Featured

ಕಂಬಳ ಇತಿಹಾಸದಲ್ಲೇ ಅತ್ಯಂತ ದೊಡ್ಡ ಸಾಧನೆ ಮಾಡಿದ ‘ರಾಕೆಟ್ ಮೋಡ ‘ಖ್ಯಾತಿಯ ಕೋಣ ‘ಕಂಬಳದ ಕರೆ’ಯಿಂದ ಮರೆ ., ಇನ್ನು ನೆನಪು ಮಾತ್ರ..

ಉಡುಪಿ: ಕಂಬಳ ಇತಿಹಾಸದಲ್ಲೇ ಅತ್ಯಂತ ದೊಡ್ಡ ಸಾಧನೆ ಮಾಡಿದ ರಾಕೆಟ್ ಮೋಡ ಖ್ಯಾತಿಯ ಕಂಬಳದ ಕೋಣ ಇನ್ನು ನೆನಪು ಮಾತ್ರ.ತನ್ನ ಚಿಗರೆಯ ಓಟದ ವೈಖರಿಯಿಂದಲೇ ಲಕ್ಷಾಂತರ ಅಭಿಮಾನಿಗಳನ್ನು ಸಂಪಾದಿಸಿದ್ದ, ರಾಕೆಟ್ ಮೋಡ ಅಭಿಮಾನಿಗಳ ಹೃದಯವನ್ನು ಆರ್ದ್ರಗೊಳಿಸಿ ಬಾರದ ಲೋಕಕ್ಕೆ ಹೊರಟಿದ್ದಾನೆ.

ಅಧುನಿಕ ಕಂಬಳಕ್ಕೆ ವಿಶಿಷ್ಟ ಕೊಡುಗೆ ನೀಡದ ನಂದಳಿಕೆ ಶ್ರೀಕಾಂತ್ ಭಟ್ ಅವರ ಪ್ರೀತಿಯ, 20 ವರ್ಷದ ಕಂಬಳ ಕೋಣ ರಾಕೆಟ್ ಮೋಡ ವಯೋ ಸಹಜ ಕಾಯಿಲೆಯಿಂದ ಮಂಗಳವಾರ ಬೆಳಗ್ಗೆ ಮೃತಪಟ್ಟಿದಾನೆ. ಕರಾವಳಿಯ ಕಂಬಳ ಪ್ರಿಯರಿಗೆ ದುಃಖ ತಂದಿದೆ. ಕಂಬಳ ಕ್ಷೇತ್ರದಲ್ಲಿ ಕಿರಿಯ ಮತ್ತು ಹಿರಿಯ ವಿಭಾಗದಲ್ಲಿ ನೂರಾರು ಬಹುಮಾನಗಳನ್ನು ಗೆದ್ದ ಹೆಗ್ಗಳಿಕೆ ಈ ರಾಕೆಟ್ ಮೋಡ ಕೋಣದ್ದಾಗಿತ್ತು.

ರಾಕೆಟ್ ಈವರೆಗೆ 100ಕ್ಕೂ ಅಧಿಕ ಪದಕ ಪದೆದಿದ್ದು ಕಂಬಳ ಇತಿಹಾಸದಲ್ಲೇ ಅತ್ಯಂತ ದೊಡ್ಡ ಸಾಧನೆ ಮಾಡಿದ ಕೀರ್ತಿ ಪಡೆದಿದ್ದಾನೆ.144 ಮೀ ನ್ನು 13.57 ಸೆಕೆಂಡ್ ನಲ್ಲಿ ಕ್ರಮಿಸುವ ಮೂಲಕ ಕಂಬಳ ಇತಿಹಾಸದಲ್ಲಿ ಇನ್ನು ಅಳಿಸಲಾಗದ ದಾಖಲೆ ಸೃಷ್ಟಿಸಿದ್ದಾನೆ.

ಇದು ಮಾತ್ರವಲ್ಲದೆ, ಕಂಬಳ ಪ್ರಿಯರಿಗೆ ಇದು ಚಿರಪರಿಚಿತ ಕೋಣವಾಗಿತ್ತು. ಕೊಂಡೊಟ್ಟು ಮೋಡ, ರಾಕೆಟ್ ಮೋಡ ಎಂಬ ಹೆಸರಿನಿಂದಲೇ ಕಂಬಳ ಪ್ರಿಯರು ಇದನ್ನು ಕರೆಯುತ್ತಿದ್ದರು. ಪ್ರತಿಷ್ಠಿತ ಕಂಬಳ ಮನೆತನದ ಕೊಳಕೆ ಇರ್ವತ್ತೂರು ಭಾಸ್ಕರ ಕೋಟ್ಯಾನ್ ಮನೆಯಲ್ಲಿದ್ದ ಈ ಓಟದ ಸರದಾರ ಬಳಿಕ ಕೊಳಚ್ಚೂರು ಕೊಂಡೆಟ್ಟು ಸುಕುಮಾರ್ ಶೆಟ್ಟಿ ಅವರ ಮನೆಯಲ್ಲಿತ್ತು.ನಂತರ ಹಲವು ದಿನಗಳಿಂದ ನಂದಳಿಕೆ ಶ್ರೀಕಾಂತ್ ಭಟ್ ಅವರ ಮನೆಯಲ್ಲಿತ್ತು.

ಕಂಬಳ ಕೋಣದ ಅಂತ್ಯ ಸಂಸ್ಕಾರವನ್ನು ಶಾಸ್ತ್ರಬದ್ಧವಾಗಿ ಮಾಡಿದ್ದು ವಿಶೇಷ ಮತ್ತು ಈ ವೇಳೆ ನೂರಾರು ಜನ ಕಂಬಳ ಪ್ರಿಯರು , ಕಂಬಳ ಯಜಮಾನರು, ಊರವರ ದಂಡೇ ಶ್ರೀಕಾಂತ್ ಭಟ್ ಅವರ ಮನೆಗೆ ಆಗಮಿಸಿ ರಾಕೆಟ್ ಮೋಡದ ಅಂತಿಮ ವಿಧಿ ವಿಧಾನದಲ್ಲಿ ಭಾಗವಹಿಸಿ ಕಂಬನಿ ಮಿಡಿದರು.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago