Featured

ಕಂಬಳ ಇತಿಹಾಸದಲ್ಲೇ ಅತ್ಯಂತ ದೊಡ್ಡ ಸಾಧನೆ ಮಾಡಿದ ‘ರಾಕೆಟ್ ಮೋಡ ‘ಖ್ಯಾತಿಯ ಕೋಣ ‘ಕಂಬಳದ ಕರೆ’ಯಿಂದ ಮರೆ ., ಇನ್ನು ನೆನಪು ಮಾತ್ರ..

ಉಡುಪಿ: ಕಂಬಳ ಇತಿಹಾಸದಲ್ಲೇ ಅತ್ಯಂತ ದೊಡ್ಡ ಸಾಧನೆ ಮಾಡಿದ ರಾಕೆಟ್ ಮೋಡ ಖ್ಯಾತಿಯ ಕಂಬಳದ ಕೋಣ ಇನ್ನು ನೆನಪು ಮಾತ್ರ.ತನ್ನ ಚಿಗರೆಯ ಓಟದ ವೈಖರಿಯಿಂದಲೇ ಲಕ್ಷಾಂತರ ಅಭಿಮಾನಿಗಳನ್ನು ಸಂಪಾದಿಸಿದ್ದ, ರಾಕೆಟ್ ಮೋಡ ಅಭಿಮಾನಿಗಳ ಹೃದಯವನ್ನು ಆರ್ದ್ರಗೊಳಿಸಿ ಬಾರದ ಲೋಕಕ್ಕೆ ಹೊರಟಿದ್ದಾನೆ.

ಅಧುನಿಕ ಕಂಬಳಕ್ಕೆ ವಿಶಿಷ್ಟ ಕೊಡುಗೆ ನೀಡದ ನಂದಳಿಕೆ ಶ್ರೀಕಾಂತ್ ಭಟ್ ಅವರ ಪ್ರೀತಿಯ, 20 ವರ್ಷದ ಕಂಬಳ ಕೋಣ ರಾಕೆಟ್ ಮೋಡ ವಯೋ ಸಹಜ ಕಾಯಿಲೆಯಿಂದ ಮಂಗಳವಾರ ಬೆಳಗ್ಗೆ ಮೃತಪಟ್ಟಿದಾನೆ. ಕರಾವಳಿಯ ಕಂಬಳ ಪ್ರಿಯರಿಗೆ ದುಃಖ ತಂದಿದೆ. ಕಂಬಳ ಕ್ಷೇತ್ರದಲ್ಲಿ ಕಿರಿಯ ಮತ್ತು ಹಿರಿಯ ವಿಭಾಗದಲ್ಲಿ ನೂರಾರು ಬಹುಮಾನಗಳನ್ನು ಗೆದ್ದ ಹೆಗ್ಗಳಿಕೆ ಈ ರಾಕೆಟ್ ಮೋಡ ಕೋಣದ್ದಾಗಿತ್ತು.

ರಾಕೆಟ್ ಈವರೆಗೆ 100ಕ್ಕೂ ಅಧಿಕ ಪದಕ ಪದೆದಿದ್ದು ಕಂಬಳ ಇತಿಹಾಸದಲ್ಲೇ ಅತ್ಯಂತ ದೊಡ್ಡ ಸಾಧನೆ ಮಾಡಿದ ಕೀರ್ತಿ ಪಡೆದಿದ್ದಾನೆ.144 ಮೀ ನ್ನು 13.57 ಸೆಕೆಂಡ್ ನಲ್ಲಿ ಕ್ರಮಿಸುವ ಮೂಲಕ ಕಂಬಳ ಇತಿಹಾಸದಲ್ಲಿ ಇನ್ನು ಅಳಿಸಲಾಗದ ದಾಖಲೆ ಸೃಷ್ಟಿಸಿದ್ದಾನೆ.

ಇದು ಮಾತ್ರವಲ್ಲದೆ, ಕಂಬಳ ಪ್ರಿಯರಿಗೆ ಇದು ಚಿರಪರಿಚಿತ ಕೋಣವಾಗಿತ್ತು. ಕೊಂಡೊಟ್ಟು ಮೋಡ, ರಾಕೆಟ್ ಮೋಡ ಎಂಬ ಹೆಸರಿನಿಂದಲೇ ಕಂಬಳ ಪ್ರಿಯರು ಇದನ್ನು ಕರೆಯುತ್ತಿದ್ದರು. ಪ್ರತಿಷ್ಠಿತ ಕಂಬಳ ಮನೆತನದ ಕೊಳಕೆ ಇರ್ವತ್ತೂರು ಭಾಸ್ಕರ ಕೋಟ್ಯಾನ್ ಮನೆಯಲ್ಲಿದ್ದ ಈ ಓಟದ ಸರದಾರ ಬಳಿಕ ಕೊಳಚ್ಚೂರು ಕೊಂಡೆಟ್ಟು ಸುಕುಮಾರ್ ಶೆಟ್ಟಿ ಅವರ ಮನೆಯಲ್ಲಿತ್ತು.ನಂತರ ಹಲವು ದಿನಗಳಿಂದ ನಂದಳಿಕೆ ಶ್ರೀಕಾಂತ್ ಭಟ್ ಅವರ ಮನೆಯಲ್ಲಿತ್ತು.

ಕಂಬಳ ಕೋಣದ ಅಂತ್ಯ ಸಂಸ್ಕಾರವನ್ನು ಶಾಸ್ತ್ರಬದ್ಧವಾಗಿ ಮಾಡಿದ್ದು ವಿಶೇಷ ಮತ್ತು ಈ ವೇಳೆ ನೂರಾರು ಜನ ಕಂಬಳ ಪ್ರಿಯರು , ಕಂಬಳ ಯಜಮಾನರು, ಊರವರ ದಂಡೇ ಶ್ರೀಕಾಂತ್ ಭಟ್ ಅವರ ಮನೆಗೆ ಆಗಮಿಸಿ ರಾಕೆಟ್ ಮೋಡದ ಅಂತಿಮ ವಿಧಿ ವಿಧಾನದಲ್ಲಿ ಭಾಗವಹಿಸಿ ಕಂಬನಿ ಮಿಡಿದರು.

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

5 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

5 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

5 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

6 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

6 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

6 hours ago