Featured

ಕಂಬಳ ನಿಯಮ ಮೀರುವ ಸದಸ್ಯರಿಗೆ ಎರಡು ಕಂಬಳಗಳಿಗೆ ನಿಷೇಧ : ಜಿಲ್ಲಾ ಕಂಬಳ ಸಮಿತಿ ಎಚ್ಚರಿಕೆ – vishwanews24

ಒಂಟಿಕಟ್ಟೆಯಲ್ಲಿರುವ ಕೋಟಿ ಚೆನ್ನಯ ಕಂಬಳ ಕ್ರೀಡಾಂಗಣ ಸಮೀಪದ ಸಭಾಭವನದಲ್ಲಿ ಸಮಿತಿ ಅಧ್ಯಕ್ಷ ಬೆಳಪು ಡಾ| ದೇವಿಪ್ರಸಾದ್‌ ಅಧ್ಯಕ್ಷತೆಯಲ್ಲಿ ಗುರುವಾರ ಜರಗಿದ ಜಿಲ್ಲಾ ಕಂಬಳ ಸಮಿತಿಯ ತುರ್ತು ಸಭೆಯಲ್ಲಿ ಈ ಕುರಿತು ಸುದೀರ್ಘ‌ವಾಗಿ ಚರ್ಚಿಸಿ ಕೆಲವು ತೀರ್ಮಾನಗಳನ್ನು ಕೈಗೊಳ್ಳಲಾಯಿತು.
24 ಗಂಟೆಗಳಲ್ಲಿ ಮುಗಿಯಬೇಕಾದ ಕಂಬಳಗಳು ವಿನಾಕಾರಣ ವಿಳಂಬಗೊಳ್ಳುತ್ತಿದ್ದು, ಇದು ಸರಕಾರದ ನಿಯಮಗಳಿಗೆ ವಿರುದ್ಧವಾಗಿದೆ. ಈ ರೀತಿಯ ಉಲ್ಲಂಘನೆ ಸೂಕ್ತವಾದುದಲ್ಲ ಎಂದರು.

ಈ ನಿಟ್ಟಿನಲ್ಲಿ ನಾವು ಸುಧಾರಣೆಗೊಳ್ಳದಿದ್ದರೆ ಕಂಬಳ ನಿಷೇಧಕ್ಕೆ ನಾವೇ ಅನುವು ಮಾಡಿಕೊಟ್ಟಂತಾಗುತ್ತದೆ ಎಂದು ದೇವಿಪ್ರಸಾದ್‌ ಶೆಟ್ಟಿ ಹೇಳಿದರು.

ಸಮಯ ಪರಿಪಾಲನೆಯನ್ನು ಕಟ್ಟುನಿಟ್ಟು ಮಾಡಲು ನಿಯಮಗಳನ್ನು ಮತ್ತಷ್ಟು ಬಲಗೊಳಿಸಲಾಗಿದೆ. ಒಬ್ಬ ಓಟಗಾರರನಿಗೆ ಪ್ರತಿ ವಿಭಾಗದಲ್ಲೂ ಒಂದು ಜತೆ ಕೋಣಗಳನ್ನು ಓಡಿಸಲು ಮಾತ್ರ ಅವಕಾಶವಿದೆ. ಅನಿವಾರ್ಯ ಸಂದರ್ಭದಲ್ಲಿ ತೀರ್ಪುಗಾರರ ಹಾಗೂ ವ್ಯವಸ್ಥಾಪಕರ ಅನುಮತಿ ಪಡೆದ ಬಳಿಕ ಮಾತ್ರ ಎರಡು ಜತೆ ಕೋಣಗಳನ್ನು ಓಡಿಸಬಹುದು. ಉಳಿದಂತೆ ನಿಯಮಗಳಲ್ಲಿ ಸಡಿಲಿಕೆ ಇಲ್ಲ ಎಂದು ಅವರು ವಿವರಿಸಿದರು.

ಆ್ಯಂಬುಲೆನ್ಸ್‌, ಪ್ರಥಮ ಚಿಕಿತ್ಸೆ ಕೇಂದ್ರ ಕಡ್ಡಾಯ ಕೋಣಗಳ ಯಜಮಾನ ತ್ರಿಶಾಲ್‌ ಪೂಜಾರಿ ಮಾತನಾಡಿ, ಮೂಲ್ಕಿಯಲ್ಲಿ ನಡೆದ ಕಂಬಳದಲ್ಲಿ ನಮ್ಮ ಓಟಗಾರನ ಕಾಲಿಗೆ ಬಲವಾದ ಪೆಟ್ಟಾಗಿ ಆಸ್ಪತ್ರೆಗೆ ಆಟೋದಲ್ಲಿ ಸಾಗಿಸಲಾಗಿತ್ತು. ಇಂತಹ ತುರ್ತು ಸಂದರ್ಭದಲ್ಲಿ ಕಂಬಳ ಆಯೋಜಕರು ಆ್ಯಂಬುಲೆನ್ಸ್‌ ವ್ಯವಸ್ಥೆ ಮಾಡಬೇಕು ಎಂದು ಸಲಹೆ ನೀಡಿದರು.

ಆ್ಯಂಬುಲೆನ್ಸ್‌ ಹಾಗೂ ಪ್ರಥಮ ಚಿಕಿತ್ಸೆ ಕೇಂದ್ರವನ್ನು ಎಲ್ಲ ಕಂಬಳಗಳಲ್ಲಿ ಕಡ್ಡಾಯಗೊಳಿಸಲಾಗುವುದು ಎಂದು ಸಮಿತಿ ಅಧ್ಯಕ್ಷರು ಹೇಳಿದರು.
ಪ್ರಧಾನ ಕಾರ್ಯದರ್ಶಿ ಲೋಕೇಶ್‌ ಶೆಟ್ಟಿ, ತೀರ್ಪುಗಾರರ ಸಂಚಾಲಕ ವಿಜಯ ಕುಮಾರ್‌ ಕಂಗಿನಮನೆ, ಮಾಜಿ ಅಧ್ಯಕ್ಷ ರೋಹಿತ್‌ ಹೆಗ್ಡೆ ಎರ್ಮಾಳು, ಉಪಾಧ್ಯಕ್ಷ ರಶ್ಮಿತ್‌ ಶೆಟ್ಟಿ, ತೀರ್ಪುಗಾರ ರಾಜೀವ್‌ ಶೆಟ್ಟಿ ಎಡೂ¤ರು, ಅಡ್ವೆ ಕಂಬಳದ ವ್ಯವಸ್ಥಾಪಕ ಕೊಳಚೂರು ಕೊಂಡೊಟ್ಟು ಸುಕುಮಾರ ಶೆಟ್ಟಿ ಸಹಿತ ಪ್ರಮುಖರು ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

6 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

6 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

6 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

6 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

6 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

6 days ago