Featured

ಕಂಬಳ ಇತಿಹಾಸದಲ್ಲೇ ಅತ್ಯಂತ ದೊಡ್ಡ ಸಾಧನೆ ಮಾಡಿದ ‘ರಾಕೆಟ್ ಮೋಡ ‘ಖ್ಯಾತಿಯ ಕೋಣ ‘ಕಂಬಳದ ಕರೆ’ಯಿಂದ ಮರೆ ., ಇನ್ನು ನೆನಪು ಮಾತ್ರ..

ಉಡುಪಿ: ಕಂಬಳ ಇತಿಹಾಸದಲ್ಲೇ ಅತ್ಯಂತ ದೊಡ್ಡ ಸಾಧನೆ ಮಾಡಿದ ರಾಕೆಟ್ ಮೋಡ ಖ್ಯಾತಿಯ ಕಂಬಳದ ಕೋಣ ಇನ್ನು ನೆನಪು ಮಾತ್ರ.ತನ್ನ ಚಿಗರೆಯ ಓಟದ ವೈಖರಿಯಿಂದಲೇ ಲಕ್ಷಾಂತರ ಅಭಿಮಾನಿಗಳನ್ನು ಸಂಪಾದಿಸಿದ್ದ, ರಾಕೆಟ್ ಮೋಡ ಅಭಿಮಾನಿಗಳ ಹೃದಯವನ್ನು ಆರ್ದ್ರಗೊಳಿಸಿ ಬಾರದ ಲೋಕಕ್ಕೆ ಹೊರಟಿದ್ದಾನೆ.

ಅಧುನಿಕ ಕಂಬಳಕ್ಕೆ ವಿಶಿಷ್ಟ ಕೊಡುಗೆ ನೀಡದ ನಂದಳಿಕೆ ಶ್ರೀಕಾಂತ್ ಭಟ್ ಅವರ ಪ್ರೀತಿಯ, 20 ವರ್ಷದ ಕಂಬಳ ಕೋಣ ರಾಕೆಟ್ ಮೋಡ ವಯೋ ಸಹಜ ಕಾಯಿಲೆಯಿಂದ ಮಂಗಳವಾರ ಬೆಳಗ್ಗೆ ಮೃತಪಟ್ಟಿದಾನೆ. ಕರಾವಳಿಯ ಕಂಬಳ ಪ್ರಿಯರಿಗೆ ದುಃಖ ತಂದಿದೆ. ಕಂಬಳ ಕ್ಷೇತ್ರದಲ್ಲಿ ಕಿರಿಯ ಮತ್ತು ಹಿರಿಯ ವಿಭಾಗದಲ್ಲಿ ನೂರಾರು ಬಹುಮಾನಗಳನ್ನು ಗೆದ್ದ ಹೆಗ್ಗಳಿಕೆ ಈ ರಾಕೆಟ್ ಮೋಡ ಕೋಣದ್ದಾಗಿತ್ತು.

ರಾಕೆಟ್ ಈವರೆಗೆ 100ಕ್ಕೂ ಅಧಿಕ ಪದಕ ಪದೆದಿದ್ದು ಕಂಬಳ ಇತಿಹಾಸದಲ್ಲೇ ಅತ್ಯಂತ ದೊಡ್ಡ ಸಾಧನೆ ಮಾಡಿದ ಕೀರ್ತಿ ಪಡೆದಿದ್ದಾನೆ.144 ಮೀ ನ್ನು 13.57 ಸೆಕೆಂಡ್ ನಲ್ಲಿ ಕ್ರಮಿಸುವ ಮೂಲಕ ಕಂಬಳ ಇತಿಹಾಸದಲ್ಲಿ ಇನ್ನು ಅಳಿಸಲಾಗದ ದಾಖಲೆ ಸೃಷ್ಟಿಸಿದ್ದಾನೆ.

