ಪಡುಬಿದ್ರಿ: ರಾಜ್ಯ ಸರಕಾರದ ಸಂಪೂರ್ಣ ಬೆಂಬಲದೊಂದಿಗೆ ಗ್ರಾಮೀಣ ಭಾಗದ ಜನರ ಕ್ರೀಡೆಯಾದ, ರಾಷ್ಟ್ರವ್ಯಾಪಿ ಮನ್ನಣೆ ಗಳಿಸಿರುವ ಕಂಬಳ ಕ್ರೀಡೆಯ ಬಗೆಗೆ ಸರಿಯಾಗಿ ಮಾಹಿತಿ ಹೊಂದಿರದ ಪ್ರಾಣಿದಯಾ ಸಂಘ(ಪೆಟಾ) ವಿನಾಕಾರಣವಾಗಿ ವಿವಾದವನ್ನು ಸೃಷ್ಟಿಸುತ್ತಿದೆ ಎಂದು ಉಡುಪಿ, ದ.ಕ., ಹಾಗೂ ಕಾಸರಗೋಡು ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ ಡಾ| ದೇವಿಪ್ರಸಾದ ಶೆಟ್ಟಿ ಹೇಳಿದ್ದಾರೆ.
ಕಂಬಳದ ಕೋಣಗಳನ್ನು ಹಿಂಸಿಸಲು ಕೋಣಗಳ ಯಜಮಾನರು ಸಾಕುತ್ತಿಲ್ಲ. ಅವುಗಳನ್ನು ಮಕ್ಕಳಿಂದಲೂ ಅಧಿಕ ಪ್ರೀತಿಯಿಂದ ಅತ್ಯಾಧುನಿಕ ಸೌಲಭ್ಯಗಳೊಂದಿಗೆ ಸಾಕುತ್ತಿದ್ದಾರೆ.
ಬೆಂಗಳೂರು ಕಂಬಳಕ್ಕೆ ತೆರಳುವ ದಾರಿ ಮಧ್ಯೆ ಅವುಗಳ ಊಟೋಪಹಾರಗಳಿಗಾಗಿಯೇ ಪ್ರತ್ಯೇಕ ತಂಡವು ಬಹಳಷ್ಟು ಶ್ರಮಿಸಿದ್ದು ಜನಮನ್ನಣೆ ಪಡೆದಿದೆ.
ಹಾಗಾಗಿ ಕೇವಲ ಪ್ರಾಣಿ ಹಿಂಸೆ ಎಂಬ ಕಾರಣ ನೀಡಿ ಉಚ್ಚ ನ್ಯಾಯಾಲಯದಲ್ಲಿ ತಕರಾರು ಅರ್ಜಿ ಯನ್ನು ಸಲ್ಲಿಸಿರುವುದು ಸರಿಯಲ್ಲ ಎಂದು ಡಾ| ದೇವಿಪ್ರಸಾದ್ ಶೆಟ್ಟಿ ತಿಳಿಸಿದ್ದಾರೆ.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…