ಕಂಬಳ ಕ್ರೀಡೆಯ ಮಿಂಚಿನ ಓಟಗಾರ, ಉಸೇನ್ ಬೋಲ್ಟ್ ದಾಖಲೆ ಮುರಿದ ತುಳುನಾಡ ಕಂಬಳ ವೀರ -Vishwanews24

ಮಂಗಳೂರು: ಮೂಡಬಿದಿರೆ ಕಂಬಳದಲ್ಲಿ ಅತ್ಯಂತ ವೇಗವಾಗಿ ಓಡಿರುವ ಶ್ರೀನಿವಾಸ ಗೌಡ 30 ವರ್ಷಗಳ ಹಿಂದಿನ ದಾಖಲೆಯನ್ನು ಮುರಿದಿದ್ದಾರೆ.

ಉಸೇನ್ ಬೋಲ್ಟ್ ಜಗತ್ತಿನ ಅತೀ ವೇಗದ ಓಟಗಾರ. ಮಿಂಚಿನಂತೆ ಕ್ಷಣ ಮಾತ್ರದಲ್ಲಿ ಗುರಿತಲುಪುವ ಸಾಧಕ.ಉಸೇನ್ ಬೋಲ್ಟ್ ದಾಖಲೆಯನ್ನು ಹಿಂದಿಕ್ಕಿ ಕರ್ನಾಟಕದ ಕರಾವಳಿಯ ಕಂಬಳ ಕೋಣಗಳ ಓಟಗಾರ ಶ್ರೀನಿವಾಸ್ ಹೊಸ ದಾಖಲೆ ಬರೆದಿದ್ದಾರೆ.

142.50 ಮೀಟರ್ ಉದ್ದದ ಕಂಬಳದ ಕೆಸರು ಗದ್ದೆಯ ಗುರಿಯನ್ನು ಕೇವಲ 13.62 ಸೆಕೆಂಡ್ ಗಳಲ್ಲಿ ತಲುಪಿ ಐತಿಹಾಸಿಕ ದಾಖಲೆ ನಿರ್ಮಿಸಿದ್ದಾರೆ ಶ್ರೀನಿವಾಸ್ ಗೌಡ (28). ಈ ಹಿಂದೆ 1990 ರಲ್ಲಿ ಬೆಳ್ತಂಗಡಿಯಲ್ಲಿ ಅತ್ಯಂತ ವೇಗವಾಗಿ ಓಡಿದ್ದ ದಾಖಲೆ ನಿರ್ಮಾಣವಾಗಿತ್ತು.

ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಶ್ರೀನಿವಾಸ್ ಗೌಡ ಅವರು, ಇತ್ತೀಚೆಗೆ ಐಕಳದಲ್ಲಿ ನಡೆದ ನೇಗಿಲು ಹಿರಿಯ ಕಂಬಳದಲ್ಲಿ 145 ಮೀಟರ್ ಓಟವನ್ನು ಕೇವಲ 13.61 ಸೆಕೆಂಡ್‌ನಲ್ಲಿ ಓಡಿದ್ದಾರೆ. ವಿಶ್ವದ ವೇಗದ ಓಟಗಾರ ಉಸೇನ್ ಬೋಲ್ಟ್ 100 ಮೀಟರ್ ದೂರವನ್ನು 9.58 ಸೆಕೆಂಡ್‌ಗಳಲ್ಲಿ ಓಡಿದ್ದರು.

ಶ್ರೀನಿವಾಸ್ ಗೌಡ ಈ ವರೆಗೂ 12 ಕಂಬಳಗಳಲ್ಲಿ ಭಾಗವಹಿಸಿದ್ದು 29 ಪ್ರಶಸ್ತಿಗಳನ್ನು ಗಳಿಸಿದ್ದಾರೆ. ಐಕಳದಲ್ಲಿ ನಡೆದ ಕಾರ್ಯಕ್ರಮದಲ್ಲಿ ಇದೇ ಮೊದಲ ಬಾರಿಗೆ ಎಲ್ಲಾ ವಿಭಾಗಗಳಲ್ಲೂ ಬಹುಮಾನ ಗೆಲ್ಲುವ ಮೂಲಕ ಮತ್ತೊಂದು ದಾಖಲೆಯನ್ನೂ ನಿರ್ಮಿಸಿರುವ ಕೀರ್ತಿ ಶ್ರೀನಿವಾಸ್ ಗೌಡ ಅವರಿಗೆ ಸಲ್ಲುತ್ತದೆ.

ಶಾಲಾ ವಿದ್ಯಾಭ್ಯಾಸವನ್ನು ಅರ್ಧಕ್ಕೇ ಬಿಟ್ಟ ಶ್ರೀನಿವಾಸ್ ಗೌಡ, ತಮ್ಮ ಬಾಲ್ಯದಿಂದ ಕಂಬಳದತ್ತ ಆಕರ್ಷಿತರಾಗಿದ್ದರು.

ಫೆಬ್ರವರಿ 1ರಂದು ಮಂಗಳೂರು ಸಮೀಪದ ಐಕಳದಲ್ಲಿ ನಡೆದ ಕಂಬಳ ಕ್ರೀಡೆಯಲ್ಲಿ ಶ್ರೀನಿವಾಸ ಗೌಡ 142.50 ಮೀಟರ್ ದೂರವನ್ನು ಕೇವಲ 13.62 ಸೆಕೆಂಡಲ್ಲಿ ಕ್ರಮಿಸಿದ್ದಾರೆ. ಇದು ಕಂಬಳ ಕ್ರೀಡೆಯಲ್ಲಿ ಇದುವರೆಗಿನ ಅತ್ಯಂತ ವೇಗದ ದಾಖಲೆಯಾಗಿದೆ. ಶ್ರೀನಿವಾಸ ಗೌಡ ಗುರಿ ತಲುಪಲು ತೆಗೆದುಕೊಂಡ ಸಮಯವನ್ನು 100 ಮೀ. ಓಟದೊಂದಿಗೆ ತಾಳೆ ಹಾಕಿದರೆ 9.55 ಸೆಕೆಂಡ್‍ನಲ್ಲಿ ಓಟ ಪೂರ್ಣಗೊಳಿಸಿ ಬೋಲ್ಟ್ ದಾಖಲೆಯನ್ನು ಉಡಾಯಿಸಿದ್ದಾರೆ.

Vishwa News 24

Recent Posts

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ – vishwanews24

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…

12 hours ago

ಮಂಗಳೂರು : ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್ – vishwanews24

ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್‌ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…

12 hours ago

ಟ್ರ್ಯಾಕ್ಟರ್ – ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ – vishwanews24

ಟ್ರ‍್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…

12 hours ago

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಕಾರ್ಯಕರ್ತರ ಅಭಿಮಾನ ತಡಯೋಕೆ ಸಾಧ್ಯವಿಲ್ಲ :ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ – vishwanews24

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್‍ಗೆ ಬಿಟ್ಟ ವಿಚಾರ.…

13 hours ago

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ – vishwanews24

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…

13 hours ago

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ – vishwanews24

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…

13 hours ago