Featured

ಕಂಬಳ ನಿಯಮ ಮೀರುವ ಸದಸ್ಯರಿಗೆ ಎರಡು ಕಂಬಳಗಳಿಗೆ ನಿಷೇಧ : ಜಿಲ್ಲಾ ಕಂಬಳ ಸಮಿತಿ ಎಚ್ಚರಿಕೆ – vishwanews24

ಒಂಟಿಕಟ್ಟೆಯಲ್ಲಿರುವ ಕೋಟಿ ಚೆನ್ನಯ ಕಂಬಳ ಕ್ರೀಡಾಂಗಣ ಸಮೀಪದ ಸಭಾಭವನದಲ್ಲಿ ಸಮಿತಿ ಅಧ್ಯಕ್ಷ ಬೆಳಪು ಡಾ| ದೇವಿಪ್ರಸಾದ್‌ ಅಧ್ಯಕ್ಷತೆಯಲ್ಲಿ ಗುರುವಾರ ಜರಗಿದ ಜಿಲ್ಲಾ ಕಂಬಳ ಸಮಿತಿಯ ತುರ್ತು ಸಭೆಯಲ್ಲಿ ಈ ಕುರಿತು ಸುದೀರ್ಘ‌ವಾಗಿ ಚರ್ಚಿಸಿ ಕೆಲವು ತೀರ್ಮಾನಗಳನ್ನು ಕೈಗೊಳ್ಳಲಾಯಿತು.
24 ಗಂಟೆಗಳಲ್ಲಿ ಮುಗಿಯಬೇಕಾದ ಕಂಬಳಗಳು ವಿನಾಕಾರಣ ವಿಳಂಬಗೊಳ್ಳುತ್ತಿದ್ದು, ಇದು ಸರಕಾರದ ನಿಯಮಗಳಿಗೆ ವಿರುದ್ಧವಾಗಿದೆ. ಈ ರೀತಿಯ ಉಲ್ಲಂಘನೆ ಸೂಕ್ತವಾದುದಲ್ಲ ಎಂದರು.

ಈ ನಿಟ್ಟಿನಲ್ಲಿ ನಾವು ಸುಧಾರಣೆಗೊಳ್ಳದಿದ್ದರೆ ಕಂಬಳ ನಿಷೇಧಕ್ಕೆ ನಾವೇ ಅನುವು ಮಾಡಿಕೊಟ್ಟಂತಾಗುತ್ತದೆ ಎಂದು ದೇವಿಪ್ರಸಾದ್‌ ಶೆಟ್ಟಿ ಹೇಳಿದರು.

ಸಮಯ ಪರಿಪಾಲನೆಯನ್ನು ಕಟ್ಟುನಿಟ್ಟು ಮಾಡಲು ನಿಯಮಗಳನ್ನು ಮತ್ತಷ್ಟು ಬಲಗೊಳಿಸಲಾಗಿದೆ. ಒಬ್ಬ ಓಟಗಾರರನಿಗೆ ಪ್ರತಿ ವಿಭಾಗದಲ್ಲೂ ಒಂದು ಜತೆ ಕೋಣಗಳನ್ನು ಓಡಿಸಲು ಮಾತ್ರ ಅವಕಾಶವಿದೆ. ಅನಿವಾರ್ಯ ಸಂದರ್ಭದಲ್ಲಿ ತೀರ್ಪುಗಾರರ ಹಾಗೂ ವ್ಯವಸ್ಥಾಪಕರ ಅನುಮತಿ ಪಡೆದ ಬಳಿಕ ಮಾತ್ರ ಎರಡು ಜತೆ ಕೋಣಗಳನ್ನು ಓಡಿಸಬಹುದು. ಉಳಿದಂತೆ ನಿಯಮಗಳಲ್ಲಿ ಸಡಿಲಿಕೆ ಇಲ್ಲ ಎಂದು ಅವರು ವಿವರಿಸಿದರು.

ಆ್ಯಂಬುಲೆನ್ಸ್‌, ಪ್ರಥಮ ಚಿಕಿತ್ಸೆ ಕೇಂದ್ರ ಕಡ್ಡಾಯ ಕೋಣಗಳ ಯಜಮಾನ ತ್ರಿಶಾಲ್‌ ಪೂಜಾರಿ ಮಾತನಾಡಿ, ಮೂಲ್ಕಿಯಲ್ಲಿ ನಡೆದ ಕಂಬಳದಲ್ಲಿ ನಮ್ಮ ಓಟಗಾರನ ಕಾಲಿಗೆ ಬಲವಾದ ಪೆಟ್ಟಾಗಿ ಆಸ್ಪತ್ರೆಗೆ ಆಟೋದಲ್ಲಿ ಸಾಗಿಸಲಾಗಿತ್ತು. ಇಂತಹ ತುರ್ತು ಸಂದರ್ಭದಲ್ಲಿ ಕಂಬಳ ಆಯೋಜಕರು ಆ್ಯಂಬುಲೆನ್ಸ್‌ ವ್ಯವಸ್ಥೆ ಮಾಡಬೇಕು ಎಂದು ಸಲಹೆ ನೀಡಿದರು.

ಆ್ಯಂಬುಲೆನ್ಸ್‌ ಹಾಗೂ ಪ್ರಥಮ ಚಿಕಿತ್ಸೆ ಕೇಂದ್ರವನ್ನು ಎಲ್ಲ ಕಂಬಳಗಳಲ್ಲಿ ಕಡ್ಡಾಯಗೊಳಿಸಲಾಗುವುದು ಎಂದು ಸಮಿತಿ ಅಧ್ಯಕ್ಷರು ಹೇಳಿದರು.
ಪ್ರಧಾನ ಕಾರ್ಯದರ್ಶಿ ಲೋಕೇಶ್‌ ಶೆಟ್ಟಿ, ತೀರ್ಪುಗಾರರ ಸಂಚಾಲಕ ವಿಜಯ ಕುಮಾರ್‌ ಕಂಗಿನಮನೆ, ಮಾಜಿ ಅಧ್ಯಕ್ಷ ರೋಹಿತ್‌ ಹೆಗ್ಡೆ ಎರ್ಮಾಳು, ಉಪಾಧ್ಯಕ್ಷ ರಶ್ಮಿತ್‌ ಶೆಟ್ಟಿ, ತೀರ್ಪುಗಾರ ರಾಜೀವ್‌ ಶೆಟ್ಟಿ ಎಡೂ¤ರು, ಅಡ್ವೆ ಕಂಬಳದ ವ್ಯವಸ್ಥಾಪಕ ಕೊಳಚೂರು ಕೊಂಡೊಟ್ಟು ಸುಕುಮಾರ ಶೆಟ್ಟಿ ಸಹಿತ ಪ್ರಮುಖರು ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

19 hours ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

19 hours ago

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ – vishwanews24

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…

20 hours ago

ಟೈಮಿಂಗ್‌ ವಿವಾದ: ಕಾಪು ಸರ್ವಿಸ್ ರಸ್ತೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ – vishwanews24

ಟೈಮಿಂಗ್‌ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…

21 hours ago

ಉಡುಪಿ: ‘ಭಗವತಿ ಟೂರಿಸ್ಟ್’ ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ – vishwanews24

ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…

21 hours ago

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ – vishwanews24

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…

22 hours ago