Featured

ಕಂಬಳ ನಿಯಮ ಮೀರುವ ಸದಸ್ಯರಿಗೆ ಎರಡು ಕಂಬಳಗಳಿಗೆ ನಿಷೇಧ : ಜಿಲ್ಲಾ ಕಂಬಳ ಸಮಿತಿ ಎಚ್ಚರಿಕೆ – vishwanews24

ಒಂಟಿಕಟ್ಟೆಯಲ್ಲಿರುವ ಕೋಟಿ ಚೆನ್ನಯ ಕಂಬಳ ಕ್ರೀಡಾಂಗಣ ಸಮೀಪದ ಸಭಾಭವನದಲ್ಲಿ ಸಮಿತಿ ಅಧ್ಯಕ್ಷ ಬೆಳಪು ಡಾ| ದೇವಿಪ್ರಸಾದ್‌ ಅಧ್ಯಕ್ಷತೆಯಲ್ಲಿ ಗುರುವಾರ ಜರಗಿದ ಜಿಲ್ಲಾ ಕಂಬಳ ಸಮಿತಿಯ ತುರ್ತು ಸಭೆಯಲ್ಲಿ ಈ ಕುರಿತು ಸುದೀರ್ಘ‌ವಾಗಿ ಚರ್ಚಿಸಿ ಕೆಲವು ತೀರ್ಮಾನಗಳನ್ನು ಕೈಗೊಳ್ಳಲಾಯಿತು.
24 ಗಂಟೆಗಳಲ್ಲಿ ಮುಗಿಯಬೇಕಾದ ಕಂಬಳಗಳು ವಿನಾಕಾರಣ ವಿಳಂಬಗೊಳ್ಳುತ್ತಿದ್ದು, ಇದು ಸರಕಾರದ ನಿಯಮಗಳಿಗೆ ವಿರುದ್ಧವಾಗಿದೆ. ಈ ರೀತಿಯ ಉಲ್ಲಂಘನೆ ಸೂಕ್ತವಾದುದಲ್ಲ ಎಂದರು.

ಈ ನಿಟ್ಟಿನಲ್ಲಿ ನಾವು ಸುಧಾರಣೆಗೊಳ್ಳದಿದ್ದರೆ ಕಂಬಳ ನಿಷೇಧಕ್ಕೆ ನಾವೇ ಅನುವು ಮಾಡಿಕೊಟ್ಟಂತಾಗುತ್ತದೆ ಎಂದು ದೇವಿಪ್ರಸಾದ್‌ ಶೆಟ್ಟಿ ಹೇಳಿದರು.

ಸಮಯ ಪರಿಪಾಲನೆಯನ್ನು ಕಟ್ಟುನಿಟ್ಟು ಮಾಡಲು ನಿಯಮಗಳನ್ನು ಮತ್ತಷ್ಟು ಬಲಗೊಳಿಸಲಾಗಿದೆ. ಒಬ್ಬ ಓಟಗಾರರನಿಗೆ ಪ್ರತಿ ವಿಭಾಗದಲ್ಲೂ ಒಂದು ಜತೆ ಕೋಣಗಳನ್ನು ಓಡಿಸಲು ಮಾತ್ರ ಅವಕಾಶವಿದೆ. ಅನಿವಾರ್ಯ ಸಂದರ್ಭದಲ್ಲಿ ತೀರ್ಪುಗಾರರ ಹಾಗೂ ವ್ಯವಸ್ಥಾಪಕರ ಅನುಮತಿ ಪಡೆದ ಬಳಿಕ ಮಾತ್ರ ಎರಡು ಜತೆ ಕೋಣಗಳನ್ನು ಓಡಿಸಬಹುದು. ಉಳಿದಂತೆ ನಿಯಮಗಳಲ್ಲಿ ಸಡಿಲಿಕೆ ಇಲ್ಲ ಎಂದು ಅವರು ವಿವರಿಸಿದರು.

ಆ್ಯಂಬುಲೆನ್ಸ್‌, ಪ್ರಥಮ ಚಿಕಿತ್ಸೆ ಕೇಂದ್ರ ಕಡ್ಡಾಯ ಕೋಣಗಳ ಯಜಮಾನ ತ್ರಿಶಾಲ್‌ ಪೂಜಾರಿ ಮಾತನಾಡಿ, ಮೂಲ್ಕಿಯಲ್ಲಿ ನಡೆದ ಕಂಬಳದಲ್ಲಿ ನಮ್ಮ ಓಟಗಾರನ ಕಾಲಿಗೆ ಬಲವಾದ ಪೆಟ್ಟಾಗಿ ಆಸ್ಪತ್ರೆಗೆ ಆಟೋದಲ್ಲಿ ಸಾಗಿಸಲಾಗಿತ್ತು. ಇಂತಹ ತುರ್ತು ಸಂದರ್ಭದಲ್ಲಿ ಕಂಬಳ ಆಯೋಜಕರು ಆ್ಯಂಬುಲೆನ್ಸ್‌ ವ್ಯವಸ್ಥೆ ಮಾಡಬೇಕು ಎಂದು ಸಲಹೆ ನೀಡಿದರು.

