Featured

ಕಂಬಳ ಇತಿಹಾಸದಲ್ಲೇ ಅತ್ಯಂತ ದೊಡ್ಡ ಸಾಧನೆ ಮಾಡಿದ ‘ರಾಕೆಟ್ ಮೋಡ ‘ಖ್ಯಾತಿಯ ಕೋಣ ‘ಕಂಬಳದ ಕರೆ’ಯಿಂದ ಮರೆ ., ಇನ್ನು ನೆನಪು ಮಾತ್ರ..

ಉಡುಪಿ: ಕಂಬಳ ಇತಿಹಾಸದಲ್ಲೇ ಅತ್ಯಂತ ದೊಡ್ಡ ಸಾಧನೆ ಮಾಡಿದ ರಾಕೆಟ್ ಮೋಡ ಖ್ಯಾತಿಯ ಕಂಬಳದ ಕೋಣ ಇನ್ನು ನೆನಪು ಮಾತ್ರ.ತನ್ನ ಚಿಗರೆಯ ಓಟದ ವೈಖರಿಯಿಂದಲೇ ಲಕ್ಷಾಂತರ ಅಭಿಮಾನಿಗಳನ್ನು ಸಂಪಾದಿಸಿದ್ದ, ರಾಕೆಟ್ ಮೋಡ ಅಭಿಮಾನಿಗಳ ಹೃದಯವನ್ನು ಆರ್ದ್ರಗೊಳಿಸಿ ಬಾರದ ಲೋಕಕ್ಕೆ ಹೊರಟಿದ್ದಾನೆ.

ಅಧುನಿಕ ಕಂಬಳಕ್ಕೆ ವಿಶಿಷ್ಟ ಕೊಡುಗೆ ನೀಡದ ನಂದಳಿಕೆ ಶ್ರೀಕಾಂತ್ ಭಟ್ ಅವರ ಪ್ರೀತಿಯ, 20 ವರ್ಷದ ಕಂಬಳ ಕೋಣ ರಾಕೆಟ್ ಮೋಡ ವಯೋ ಸಹಜ ಕಾಯಿಲೆಯಿಂದ ಮಂಗಳವಾರ ಬೆಳಗ್ಗೆ ಮೃತಪಟ್ಟಿದಾನೆ. ಕರಾವಳಿಯ ಕಂಬಳ ಪ್ರಿಯರಿಗೆ ದುಃಖ ತಂದಿದೆ. ಕಂಬಳ ಕ್ಷೇತ್ರದಲ್ಲಿ ಕಿರಿಯ ಮತ್ತು ಹಿರಿಯ ವಿಭಾಗದಲ್ಲಿ ನೂರಾರು ಬಹುಮಾನಗಳನ್ನು ಗೆದ್ದ ಹೆಗ್ಗಳಿಕೆ ಈ ರಾಕೆಟ್ ಮೋಡ ಕೋಣದ್ದಾಗಿತ್ತು.

ರಾಕೆಟ್ ಈವರೆಗೆ 100ಕ್ಕೂ ಅಧಿಕ ಪದಕ ಪದೆದಿದ್ದು ಕಂಬಳ ಇತಿಹಾಸದಲ್ಲೇ ಅತ್ಯಂತ ದೊಡ್ಡ ಸಾಧನೆ ಮಾಡಿದ ಕೀರ್ತಿ ಪಡೆದಿದ್ದಾನೆ.144 ಮೀ ನ್ನು 13.57 ಸೆಕೆಂಡ್ ನಲ್ಲಿ ಕ್ರಮಿಸುವ ಮೂಲಕ ಕಂಬಳ ಇತಿಹಾಸದಲ್ಲಿ ಇನ್ನು ಅಳಿಸಲಾಗದ ದಾಖಲೆ ಸೃಷ್ಟಿಸಿದ್ದಾನೆ.

ಇದು ಮಾತ್ರವಲ್ಲದೆ, ಕಂಬಳ ಪ್ರಿಯರಿಗೆ ಇದು ಚಿರಪರಿಚಿತ ಕೋಣವಾಗಿತ್ತು. ಕೊಂಡೊಟ್ಟು ಮೋಡ, ರಾಕೆಟ್ ಮೋಡ ಎಂಬ ಹೆಸರಿನಿಂದಲೇ ಕಂಬಳ ಪ್ರಿಯರು ಇದನ್ನು ಕರೆಯುತ್ತಿದ್ದರು. ಪ್ರತಿಷ್ಠಿತ ಕಂಬಳ ಮನೆತನದ ಕೊಳಕೆ ಇರ್ವತ್ತೂರು ಭಾಸ್ಕರ ಕೋಟ್ಯಾನ್ ಮನೆಯಲ್ಲಿದ್ದ ಈ ಓಟದ ಸರದಾರ ಬಳಿಕ ಕೊಳಚ್ಚೂರು ಕೊಂಡೆಟ್ಟು ಸುಕುಮಾರ್ ಶೆಟ್ಟಿ ಅವರ ಮನೆಯಲ್ಲಿತ್ತು.ನಂತರ ಹಲವು ದಿನಗಳಿಂದ ನಂದಳಿಕೆ ಶ್ರೀಕಾಂತ್ ಭಟ್ ಅವರ ಮನೆಯಲ್ಲಿತ್ತು.

ಕಂಬಳ ಕೋಣದ ಅಂತ್ಯ ಸಂಸ್ಕಾರವನ್ನು ಶಾಸ್ತ್ರಬದ್ಧವಾಗಿ ಮಾಡಿದ್ದು ವಿಶೇಷ ಮತ್ತು ಈ ವೇಳೆ ನೂರಾರು ಜನ ಕಂಬಳ ಪ್ರಿಯರು , ಕಂಬಳ ಯಜಮಾನರು, ಊರವರ ದಂಡೇ ಶ್ರೀಕಾಂತ್ ಭಟ್ ಅವರ ಮನೆಗೆ ಆಗಮಿಸಿ ರಾಕೆಟ್ ಮೋಡದ ಅಂತಿಮ ವಿಧಿ ವಿಧಾನದಲ್ಲಿ ಭಾಗವಹಿಸಿ ಕಂಬನಿ ಮಿಡಿದರು.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

3 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

3 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

4 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

4 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

5 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

5 hours ago