ಕಾರ್ಕಳ : ಕೃಷಿ ಪರಂಪರೆಯ ಕಂಬಳದಲ್ಲಿ ಹೊಸ ದಾಖಲೆ, ಪ್ರಯೋಗ ನಡೆದೇ ಇದೆ. ಇತ್ತೀಚೆಗಷ್ಟೇ ಬಜಗೋಳಿಯ ಬಾಲಕ ಕೋಣಗಳ ಜತೆ ಓಡಿ ಸಂಚಲನ ಮೂಡಿಸಿದ್ದು, ಈಗ ಬಾಲಕಿಯೋರ್ವಳು ಕಂಬಳ ಕರೆಗೆ ಇಳಿಯುವ ಮೂಲಕ ಕಂಬಳದಲ್ಲಿ ಹೊಸ ಭರವಸೆ ಸೃಷ್ಟಿಸುವ ಆಶಾವಾದ ಮೂಡಿಸಿದ್ದಾಳೆ.
ಕೆಲ ದಿನಗಳ ಹಿಂದೆ ಮಿಯ್ನಾರುವಿನ ಲವಕುಶ ಜೋಡುಕರೆ ಕಂಬಳದಲ್ಲಿ ಪರಮೇಶ್ವರ ಭಟ್ ಅವರ ಪುತ್ರಿ ಚೈತ್ರಾ ಮೊತ್ತಮೊದಲ ಬಾರಿಗೆ ಕಂಬಳ ಕರೆಗೆ ಇಳಿದಿದ್ದಾಳೆ. ಈ ಮೂಲಕ ಪುರುಷ ಪ್ರಧಾನವಾಗಿರುವ ಕಂಬಳ ಕ್ರೀಡೆಯಲ್ಲಿ ಬಾಲಕಿಯ ಪ್ರವೇಶವಾಗಿದೆ. ಬೋಳಂಬಳ್ಳಿಯ ಕುವರಿ ಕುಂದಾಪುರ ಬೋಳಂಬಳ್ಳಿ ಗ್ರಾಮದ ಪರಮೇಶ್ವರ ಭಟ್ -ರಮ್ಯಾ ದಂಪತಿಯಇಬ್ಬರು ಮಕ್ಕಳಲ್ಲಿ ಚೈತ್ರಾ ಹಿರಿಯವಳು.
ವಯಸ್ಸು 11. ಕಾಲ್ತೊಡು ಸರಕಾರಿ ಶಾಲೆಯಲ್ಲಿ ಆರನೇ ತರಗತಿ ಓದುತ್ತಿರುವ ಈಕೆ ಮಿಯ್ನಾರು ಕಂಬಳದಲ್ಲಿ ಕೋಣದ ಯಜಮಾನಿಕೆಯ ನೇತೃತ್ವ ವಹಿಸಿ, ಕಂಬಳ ಕರೆಗೆ ಇಳಿದಿದ್ದಳು. ಈಕೆಯ ಸಹೋದರ ರಾಮ್ ಭಟ್ ಕೂಡ ಕಂಬಳಪ್ರೇಮಿ.ಬಾಲ್ಯದಿಂದಲೇ ಆಸಕ್ತಿ ಚೈತ್ರಾಗೆ ಕಂಬಳ ಕೋಣಗಳೆಂದರೆ ತುಂಬಾ ಪ್ರೀತಿ. ಚಿಕ್ಕ ವಯಸ್ಸಿನಲ್ಲೇ ಕಂಬಳ ಕೋಣಗಳಿಗೆ ಸ್ನಾನಮಾಡಿಸುತ್ತ, ಹುರುಳಿ ಬೇಯಿಸಿ ತಿನ್ನಿಸುತ್ತ, ತಂದೆ- ತಾಯಿಗೆ ಸಹಾಯ ಮಾಡುತ್ತ ಬೆಳೆದವಳು. ಕೋಣಗಳ ಮೇಲಿನ ಈಕೆಯ ಪ್ರೀತಿ ಕಂಬಳದ ಕರೆಗೆ ಇಳಿಯುವ ಮೂಲಕ ಮುಂದುವರಿದಿದೆ. ಕೃಷಿಕ ಪರಮೇಶ್ವರ್ ಭಟ್ 25 ವರ್ಷಗಳಿಂದ ಕೋಣಗಳನ್ನು ಸಾಕುತ್ತಿದ್ದಾರೆ.
ಕಳೆದ ನಾಲ್ಕು ವರ್ಷಗಳಿಂದ ದ.ಕ., ಉಡುಪಿ ಜಿಲ್ಲೆಯ ಕಂಬಳಗಳಲ್ಲಿ ಭಾಗವಹಿಸುತ್ತಿದ್ದಾರೆ. ಆಗೆಲ್ಲ ಚೈತ್ರಾಳಿಗೆ ಅವಕಾಶ ಸಿಕ್ಕಿರಲಿಲ್ಲ. ಮಿಯ್ನಾರುವಿನಲ್ಲಿ ನಡೆದ ಕಂಬಳದಲ್ಲಿ ಈಕೆಗೆ ಅವಕಾಶ ದೊರೆತಿದೆ.
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…
ಮೋದಿ ತಮ್ಮ ಸುಳ್ಳು ಭಾಷಣಗಳ ಮೂಲಕ ಪ್ರಧಾನಿ ಕುರ್ಚಿಯ ಘನತೆ ಮಣ್ಣುಪಾಲು ಮಾಡುತ್ತಿದ್ದಾರೆ: ಸಿದ್ದರಾಮಯ್ಯ ಕಿಡಿ ಬೆಂಗಳೂರು: ಪ್ರಧಾನಿ ಕುರ್ಚಿಯ…
ಪ್ರೀತಿಸಿದವನೊಂದಿಗೆ ಮದುವೆಯಾಗಲು ಕುಟುಂಬಸ್ಥರ ವಿರೋಧ : ಮನನೊಂದು ಯುವತಿ ಆತ್ಮಹತ್ಯೆ ಧಾರವಾಡ: ಪ್ರೀತಿಸಿದವನ ಜೊತೆ ಮದುವೆಯಾಗಲು ಕುಟುಂಬಸ್ಥರು ವಿರೋಧ ವ್ಯಕ್ತಪಡಿಸಿದ…