಗಳೂರಿನ ಹಾಪ್ಕಾಮ್ಸ್ ನ ಪ್ರಧಾನ ವ್ಯವಸ್ಥಾಪಕ ರವಿ ಶೆಟ್ಟಿ ನಿಧನ ಕರ್ನೂಲು: ಕರ್ನೂಲು ಜಿಲ್ಲೆಯ ಮಂತ್ರಾಲಯದ…
ಉಡುಪಿ ಬಡಗುಬೆಟ್ಟು ಕಂಬಳಕ್ಕೆ ತಡೆ: ಆದೇಶ ತಕ್ಷಣ ಹಿಂಪಡೆಯಲು ಶಾಸಕ ಗುರ್ಮೆ ಆಗ್ರಹ ಉಡುಪಿ: ಉಡುಪಿ ಬಡಗುಬೆಟ್ಟು ಕೋಟಿ–ಚೆನ್ನಯ ಕಂಬಳಕ್ಕೆ…