Featured

ಕಂಬಳದ ಅನುಮತಿಗಾಗಿ ಕಾನೂನು ಹೋರಾಟ: ಹೈಕೋರ್ಟಿಗೆ ಮಧ್ಯಂತರ ಅರ್ಜಿ ಸಲ್ಲಿಸಿದ ಶಾಸಕ ಅಶೋಕ್ ರೈ – vishwanews24

ಕಂಬಳದ ಅನುಮತಿಗಾಗಿ ಕಾನೂನು ಹೋರಾಟ: ಹೈಕೋರ್ಟಿಗೆ ಮಧ್ಯಂತರ ಅರ್ಜಿ ಸಲ್ಲಿಸಿದ ಶಾಸಕ ಅಶೋಕ್ ರೈ

ಪುತ್ತೂರು: ಬೆಂಗಳೂರು ಕಂಬಳಕ್ಕೆ ಅವಕಾಶ ನೀಡಬಾರದು ಎಂದು ಪೆಟಾ ಸಂಘಟನೆ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದು, ಕಂಬಳದ ಪರವಾಗಿ ವೈಯಕ್ತಿಕ ನೆಲೆಯಲ್ಲಿ ತಾನು ಕಾನೂನು ಹೋರಾಟಕ್ಕೆ ಮುಂದಾಗಿದ್ದೇನೆ ಎಂದು ಬೆಂಗಳೂರು ಕಂಬಳಕೂಟದ ಗೌರವಾಧ್ಯಕ್ಷ, ಶಾಸಕ ಅಶೋಕ್‌ ಕುಮಾರ್‌ ರೈ ಹೇಳಿದರು.

ವಕೀಲ ಧ್ಯಾನ್‌ ಚಿನ್ನಪ್ಪ ಅವರು ಹೈಕೋರ್ಟ್‌ನ ಮುಖ್ಯ ನ್ಯಾಯ ಮೂರ್ತಿ ಎನ್‌.ವಿ ಅಂಜಾರಿಯಾ ಮತ್ತು ನ್ಯಾ| ಕೆ.ವಿ. ಅರವಿಂದ್‌ ಅವರ ಪೀಠದ ಮುಂದೆ ಸೋಮವಾರ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಿಂದ ಬೆಂಗಳೂರಿಗೆ ಕೋಣಗಳನ್ನು ತರುವುದು ತ್ರಾಸದಾ ಯಕವಾಗಿದ್ದು, ಇದರಿಂದ ಕೋಣಗಳಿಗೆ ತೊಂದರೆಯಾಗುತ್ತಿದೆ ಎಂದು ಪಿಐಎಲ್‌ನಲ್ಲಿ ಉಲ್ಲೇಖಿಸಲಾಗಿದೆ.

ಈ ಬಗ್ಗೆ ಪತ್ರಕರ್ತರ ಜತೆ ಮಾತನಾಡಿದ ಶಾಸಕ ರೈ, ಬೆಂಗಳೂರಿನಲ್ಲಿ ಕಂಬಳ ಕೂಟಕ್ಕೆ ತಯಾರಿ ನಡೆಸುತ್ತಿದ್ದ ಹೊತ್ತಿನಲ್ಲೇ ಈ ಬೆಳವಣಿಗೆಗೆ ನಡೆದಿದೆ. ಹಿಂದೆ ನಾವು ನ್ಯಾಯಾಲಯಕ್ಕೆ ಅಫಿದವಿತ್‌ ಸಲ್ಲಿಸಿದ್ದಾಗ ದ.ಕ., ಉಡುಪಿ ಜಿಲ್ಲೆಯಲ್ಲಿ ಕಂಬಳ ನಡೆಯುವುದು ಎಂದು ಉಲ್ಲೇಖಿಸಿದ್ದೆವು. ಈ ಅಂಶವನ್ನು ಇಟ್ಟುಕೊಂಡು ಪೆಟಾದವರು ಕಂಬಳ ಉಡುಪಿ, ದ.ಕ.ಜಿಲ್ಲೆಗೆ ಮಾತ್ರ ಸೀಮಿತ. ಬೇರೆ ಕಡೆ ಅವಕಾಶ ನೀಡಬಾರದು ಎಂದು ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ. ಆದರೆ ನಾವು ಅಪಿಧವಿತ್‌ನಲ್ಲಿ ಬೇರೆ ಕಡೆ ಕಂಬಳ ಮಾಡಬಾರದು ಎಂದು ಎಲ್ಲಿಯೂ ಉಲ್ಲೇಖಿಸಿಲ್ಲ ಎಂದರು.

ಈ ಬಗ್ಗೆ ನಾನು ವೈಯಕ್ತಿಕ ನೆಲೆಯಲ್ಲಿ ನ್ಯಾಯವಾದಿಗಳ ಮೂಲಕ ಹೈಕೋರ್ಟ್‌ಗೆ ಅ.22ರಂದು ಅರ್ಜಿ ಹಾಕಿದ್ದು, ಸರಕಾರದ ಪರವಾಗಿ ಪೂರಕ ಮಾಹಿತಿ ನೀಡಲು ನನ್ನನ್ನು ಪ್ರತಿವಾದಿಯನ್ನಾಗಿ ಪರಿಗಣಿಸಬೇಕು ಎಂದು ಕೋರಿದ್ದೇನೆ. ಬೆಂಗಳೂರಿನಲ್ಲಿ ಕಂಬಳ ನಡೆಸಲು ಅವಕಾಶ ಸಿಗಬೇಕು ಎನ್ನುವ ನಿಟ್ಟಿನಲ್ಲಿ ಕಾನೂನು ಹೋರಾಟ ಮುಂದುವರಿಸಲಿದ್ದೇನೆ ಎಂದರು.

 

ಬೆಂಗಳೂರು ಕಂಬಳ ವಿರುದ್ಧ ಪೆಟಾ ತಗಾದೆ
ತುಳುನಾಡಿನ ಜಾನಪದ ಕ್ರೀಡೆ ಕಂಬಳವನ್ನು ನಿಷೇಧಿಸುವಂತೆ ಈ ಹಿಂದೆ ಪೆಟಾ ಸಂಘಟನೆ ಹೈಕೋರ್ಟ್‌ ಮತ್ತು ಸುಪ್ರೀಂ ಕೋರ್ಟ್‌ನಲ್ಲಿ ದಾವೆ ಹೂಡಿತ್ತು. ಇದರ ವಿರುದ್ಧ ಕಂಬಳ ಅಭಿಮಾನಿಗಳು ಪ್ರತಿಭಟನೆ ನಡೆಸಿದ್ದರು. ಇದಾದ ಬಳಿಕ ಅಧ್ಯಾದೇಶ ಮೂಲಕ ಕಂಬಳಕ್ಕೆ ಅವಕಾಶ ನೀಡಿ ಬಳಿಕ ಕಾನೂನಿನಲ್ಲಿ ತಿದ್ದುಪಡಿ ತಂದು ಕಂಬಳ ಕ್ರೀಡೆಗೆ ಅವಕಾಶ ನೀಡಲಾಗಿತ್ತು. ಈಗ ಬೆಂಗಳೂರು ಕಂಬಳ ವಿರುದ್ಧ ಪೆಟಾ ಮತ್ತೆ ತಗಾದೆ ತೆಗೆದಿರುವುದು ಕಂಬಳ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ.

Vishwa News 24

Recent Posts

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ -vishwanews24

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…

2 hours ago

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ -vishwanews24

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…

2 hours ago

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ -vishwanews24

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…

2 hours ago

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

6 hours ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

6 hours ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

6 hours ago