ಮಂಗಳೂರು: ಮೂಡಬಿದಿರೆ ಕಂಬಳದಲ್ಲಿ ಅತ್ಯಂತ ವೇಗವಾಗಿ ಓಡಿರುವ ಶ್ರೀನಿವಾಸ ಗೌಡ 30 ವರ್ಷಗಳ ಹಿಂದಿನ ದಾಖಲೆಯನ್ನು ಮುರಿದಿದ್ದಾರೆ.
ಉಸೇನ್ ಬೋಲ್ಟ್ ಜಗತ್ತಿನ ಅತೀ ವೇಗದ ಓಟಗಾರ. ಮಿಂಚಿನಂತೆ ಕ್ಷಣ ಮಾತ್ರದಲ್ಲಿ ಗುರಿತಲುಪುವ ಸಾಧಕ.ಉಸೇನ್ ಬೋಲ್ಟ್ ದಾಖಲೆಯನ್ನು ಹಿಂದಿಕ್ಕಿ ಕರ್ನಾಟಕದ ಕರಾವಳಿಯ ಕಂಬಳ ಕೋಣಗಳ ಓಟಗಾರ ಶ್ರೀನಿವಾಸ್ ಹೊಸ ದಾಖಲೆ ಬರೆದಿದ್ದಾರೆ.
142.50 ಮೀಟರ್ ಉದ್ದದ ಕಂಬಳದ ಕೆಸರು ಗದ್ದೆಯ ಗುರಿಯನ್ನು ಕೇವಲ 13.62 ಸೆಕೆಂಡ್ ಗಳಲ್ಲಿ ತಲುಪಿ ಐತಿಹಾಸಿಕ ದಾಖಲೆ ನಿರ್ಮಿಸಿದ್ದಾರೆ ಶ್ರೀನಿವಾಸ್ ಗೌಡ (28). ಈ ಹಿಂದೆ 1990 ರಲ್ಲಿ ಬೆಳ್ತಂಗಡಿಯಲ್ಲಿ ಅತ್ಯಂತ ವೇಗವಾಗಿ ಓಡಿದ್ದ ದಾಖಲೆ ನಿರ್ಮಾಣವಾಗಿತ್ತು.
ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಶ್ರೀನಿವಾಸ್ ಗೌಡ ಅವರು, ಇತ್ತೀಚೆಗೆ ಐಕಳದಲ್ಲಿ ನಡೆದ ನೇಗಿಲು ಹಿರಿಯ ಕಂಬಳದಲ್ಲಿ 145 ಮೀಟರ್ ಓಟವನ್ನು ಕೇವಲ 13.61 ಸೆಕೆಂಡ್ನಲ್ಲಿ ಓಡಿದ್ದಾರೆ. ವಿಶ್ವದ ವೇಗದ ಓಟಗಾರ ಉಸೇನ್ ಬೋಲ್ಟ್ 100 ಮೀಟರ್ ದೂರವನ್ನು 9.58 ಸೆಕೆಂಡ್ಗಳಲ್ಲಿ ಓಡಿದ್ದರು.
ಶ್ರೀನಿವಾಸ್ ಗೌಡ ಈ ವರೆಗೂ 12 ಕಂಬಳಗಳಲ್ಲಿ ಭಾಗವಹಿಸಿದ್ದು 29 ಪ್ರಶಸ್ತಿಗಳನ್ನು ಗಳಿಸಿದ್ದಾರೆ. ಐಕಳದಲ್ಲಿ ನಡೆದ ಕಾರ್ಯಕ್ರಮದಲ್ಲಿ ಇದೇ ಮೊದಲ ಬಾರಿಗೆ ಎಲ್ಲಾ ವಿಭಾಗಗಳಲ್ಲೂ ಬಹುಮಾನ ಗೆಲ್ಲುವ ಮೂಲಕ ಮತ್ತೊಂದು ದಾಖಲೆಯನ್ನೂ ನಿರ್ಮಿಸಿರುವ ಕೀರ್ತಿ ಶ್ರೀನಿವಾಸ್ ಗೌಡ ಅವರಿಗೆ ಸಲ್ಲುತ್ತದೆ.
ಶಾಲಾ ವಿದ್ಯಾಭ್ಯಾಸವನ್ನು ಅರ್ಧಕ್ಕೇ ಬಿಟ್ಟ ಶ್ರೀನಿವಾಸ್ ಗೌಡ, ತಮ್ಮ ಬಾಲ್ಯದಿಂದ ಕಂಬಳದತ್ತ ಆಕರ್ಷಿತರಾಗಿದ್ದರು.
ಫೆಬ್ರವರಿ 1ರಂದು ಮಂಗಳೂರು ಸಮೀಪದ ಐಕಳದಲ್ಲಿ ನಡೆದ ಕಂಬಳ ಕ್ರೀಡೆಯಲ್ಲಿ ಶ್ರೀನಿವಾಸ ಗೌಡ 142.50 ಮೀಟರ್ ದೂರವನ್ನು ಕೇವಲ 13.62 ಸೆಕೆಂಡಲ್ಲಿ ಕ್ರಮಿಸಿದ್ದಾರೆ. ಇದು ಕಂಬಳ ಕ್ರೀಡೆಯಲ್ಲಿ ಇದುವರೆಗಿನ ಅತ್ಯಂತ ವೇಗದ ದಾಖಲೆಯಾಗಿದೆ. ಶ್ರೀನಿವಾಸ ಗೌಡ ಗುರಿ ತಲುಪಲು ತೆಗೆದುಕೊಂಡ ಸಮಯವನ್ನು 100 ಮೀ. ಓಟದೊಂದಿಗೆ ತಾಳೆ ಹಾಕಿದರೆ 9.55 ಸೆಕೆಂಡ್ನಲ್ಲಿ ಓಟ ಪೂರ್ಣಗೊಳಿಸಿ ಬೋಲ್ಟ್ ದಾಖಲೆಯನ್ನು ಉಡಾಯಿಸಿದ್ದಾರೆ.
ಆತ್ಮಹತ್ಯೆಗೆ ಶರಣಾದ ನವದಂಪತಿ ; ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದನ್ನು ಕಂಡು ಪತಿಯೂ ನೇಣಿಗೆ ಶರಣು ತುಮಕೂರು: ಪತ್ನಿ ನೇಣಿಗೆ ಶರಣಾಗಿದ್ದನ್ನು…
ಬೆಂಗಳೂರು: ಡೆತ್ನೋಟ್ ಬರೆದಿಟ್ಟು ನೇಣಿಗೆ ಶರಣಾದ ನವವಿವಾಹಿತೆ ಬೆಂಗಳೂರು:ಸಿಲಿಕಾನ್ ಸಿಟಿಯಲ್ಲಿ ನವವಿವಾಹಿತೆಯೊಬ್ಬರು ಮನೆಯಲ್ಲಿ ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ…
ಗಾನಕೋಗಿಲೆ ಎಸ್.ಜಾನಕಿ ವಿಧಿವಶ ಮೈಸೂರು : ತಮ್ಮ ಮಾಧುರ್ಯಭರಿತ ಧ್ವನಿಯಿಂದಲೇ ಚಿತ್ರರಂಗದಲ್ಲಿ ಅದೆಷ್ಟೋ ಜನರ ಮನಗೆದ್ದಿದ್ದ ಹಿನ್ನಲೆ ಗಾಯಕಿ ಎಸ್.ಜಾನಕಿ…
ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿವಕುಮಾರ್…
ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ ಮೈಸೂರು: "ನಾನು ಕಂಬಳವನ್ನು…
ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್ಎಎಫ್ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ ಉಡುಪಿ:…