ಆ್ಯಂಬುಲೆನ್ಸ್‌ ಹಾಗೂ ಪ್ರಥಮ ಚಿಕಿತ್ಸೆ ಕೇಂದ್ರವನ್ನು ಎಲ್ಲ ಕಂಬಳಗಳಲ್ಲಿ ಕಡ್ಡಾಯಗೊಳಿಸಲಾಗುವುದು ಎಂದು ಸಮಿತಿ ಅಧ್ಯಕ್ಷರು ಹೇಳಿದರು.
ಪ್ರಧಾನ ಕಾರ್ಯದರ್ಶಿ ಲೋಕೇಶ್‌ ಶೆಟ್ಟಿ, ತೀರ್ಪುಗಾರರ ಸಂಚಾಲಕ ವಿಜಯ ಕುಮಾರ್‌ ಕಂಗಿನಮನೆ, ಮಾಜಿ ಅಧ್ಯಕ್ಷ ರೋಹಿತ್‌ ಹೆಗ್ಡೆ ಎರ್ಮಾಳು, ಉಪಾಧ್ಯಕ್ಷ ರಶ್ಮಿತ್‌ ಶೆಟ್ಟಿ, ತೀರ್ಪುಗಾರ ರಾಜೀವ್‌ ಶೆಟ್ಟಿ ಎಡೂ¤ರು, ಅಡ್ವೆ ಕಂಬಳದ ವ್ಯವಸ್ಥಾಪಕ ಕೊಳಚೂರು ಕೊಂಡೊಟ್ಟು ಸುಕುಮಾರ ಶೆಟ್ಟಿ ಸಹಿತ ಪ್ರಮುಖರು ಉಪಸ್ಥಿತರಿದ್ದರು.

Vishwa News 24

Recent Posts

ಜೂ. 24ರಿಂದ 26ರ ವರೆಗೆ ಕರಾವಳಿಗೆ ಆರೆಂಜ್ ಅಲರ್ಟ್ ಘೋಷಣೆ – vishwanews24

ಜೂ. 24ರಿಂದ 26ರ ವರೆಗೆ ಕರಾವಳಿಗೆ ಆರೆಂಜ್ ಅಲರ್ಟ್ ಘೋಷಣೆ  ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಡೆಗಳಲ್ಲಿ ಮಂಗಳವಾರ…

4 minutes ago

ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ : ಎನ್‌ಐಎ ಅಧಿಕಾರಿಗಳಿಂದ ಮೂವರ ವಿಚಾರಣೆ – vishwanews24

ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ : ಎನ್‌ಐಎ ಅಧಿಕಾರಿಗಳಿಂದ ಮೂವರ ವಿಚಾರಣೆ ಮಂಗಳೂರು: ಬಜಪೆಯಲ್ಲಿ ನಡೆದ ಹಿಂದೂ ಸಂಘಟನೆಯ ಕಾರ್ಯಕರ್ತ…

9 minutes ago

ಪುತ್ತೂರು: ನಾಪತ್ತೆಯಾಗಿದ್ದ ಸಾಕುನಾಯಿ ಪತ್ತೆ ಮಾಡಿದ ವ್ಯಕ್ತಿಗೆ 50 ಸಾ. ರೂ. ಹಸ್ತಾಂತರ – vishwanews24

ಪುತ್ತೂರು: ಸಾಕುನಾಯಿ ಪತ್ತೆ ಮಾಡಿದ ವ್ಯಕ್ತಿಗೆ 50 ಸಾ. ರೂ. ಹಸ್ತಾಂತರ ಪುತ್ತೂರು: ಇಲ್ಲಿನ ಕಬಕ ಸಮೀಪದ ಪೋಳ್ಯ ನಿವಾಸಿ,…

14 minutes ago

ಕಾಂಗ್ರೆಸ್ ಪಕ್ಷ ತನ್ನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದು , ಶೀಘ್ರದಲ್ಲೇ ಹೊಸ ಜಿಲ್ಲಾಅಧ್ಯಕ್ಷರ ನೇಮಕಾತಿ :ಬಿ.ಕೆ. ಹರಿಪ್ರಸಾದ್ – vishwanews24

ಕರ್ನಾಟಕದಲ್ಲಿ ಯಾವುದೇ ರೀತಿಯ ಹಿಂಸೆಗೆ ಅವಕಾಶ ನೀಡುವುದಿಲ್ಲ :  ಬಿ.ಕೆ. ಹರಿಪ್ರಸಾದ್ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಒಂದು…

26 minutes ago

ಉಡುಪಿ: ನಿರೀಕ್ಷಿತ ಮುಂಗಾರು ಮಳೆಯಿಲ್ಲದೆ ಕಡಲಿಗೆ ಇಳಿಯದ ನಾಡದೋಣಿಗಳು – vishwanews24

ಉಡುಪಿ: ನಿರೀಕ್ಷಿತ ಮುಂಗಾರು ಮಳೆಯಿಲ್ಲದೆ ಕಡಲಿಗೆ ಇಳಿಯದ ನಾಡದೋಣಿಗಳು  ಉಡುಪಿ: ಕರಾವಳಿಯಲ್ಲಿ ನಿರೀಕ್ಷಿತ ಮುಂಗಾರು ಮಳೆಯಾಗದ ಕಾರಣ ಈ ಋತುವಿನಲ್ಲಿ…

38 minutes ago

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ -vishwanews24

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…

19 hours ago