ಕಾರ್ಕಳ: ಕಂಬಳ ಕೂಟದ ಅತ್ಯಂತ ಜನಪ್ರಿಯ, ಅತಿ ಹೆಚ್ಚು ಪ್ರಶಸ್ತಿ ವಿಜೇತ ಪಟ್ಟಿಯಲ್ಲಿ ಅಗ್ರಗಣ್ಯ ಕೋಣ ಕೊಳಚೂರು ಕೊಂಡೊಟ್ಟು ಸುಕುಮಾರ್ ಶೆಟ್ಟಿ ಅವರ ‘ಚೆನ್ನ’ ಎಂಬ ಹೆಸರಿನ ಕೋಣ ಗುರುವಾರ (ಆ.14) ಅಸುನೀಗಿದೆ.
ವಯೋಸಹಜ ಅಸೌಖ್ಯದ ಕಾರಣದಿಂದ ಚೆನ್ನ ಅಸುನೀಗಿದೆ. ಗುರುವಾರ ಸಂಜೆ ಅದರ ಅಂತ್ಯಸಂಸ್ಕಾರ ನಡೆಯಲಿದೆ ಎಂದು ವರದಿ ಹೇಳಿದೆ.
ಕಂಬಳ ಕ್ಷೇತ್ರದಲ್ಲಿ ರಾಜನಾಗಿ ಮೆರೆದ ಚೆನ್ನ ವಿಧಿವಶನಾಗಿದ್ದಾನೆ. ಕೊಳಚೂರು ಕೊಂಡೆಟ್ಟು ಸುಕುಮಾರ ಶೆಟ್ರ ಕಿಂಗ್ ಚೆನ್ನ ಇನ್ನು ನೆನಪು ಮಾತ್ರ. ತರಬೇತಿಯಿಲ್ಲದೆ 4 ರ ಹರೆಯದಲ್ಲೇ ಕಂಬಳಕ್ಕೆ ಇಳಿದಿದ್ದ ಚೆನ್ನ ಕಂಬಳಾಭಿಮಾನಿಗಳಿಗೆ ಅಚ್ಚುಮೆಚ್ಚಿನವನಾಗಿದ್ದ. ಹಲವಾರು ಪದಕ ಗೆದ್ದಿರುವ ಕೀರ್ತಿ ಅವನದು.
ಕಡಂದಲೆ ಕಾಳು ಪಾಣಾರ ಅವರ ಹಟ್ಟಿಯಲ್ಲಿದ್ದ ಚೆನ್ನನನ್ನು ಬಾರ್ಕೂರು ಶಾಂತಾರಾಮ ಶೆಟ್ಟಿ ಸುಮಾರು 22 ವರ್ಷಗಳ ಹಿಂದೆ ತಮ್ಮ ಹಟ್ಟಿಗೆ ತಂದಿದ್ದರು. ಮೂಡಬಿದಿರೆಯ ಕೋಟಿ-ಚೆನ್ನಯ ಕಂಬಳದ ಮೊದಲ ಮೂರು ವರ್ಷವೂ ನೇಗಿಲು ಜೂನಿಯರ್ ವಿಭಾಗದಲ್ಲಿ ಬಾರ್ಕೂರು ಶಾಂತಾರಾಮ ಶೆಟ್ಟಿಯವರಿಗೆ ಚೆನ್ನ ಪದಕ ಗೆದ್ದು ಕೊಟ್ಟಿದ್ದ. ಬಳಿಕ ಸೀನಿಯರ್ ಆದಾಗ ಚೆನ್ನ ಕೊಳಚೂರು ಕೊಂಡೊಟ್ಟು ಸುಕುಮಾರ ಶೆಟ್ರ ಹಟ್ಟಿಗೆ ತೆರಳಿದ್ದ.
ಹಗ್ಗ ಹಿರಿಯ ವಿಭಾಗದಲ್ಲಿ ಗೆಂದಬೆಟ್ಟು ಮೋಡೆ ಮತ್ತು ಚೆನ್ನ ಜೊತೆಯಾಗಿ ಹಲವಾರು ಪ್ರಶಸ್ತಿ ಗೆದ್ದಿದ್ದಾರೆ. ನಾಲ್ಕು ಬಾರಿ ಸರಣಿ ಶೇಷ್ಠ ಪ್ರಶಸ್ತಿ ಪಡೆದಿರುವ ಚೆನ್ನ ಸತತ 13 ವರ್ಷ ಪದಕ ಗೆದ್ದು ಬೀಗಿದ್ದಾನೆ.
ಸಾಧು ಸ್ವಭಾವದವನಾಗಿದ್ದ ಚೆನ್ನ ಮತ್ತೊಂದು ವಿಚಾರಕ್ಕೆ ಗಮನಸೆಳೆದಿದ್ದ.
ಚೆನ್ನನಿಗೆ ಅಂದಾಜು 25 ವರ್ಷ ವಯಸ್ಸಾಗಿದ್ದು, ಕಳೆದ ಮೂರು ವರ್ಷದಿಂದ ಓಡುತ್ತಿರಲಿಲ್ಲ. ವಿಶ್ರಾಂತಿಯಲ್ಲಿದ್ದ ಚೆನ್ನ ಇದೀಗ ಇಹಲೋಕ ತ್ಯಜಿಸಿದ್ದಾನೆ. ಚೆನ್ನನ ಅಗಲಿಕೆ ಕಂಬಳಾಭಿಮಾನಿಗಳು ಕಂಬನಿ ಮಿಡಿದಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…