Featured

ಕಂಬಳದ ಭೀಷ್ಮನಿಗೆ ಅವಹೇಳನ: ಕಾರ್ಕಳ ಬ್ಲಾಕ್ ಕಾಂಗ್ರೆಸ್ ಖಂಡನೆ – vishwanews24

ಕಂಬಳದ ಭೀಷ್ಮನಿಗೆ ಅವಹೇಳನ: ಕಾರ್ಕಳ ಬ್ಲಾಕ್ ಕಾಂಗ್ರೆಸ್ ಖಂಡನೆ

ಕಾರ್ಕಳ: ಇತ್ತೀಚೆಗೆ ಮಂಗಳೂರು ಕಂಬಳದಲ್ಲಿ ಕಂಬಳ ಭೀಷ್ಮ ಎಂದೇ ಕರೆಯಲ್ಪಡುವ ಗುಣಪಾಲ ಕಡಂಬರನ್ನು ಕಂಬಳದ ವೇದಿಕೆಯಲ್ಲಿ ವ್ಯಕ್ತಿಯೊರ್ವರು ಸಾರ್ವಜನಿಕವಾಗಿ ಅವಹೇಳನ ಮಾಡಿರುವುದನ್ನು ತೀವ್ರವಾಗಿ ಖಂಡಿಸುತ್ತೇನೆ ಮತ್ತು ಆ ವ್ಯಕ್ತಿಯು ತಕ್ಷಣ ಕ್ಷಮೆ ಯಾಚಿಸುವಂತೆ ಆಗ್ರಹಿಸುತ್ತೇನೆ ಎಂದು ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದರಾವ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಂಬಳ ಕ್ಷೇತ್ರಕ್ಕೆ ಗುಣಪಾಲ ಕಡಂಬರ ಕೊಡುಗೆ ಅಪಾರ ಕಂಬಳಕ್ಕಾಗಿ ತನ್ನ ಬದುಕನ್ನೆ ಮುಡುಪಾಗಿಟ್ಟ ಶ್ರೇಷ್ಠ ವ್ಯಕ್ತಿ. ಅವರ ಗಟ್ಟಿ ನಿರ್ಧಾರಗಳಿಂದ ಕಂಬಳದಲ್ಲಿ ಶಿಸ್ತು ಪಾಲನೆಯಾಗುತ್ತಿದೆ. ಕಂಬಳದ ಬೆಳವಣಿಗೆಗೆ ಅಕಾಡೆಮಿಯನ್ನು ಪ್ರಾರಂಭಿಸಿ ಅನೇಕ ಉದಯೋನ್ಮುಖ ಓಟಗಾರರು ಮತ್ತು ಪರಿಚಾರಕರು ಬೆಳೆಯಲು ಕಾರಣರಾದರು. ಅನೇಕ ಹೊಸ ಕಂಬಳ ಪ್ರಾರಂಭಕ್ಕೂ ಅವರು ಕಾರಣಕರ್ತರಾಗಿದ್ದಾರೆ.

ಕಂಬಳದಲ್ಲಿ ಗುಣಪಾಲ ಕಡಂಬರ ಧ್ವನಿಯೇ ಒಂದು ವಿಶೇಷ ಆಕರ್ಷಣೆಯಾಗಿದೆ. ಅವರ ಧ್ವನಿಯಲ್ಲಿ ಕಂಬಳದ ಇತಿಹಾಸವನ್ನು ಕೇಳಲು ಸಾವಿರಾರು ಕಂಬಳ ಅಭಿಮಾನಿಗಳು ನಿರೀಕ್ಷೆಯಲ್ಲಿರುತ್ತಾರೆ. ಅಂತಹ ವ್ಯಕ್ತಿಯ ಧ್ವನಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ ಕಡಂಬರ ಜೊತೆ ಲಕ್ಷಾಂತರ ಕಂಬಳ ಅಭಿಮಾನಿಗಳು ಇದ್ದಾರೆ. ಅವಮಾನ ಮಾಡಿದ ವ್ಯಕ್ತಿಯನ್ನು ಕಂಬಳ ಕೂಟಕ್ಕೆ ಬಹಿಷ್ಕರಿಸಬೇಕು ಎಂದು ಶುಭದರಾವ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

4 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

5 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

5 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

5 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

1 day ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

1 day ago