ನವದೆಹಲಿ: ಕಂಬಳ ಕೂಟ ವಿಷಯ ಕುರಿತಾಗಿ ಸಲ್ಲಿಕೆಯಾಗಿರುವ ಅರ್ಜಿಗಳ ತೀರ್ಪನ್ನು ಸುಪ್ರೀಂಕೋರ್ಟ್ ಸಾಂವಿಧಾನಿಕ ಪೀಠ ಕಾಯ್ದಿರಿಸಿದೆ. ಕಂಬಳ ಕೂಟವನ್ನು ನಿಷೇಧಿಸುವಂತೆ ಆಗ್ರಹಿಸಿ ಪ್ರಾಣಿದಯಾ ಸಂಘದವರು ಅರ್ಜಿ ಸಲ್ಲಿಸಿದ್ದರು. ಇದಕ್ಕೆ ಪ್ರತಿಯಾಗಿ ಉಪ್ಪಿನಂಗಡಿ ವಿಜಯ ವಿಕ್ರಮ ಜೋಡುಕರೆ ಕಂಬಳ ಸಮಿತಿಯು ಸುಪ್ರೀಂಕೋರ್ಟ್ನಲ್ಲಿ ತಕರಾರು ಅರ್ಜಿ ಸಲ್ಲಿಸಿತ್ತು. ಕೆಲವೇ ದಿನಗಳಲ್ಲಿ ಜಲ್ಲಿಕಟ್ಟು, ಕಂಬಳ ಮುಂತಾದ ಕ್ರೀಡೆಗಳ ಕುರಿತು ಸುಪ್ರೀಂಕೋರ್ಟ್ ಸಾಂವಿಧಾನಿಕ ಪೀಠ ಅಂತಿಮ ತೀರ್ಪು ಪ್ರಕಟಿಸಲಿದೆ.
ಕಂಬಳ ಕೂಟದಲ್ಲಿ ಪ್ರಾಣಿ ಹಿಂಸೆ ನಡೆಯುತ್ತಿದೆ. ಆದ್ದರಿಂದ ಕಂಬಳ ಆಯೋಜನೆಗೆ ನಿಷೇಧ ಹೇರಬೇಕು ಎಂದು ಪ್ರಾಣಿದಯಾ ಸಂಘ ನಿರಂತರವಾಗಿ ಹೋರಾಟ ನಡೆಸುತ್ತಿದೆ. ಇದರ ವಿರುದ್ಧ ಉಪ್ಪಿನಂಗಡಿ ವಿಜಯ ವಿಕ್ರಮ ಜೋಡುಕರೆ ಕಂಬಳ ಸಮಿತಿಯ ಅಧ್ಯಕ್ಷರಾದ ಕೋಡಿಂಬಾಡಿ ರೈ ಎಸ್ಟೇಟ್ ಮಾಲಕ ಅಶೋಕ್ ಕುಮಾರ್ ರೈ ಮತ್ತಿತರರು ಕಾನೂನು ಹೋರಾಟ ನಡೆಸುತ್ತಿದ್ದಾರೆ. ಈ ಹಿಂದೆ ರಾಷ್ಟ್ರಪತಿಯವರು ಸುಗ್ರೀವಾಜ್ಞೆ ಹೊರಡಿಸುವ ಮೂಲಕ ಕಂಬಳ ಕೂಟಕ್ಕೆ ಅವಕಾಶ ಕಲ್ಪಿಸಿದ್ದರು.
ಆ ಬಳಿಕ ಕರ್ನಾಟಕದ ಕರಾವಳಿ ಭಾಗದಲ್ಲಿ ನಿರಾತಂಕವಾಗಿ ಕಂಬಳ ಕೂಟ ನಡೆಯುತ್ತಿತ್ತು. ಈ ಮಧ್ಯೆ, ಪ್ರಾಣಿದಯಾ ಸಂಘದವರು ಮತ್ತೆ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದು ಕಂಬಳವನ್ನು ನಿಷೇಧಿಸಬೇಕು ಎಂದು ಮೇಲ್ಮನವಿ ಸಲ್ಲಿಸಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರಕಾರ ಇದಕ್ಕೆ ತಕರಾರು ಅರ್ಜಿ ಸಲ್ಲಿಕೆಯಾಗಿತ್ತು.