ಇದು ಮಾತ್ರವಲ್ಲದೆ, ಕಂಬಳ ಪ್ರಿಯರಿಗೆ ಇದು ಚಿರಪರಿಚಿತ ಕೋಣವಾಗಿತ್ತು. ಕೊಂಡೊಟ್ಟು ಮೋಡ, ರಾಕೆಟ್ ಮೋಡ ಎಂಬ ಹೆಸರಿನಿಂದಲೇ ಕಂಬಳ ಪ್ರಿಯರು ಇದನ್ನು ಕರೆಯುತ್ತಿದ್ದರು. ಪ್ರತಿಷ್ಠಿತ ಕಂಬಳ ಮನೆತನದ ಕೊಳಕೆ ಇರ್ವತ್ತೂರು ಭಾಸ್ಕರ ಕೋಟ್ಯಾನ್ ಮನೆಯಲ್ಲಿದ್ದ ಈ ಓಟದ ಸರದಾರ ಬಳಿಕ ಕೊಳಚ್ಚೂರು ಕೊಂಡೆಟ್ಟು ಸುಕುಮಾರ್ ಶೆಟ್ಟಿ ಅವರ ಮನೆಯಲ್ಲಿತ್ತು.ನಂತರ ಹಲವು ದಿನಗಳಿಂದ ನಂದಳಿಕೆ ಶ್ರೀಕಾಂತ್ ಭಟ್ ಅವರ ಮನೆಯಲ್ಲಿತ್ತು.

ಕಂಬಳ ಕೋಣದ ಅಂತ್ಯ ಸಂಸ್ಕಾರವನ್ನು ಶಾಸ್ತ್ರಬದ್ಧವಾಗಿ ಮಾಡಿದ್ದು ವಿಶೇಷ ಮತ್ತು ಈ ವೇಳೆ ನೂರಾರು ಜನ ಕಂಬಳ ಪ್ರಿಯರು , ಕಂಬಳ ಯಜಮಾನರು, ಊರವರ ದಂಡೇ ಶ್ರೀಕಾಂತ್ ಭಟ್ ಅವರ ಮನೆಗೆ ಆಗಮಿಸಿ ರಾಕೆಟ್ ಮೋಡದ ಅಂತಿಮ ವಿಧಿ ವಿಧಾನದಲ್ಲಿ ಭಾಗವಹಿಸಿ ಕಂಬನಿ ಮಿಡಿದರು.

Vishwa News 24

Recent Posts

ಬೆಳ್ತಂಗಡಿ : ಹೊತ್ತಿ ಉರಿದ ಸ್ಕೂಟಿ ; ಗಾಯಗೊಂಡಿದ್ದ ಬಾಲಕ ಮೃತ್ಯು – vishwanews24

ಬೆಳ್ತಂಗಡಿ : ಹೊತ್ತಿ ಉರಿದ ಸ್ಕೂಟಿ ; ಗಾಯಗೊಂಡಿದ್ದ ಬಾಲಕ ಮೃತ್ಯು ಬೆಳ್ತಂಗಡಿ: ತಾಲೂಕಿನ ಬೆಳಾಲು ಗ್ರಾಮದ ಮಿನಂದೇಲುವಿನಲ್ಲಿ ಸ್ಕೂಟಿಯೊಂದು…

7 minutes ago

ಬೆಳ್ತಂಗಡಿ: ಗಡಾಯಿಕಲ್ಲು ಪ್ರವೇಶ ಮತ್ತೆ ಆರಂಭ ; ಗುರುತಿನ ಚೀಟಿ, ಶುಲ್ಕ ಕಡ್ಡಾಯ – vishwanews24

ಬೆಳ್ತಂಗಡಿ: ಗಡಾಯಿಕಲ್ಲು ಪ್ರವೇಶ ಆರಂಭ - ಈ ನಿಯಮ ಪಾಲನೆ ಕಡ್ಡಾಯ ಅಧಿಕೃತ ವೆಬ್‌ಸೈಟ್‌ ಮೂಲಕ ಪೂರ್ವ ನೋಂದಣಿ ಮಾಡಿಸಿಕೊಳ್ಳುವುದು…

14 minutes ago

ಉಡುಪಿ: ಡಿವೈಡರ್  ಮೇಲೇರಿದ ಸ್ಕೂಲ್‌ ಬಸ್‌ ; ತಪ್ಪಿದ ಅನಾಹುತ – vishwanews24

ಉಡುಪಿ: ಡಿವೈಡರ್  ಮೇಲೇರಿದ ಸ್ಕೂಲ್‌ ಬಸ್‌ ; ತಪ್ಪಿದ ಅನಾಹುತ ಉಡುಪಿ: ಅಲ್-ಇಬಾದಾ ಇಂಡಿಯನ್ ಸ್ಕೂಲ್‌ಗೆ ಸೇರಿದ ಬಸ್‌ವೊಂದು ಗುರುವಾರ…

36 minutes ago

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

19 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

19 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

19 hours ago