ಬೆಂಗಳೂರು: ಕಂಪ್ಲಿ ಶಾಸಕ ಜಿಎನ್ ಗಣೇಶ್ಗೆ ಕೊನೆಗೂ ಜಾಮೀನು ಮಂಜೂರಾಗಿದೆ. ಬಿಡದಿಯ ಈಗಲ್ಟನ್ ರೆಸಾರ್ಟ್ ನಲ್ಲಿ ವಿಜಯಪುರ ಶಾಸಕ ಆನಂದ್ ಸಿಂಗ್ ಮೇಲೆ ಹಲ್ಲೆ ನಡೆಸಿ ಫೆ.21 ರಿಂದ ಜೈಲು ವಾಸದಲ್ಲಿದ್ದ ಕಂಪ್ಲಿ ಗಣೇಶ್ಗೆ ಹೈಕೋರ್ಟ್ ಏಕ ಸದಸ್ಯ ಪೀಠ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.
ಸಾಕ್ಷ್ಯ ನಾಶ ಮಾಡದಂತೆ ಹಾಗೂ ಇಂತಹ ಮರುಕಳಿಸದಂತೆ ಎಚ್ಚರಿಕೆ ನೀಡಿರುವ ಹೈಕೋರ್ಟ್ ನ ಏಕ ಸದಸ್ಯ ಪೀಠ 2 ಲಕ್ಷ ಬಾಂಡ್ ಹಾಗೂ ಇಬ್ಬರ ಶ್ಯೂರಿಟಿ ಪಡೆದು ಜಾಮೀನು ಮಂಜೂರು ಮಾಡಲಾಗಿದೆ.
ಗಣೇಶ್ ಪರ ಜಾಮೀನು ನೀಡುವಂತೆ ವಾದ ಮಂಡಿಸಿದ ವಕೀಲ ಬಿ.ವಿ.ಆಚಾರ್ಯ, ಈ ಘಟನೆ ಪೂರ್ವನಿಯೋಜಿತವಲ್ಲ. ಮೊದಲು ಆನಂದ್ ಸಿಂಗ್ ಅವರೇ ಹಲ್ಲೆ ನಡೆಸಿದ್ದರು ಇದಕ್ಕೆ ಪ್ರತಿಯಾಗಿ ಆತ್ಮರಕ್ಷಣೆಗಾಗಿ ಗಣೇಶ್ ಪ್ರತಿದಾಳಿ ನಡೆಸಿದ್ದಾರೆ. ಇನ್ನು ಘಟನೆಗೆ ಸಚಿವರು, ಶಾಸಕರೇ ಸಾಕ್ಷಿಗಳಾಗಿರುವ ಕಾರಣ ಅವರ ಮೇಲೆ ಪ್ರಭಾವ ಬೀರಲು ಸಾಧ್ಯವಿಲ್ಲ ಈ ಆಧಾರದ ಮೇಲೆ ಕಂಪ್ಲಿ ಗಣೇಶ್ಗೆ ಜಾಮೀನು ನೀಡಬೇಕಾಗಿದೆ ಅಂತಾ ಬಿ.ವಿ.ಆಚಾರ್ಯ ಮನವಿ ಮಾಡಿದ್ದರು. ಇದಕ್ಕೆ ಪ್ರತಿಯಾಗಿಆರೋಪಿ ಹೊರ ಬಂದರೆ ಆನಂದ್ ಸಿಂಗ್ ಜೀವ ಅಪಾಯವಿದೆ ಎಂದು ವಾದಿಸಿದ್ದರು. ವಾದ ಪ್ರತಿವಾದ ಆಲಿಸಿ ತೀರ್ಪು ಕಾಯ್ದಿರಿಸಿದ್ದ ಕೋರ್ಟ್ ಇಂದು ಜಾಮೀನು ಮಂಜೂರು ಮಾಡಿದೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…