ಕಂಬಳ ಕೂಟಕ್ಕೆ ಪ್ರಾಚೀನ ಇತಿಹಾಸವಿದೆ. ಧಾರ್ಮಿಕ ಪರಂಪರೆ ಇದೆ. ಕಂಬಳದಲ್ಲಿ ಕೋಣಗಳಿಗೆ ಹಿಂಸೆ ಆಗುವುದಿಲ್ಲ. ಮಕ್ಕಳಂತೆ ಕೋಣಗಳನ್ನು ಸಾಕಿ ಸಲಹಲಾಗುತ್ತಿದೆ. ಆದ್ದರಿಂದ ಕಂಬಳ ಕೂಟಕ್ಕೆ ನಿಷೇಧ ಹೇರಬಾರದು. ಎಂದಿನಂತೆ ಕಂಬಳ ಕೂಟ ಆಯೋಜನೆಗೆ ಅವಕಾಶ ಕೊಡಬೇಕು ಎಂದು ಕಂಬಳ ಸಮಿತಿಗಳ ಪರವಾಗಿ ಅಶೋಕ್ ಕುಮಾರ್ ರೈ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು.
ಸುಪ್ರೀಂಕೋರ್ಟ್ ಸಾಂವಿಧಾನಿಕ ಪೀಠದಲ್ಲಿ ಈ ಅರ್ಜಿಯ ವಿಚಾರಣೆ ಪೂರ್ಣಗೊಂಡಿದೆ. ಇನ್ನು ಕೆಲವೇ ದಿನಗಳಲ್ಲಿ ಜಲ್ಲಿಕಟ್ಟು, ಕಂಬಳ ಮುಂತಾದ ಕ್ರೀಡೆಗಳ ಕುರಿತು ಸುಪ್ರೀಂಕೋರ್ಟ್ ಸಾಂವಿಧಾನಿಕ ಪೀಠ ಅಂತಿಮ ತೀರ್ಪು ಪ್ರಕಟಿಸಲಿದೆ. ಅಶೋಕ್ ರೈ ಪರ ಖ್ಯಾತ ವಕೀಲ ಸಂಜಯ್ ನೂಲಿ ವಾದ ಮಂಡಿಸುತ್ತಿದ್ದಾರೆ.
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…
ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಪ್ರವಾಸೋದ್ಯಮಕ್ಕೆ ಹೊಸ ಚೈತನ್ಯ .. ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ…
ಟೋಲ್ ಪ್ಲಾಜಾಗೆ ಎಲ್ಪಿಜಿ ಟ್ಯಾಂಕರ್ ಡಿಕ್ಕಿ: ಐವರು ದುರ್ಮರಣ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ ನವದೆಹಲಿ: ಉತ್ತರ ಪ್ರದೇಶದ ಕೌಶಂಬಿ…
ಕೊಪ್ಪಳ : ಅಂಜನಾದ್ರಿ ದೇಗುಲಕ್ಕೆ ಖ್ಯಾತ ಕ್ರಿಕೆಟಿಗ ರಾಹುಲ್ ದ್ರಾವಿಡ್ ದಂಪತಿ ಭೇಟಿ ಕೊಪ್ಪಳ: ಖ್ಯಾತ ಕ್ರಿಕೆಟ್ ಆಟಗಾರ, ಟೀಂ…
ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ ಗೋಲ್ಡನ್ ಮೂವೀಸ್ ಲಾಂಛನದಲ್ಲಿ ಸದಭಿರುಚಿ ಚಿತ್ರಗಳನ್ನು ನಿರ್ಮಾಣ ಮಾಡುತ್ತಾ ಬರುತ್ತಿರುವ…
ಬೆಂಗಳೂರು: ಡೇ ಕೇರ್ ಸೆಂಟರ್ ಪ್ರಕರಣ ; ಇಬ್ಬರು ಮಹಿಳಾ ಸಿಬ್ಬಂದಿ ಬಂಧನ ಬೆಂಗಳೂರು: ಇಲ್ಲಿನ ಬ್ರೂಕ್ಫೀಲ್ಡ್ನಲ್ಲಿರುವ ಡೇಕೇರ್ ಸೆಂಟರ್…