ಬೆಂಗಳೂರು: ಕಂಪ್ಲಿ ಶಾಸಕ ಜಿಎನ್ ಗಣೇಶ್ಗೆ ಕೊನೆಗೂ ಜಾಮೀನು ಮಂಜೂರಾಗಿದೆ. ಬಿಡದಿಯ ಈಗಲ್ಟನ್ ರೆಸಾರ್ಟ್ ನಲ್ಲಿ ವಿಜಯಪುರ ಶಾಸಕ ಆನಂದ್ ಸಿಂಗ್ ಮೇಲೆ ಹಲ್ಲೆ ನಡೆಸಿ ಫೆ.21 ರಿಂದ ಜೈಲು ವಾಸದಲ್ಲಿದ್ದ ಕಂಪ್ಲಿ ಗಣೇಶ್ಗೆ ಹೈಕೋರ್ಟ್ ಏಕ ಸದಸ್ಯ ಪೀಠ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.
ಸಾಕ್ಷ್ಯ ನಾಶ ಮಾಡದಂತೆ ಹಾಗೂ ಇಂತಹ ಮರುಕಳಿಸದಂತೆ ಎಚ್ಚರಿಕೆ ನೀಡಿರುವ ಹೈಕೋರ್ಟ್ ನ ಏಕ ಸದಸ್ಯ ಪೀಠ 2 ಲಕ್ಷ ಬಾಂಡ್ ಹಾಗೂ ಇಬ್ಬರ ಶ್ಯೂರಿಟಿ ಪಡೆದು ಜಾಮೀನು ಮಂಜೂರು ಮಾಡಲಾಗಿದೆ.
ಗಣೇಶ್ ಪರ ಜಾಮೀನು ನೀಡುವಂತೆ ವಾದ ಮಂಡಿಸಿದ ವಕೀಲ ಬಿ.ವಿ.ಆಚಾರ್ಯ, ಈ ಘಟನೆ ಪೂರ್ವನಿಯೋಜಿತವಲ್ಲ. ಮೊದಲು ಆನಂದ್ ಸಿಂಗ್ ಅವರೇ ಹಲ್ಲೆ ನಡೆಸಿದ್ದರು ಇದಕ್ಕೆ ಪ್ರತಿಯಾಗಿ ಆತ್ಮರಕ್ಷಣೆಗಾಗಿ ಗಣೇಶ್ ಪ್ರತಿದಾಳಿ ನಡೆಸಿದ್ದಾರೆ. ಇನ್ನು ಘಟನೆಗೆ ಸಚಿವರು, ಶಾಸಕರೇ ಸಾಕ್ಷಿಗಳಾಗಿರುವ ಕಾರಣ ಅವರ ಮೇಲೆ ಪ್ರಭಾವ ಬೀರಲು ಸಾಧ್ಯವಿಲ್ಲ ಈ ಆಧಾರದ ಮೇಲೆ ಕಂಪ್ಲಿ ಗಣೇಶ್ಗೆ ಜಾಮೀನು ನೀಡಬೇಕಾಗಿದೆ ಅಂತಾ ಬಿ.ವಿ.ಆಚಾರ್ಯ ಮನವಿ ಮಾಡಿದ್ದರು. ಇದಕ್ಕೆ ಪ್ರತಿಯಾಗಿಆರೋಪಿ ಹೊರ ಬಂದರೆ ಆನಂದ್ ಸಿಂಗ್ ಜೀವ ಅಪಾಯವಿದೆ ಎಂದು ವಾದಿಸಿದ್ದರು. ವಾದ ಪ್ರತಿವಾದ ಆಲಿಸಿ ತೀರ್ಪು ಕಾಯ್ದಿರಿಸಿದ್ದ ಕೋರ್ಟ್ ಇಂದು ಜಾಮೀನು ಮಂಜೂರು ಮಾಡಿದೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…