Featured

ಕಂಪ್ಲಿ ಶಾಸಕ ಗಣೇಶ್​ಗೆ ಷರತ್ತುಬದ್ಧ ಜಾಮೀನು ಮಂಜೂರು – Vishwanews24

ಬೆಂಗಳೂರು: ಕಂಪ್ಲಿ ಶಾಸಕ ಜಿಎನ್​ ಗಣೇಶ್​ಗೆ ಕೊನೆಗೂ ಜಾಮೀನು ಮಂಜೂರಾಗಿದೆ. ಬಿಡದಿಯ ಈಗಲ್ಟನ್ ರೆಸಾರ್ಟ್ ನಲ್ಲಿ ವಿಜಯಪುರ ಶಾಸಕ ಆನಂದ್‌ ಸಿಂಗ್‌ ಮೇಲೆ ಹಲ್ಲೆ ನಡೆಸಿ ಫೆ.21 ರಿಂದ ಜೈಲು ವಾಸದಲ್ಲಿದ್ದ ಕಂಪ್ಲಿ ಗಣೇಶ್​ಗೆ ಹೈಕೋರ್ಟ್​ ಏಕ ಸದಸ್ಯ ಪೀಠ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.

ಸಾಕ್ಷ್ಯ ನಾಶ ಮಾಡದಂತೆ ಹಾಗೂ ಇಂತಹ ಮರುಕಳಿಸದಂತೆ ಎಚ್ಚರಿಕೆ ನೀಡಿರುವ ಹೈಕೋರ್ಟ್ ನ ಏಕ ಸದಸ್ಯ ಪೀಠ 2 ಲಕ್ಷ ಬಾಂಡ್ ಹಾಗೂ ಇಬ್ಬರ ಶ್ಯೂರಿಟಿ ಪಡೆದು ಜಾಮೀನು ಮಂಜೂರು ಮಾಡಲಾಗಿದೆ.

ಗಣೇಶ್ ಪರ ಜಾಮೀನು ನೀಡುವಂತೆ ವಾದ ಮಂಡಿಸಿದ ವಕೀಲ ಬಿ.ವಿ.ಆಚಾರ್ಯ, ಈ ಘಟನೆ ಪೂರ್ವನಿಯೋಜಿತವಲ್ಲ. ಮೊದಲು ಆನಂದ್ ಸಿಂಗ್​ ಅವರೇ ಹಲ್ಲೆ ನಡೆಸಿದ್ದರು ಇದಕ್ಕೆ ಪ್ರತಿಯಾಗಿ ಆತ್ಮರಕ್ಷಣೆಗಾಗಿ ಗಣೇಶ್ ಪ್ರತಿದಾಳಿ ನಡೆಸಿದ್ದಾರೆ. ಇನ್ನು ಘಟನೆಗೆ ಸಚಿವರು, ಶಾಸಕರೇ ಸಾಕ್ಷಿಗಳಾಗಿರುವ ಕಾರಣ ಅವರ ಮೇಲೆ ಪ್ರಭಾವ ಬೀರಲು ಸಾಧ್ಯವಿಲ್ಲ ಈ ಆಧಾರದ ಮೇಲೆ ಕಂಪ್ಲಿ ಗಣೇಶ್​ಗೆ ಜಾಮೀನು ನೀಡಬೇಕಾಗಿದೆ ಅಂತಾ ಬಿ.ವಿ.ಆಚಾರ್ಯ ಮನವಿ ಮಾಡಿದ್ದರು. ಇದಕ್ಕೆ ಪ್ರತಿಯಾಗಿಆರೋಪಿ ಹೊರ ಬಂದರೆ ಆನಂದ್ ಸಿಂಗ್​ ಜೀವ ಅಪಾಯವಿದೆ ಎಂದು ವಾದಿಸಿದ್ದರು. ವಾದ ಪ್ರತಿವಾದ ಆಲಿಸಿ ತೀರ್ಪು ಕಾಯ್ದಿರಿಸಿದ್ದ ಕೋರ್ಟ್ ಇಂದು ಜಾಮೀನು ಮಂಜೂರು ಮಾಡಿದೆ.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

11 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

11 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

12 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

12 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

13 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

13 hours ago