ಕಾರ್ಕಳ : ಕೃಷಿ ಪರಂಪರೆಯ ಕಂಬಳದಲ್ಲಿ ಹೊಸ ದಾಖಲೆ, ಪ್ರಯೋಗ ನಡೆದೇ ಇದೆ. ಇತ್ತೀಚೆಗಷ್ಟೇ ಬಜಗೋಳಿಯ ಬಾಲಕ ಕೋಣಗಳ ಜತೆ ಓಡಿ ಸಂಚಲನ ಮೂಡಿಸಿದ್ದು, ಈಗ ಬಾಲಕಿಯೋರ್ವಳು ಕಂಬಳ ಕರೆಗೆ ಇಳಿಯುವ ಮೂಲಕ ಕಂಬಳದಲ್ಲಿ ಹೊಸ ಭರವಸೆ ಸೃಷ್ಟಿಸುವ ಆಶಾವಾದ ಮೂಡಿಸಿದ್ದಾಳೆ.
ಕೆಲ ದಿನಗಳ ಹಿಂದೆ ಮಿಯ್ನಾರುವಿನ ಲವಕುಶ ಜೋಡುಕರೆ ಕಂಬಳದಲ್ಲಿ ಪರಮೇಶ್ವರ ಭಟ್ ಅವರ ಪುತ್ರಿ ಚೈತ್ರಾ ಮೊತ್ತಮೊದಲ ಬಾರಿಗೆ ಕಂಬಳ ಕರೆಗೆ ಇಳಿದಿದ್ದಾಳೆ. ಈ ಮೂಲಕ ಪುರುಷ ಪ್ರಧಾನವಾಗಿರುವ ಕಂಬಳ ಕ್ರೀಡೆಯಲ್ಲಿ ಬಾಲಕಿಯ ಪ್ರವೇಶವಾಗಿದೆ. ಬೋಳಂಬಳ್ಳಿಯ ಕುವರಿ ಕುಂದಾಪುರ ಬೋಳಂಬಳ್ಳಿ ಗ್ರಾಮದ ಪರಮೇಶ್ವರ ಭಟ್ -ರಮ್ಯಾ ದಂಪತಿಯಇಬ್ಬರು ಮಕ್ಕಳಲ್ಲಿ ಚೈತ್ರಾ ಹಿರಿಯವಳು.
ವಯಸ್ಸು 11. ಕಾಲ್ತೊಡು ಸರಕಾರಿ ಶಾಲೆಯಲ್ಲಿ ಆರನೇ ತರಗತಿ ಓದುತ್ತಿರುವ ಈಕೆ ಮಿಯ್ನಾರು ಕಂಬಳದಲ್ಲಿ ಕೋಣದ ಯಜಮಾನಿಕೆಯ ನೇತೃತ್ವ ವಹಿಸಿ, ಕಂಬಳ ಕರೆಗೆ ಇಳಿದಿದ್ದಳು. ಈಕೆಯ ಸಹೋದರ ರಾಮ್ ಭಟ್ ಕೂಡ ಕಂಬಳಪ್ರೇಮಿ.ಬಾಲ್ಯದಿಂದಲೇ ಆಸಕ್ತಿ ಚೈತ್ರಾಗೆ ಕಂಬಳ ಕೋಣಗಳೆಂದರೆ ತುಂಬಾ ಪ್ರೀತಿ. ಚಿಕ್ಕ ವಯಸ್ಸಿನಲ್ಲೇ ಕಂಬಳ ಕೋಣಗಳಿಗೆ ಸ್ನಾನಮಾಡಿಸುತ್ತ, ಹುರುಳಿ ಬೇಯಿಸಿ ತಿನ್ನಿಸುತ್ತ, ತಂದೆ- ತಾಯಿಗೆ ಸಹಾಯ ಮಾಡುತ್ತ ಬೆಳೆದವಳು. ಕೋಣಗಳ ಮೇಲಿನ ಈಕೆಯ ಪ್ರೀತಿ ಕಂಬಳದ ಕರೆಗೆ ಇಳಿಯುವ ಮೂಲಕ ಮುಂದುವರಿದಿದೆ. ಕೃಷಿಕ ಪರಮೇಶ್ವರ್ ಭಟ್ 25 ವರ್ಷಗಳಿಂದ ಕೋಣಗಳನ್ನು ಸಾಕುತ್ತಿದ್ದಾರೆ.
ಕಳೆದ ನಾಲ್ಕು ವರ್ಷಗಳಿಂದ ದ.ಕ., ಉಡುಪಿ ಜಿಲ್ಲೆಯ ಕಂಬಳಗಳಲ್ಲಿ ಭಾಗವಹಿಸುತ್ತಿದ್ದಾರೆ. ಆಗೆಲ್ಲ ಚೈತ್ರಾಳಿಗೆ ಅವಕಾಶ ಸಿಕ್ಕಿರಲಿಲ್ಲ. ಮಿಯ್ನಾರುವಿನಲ್ಲಿ ನಡೆದ ಕಂಬಳದಲ್ಲಿ ಈಕೆಗೆ ಅವಕಾಶ ದೊರೆತಿದೆ.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…