Featured

ಕಂಬಳ ಹಿಂದೆ ಬಿದ್ದಿರುವ ಪೇಟಾ , ಕಂಬಳದಲ್ಲಿ ನಡೆದಿರುವ ಹಿಂಸೆ ಬಗ್ಗೆ ತನಿಖಾ ವರದಿ ಸುಪ್ರೀಂ ಗೆ ಸಲ್ಲಿಕೆ -Vishwanews24

ಮಂಗಳೂರು: ಕರಾವಳಿಯ ಜಾನಪದ ಕ್ರೀಡೆ ಕಂಬಳ ಹಿಂದೆ ಬಿದ್ದಿರುವ ಪೇಟಾ ಈಗ ಮತ್ತೆ ಸುಪ್ರೀಂಕೋರ್ಟ್ ಕದ ತಟ್ಟಿದೆ. ಕಳೆದ ಕಂಬಳ ಋುತುವಿನಲ್ಲಿ ನಡೆದ ಕಂಬಳದಲ್ಲಿ ಹಿಂಸೆ ನಡೆದಿರುವ ಬಗ್ಗೆ ತನಿಖಾ ವರದಿಯನ್ನು ಸುಪ್ರೀಂಕೋರ್ಟ್ ಗೆ ಸಲ್ಲಿಸಿರುವುದಾಗಿ ಪೇಟಾ ತಿಳಿಸಿದೆ.

ಪೆಟಾ ಕಳೆದ ವರ್ಷ ಡಿಸೆಂಬರ್‌ ಮತ್ತು ಜನವರಿ ಮತ್ತು ಫೆಬ್ರವರಿ ತಿಂಗಳಿನಲ್ಲಿ ನಡೆದ ಬಾರಾಡಿಬೀಡು, ಮೂಡುಬಿದಿರೆ, ಮಂಗಳೂರು ಮತ್ತು ತಿರುವೈಲ್‌ನಲ್ಲಿ ನಡೆದಿರುವ ಕಂಬಳಗಳಲ್ಲಿ ತಪಾಸಣೆ ಮಾಡಿದ್ದು, ಕೋಣಗಳ ಮೇಲಿನ ಹಿಂಸೆ ಮತ್ತು ಕೌರ್ಯವನ್ನು ತಡೆಯಲು ಕರ್ನಾಟಕದ ಕಂಬಳಗಳು ವಿಫಲವಾಗಿದೆ ಎಂದು ವರದಿಯಲ್ಲಿ ತಿಳಿಸಿದೆ.

ತುಳುನಾಡಿನ ಪ್ರಸಿದ್ಧ ಕಂಬಳ ಮತ್ತೊಮ್ಮೆ ಆಚರಣೆಗೆ ಬಂದಿದ್ದು, ಕೆಲವು ವಾರಗಳ ಹಿಂದಷ್ಟೇ ಮಂಗಳೂರಿನ ವಿವಿಧ ಕಡೆ ನಡೆಯುವ ಕಂಬಳದ ದಿನಾಂಕ, ಸ್ಥಳ ಸೇರಿ ವೇಳಾ ಪಟ್ಟಿ ಪ್ರಕಟವಾಗಿತ್ತು.

1960ರ ಪ್ರಾಣಿ ಹಿಂಸೆ ತಡೆ ಕಾಯಿದೆ ಪ್ರಕಾರ ಪ್ರಾಣಿಯನ್ನು ಹಿಂಸಿಸುವುದು ನಿಷೇಧಿಸಲಾಗಿದ್ದು, ಯಾವುದೇ ರೀತಿಯಲ್ಲಿ ಪ್ರಾಣಿಗಳಿಗೆ ನೋವು ಮಾಡುವುದನ್ನು ಕಾಯಿದೆ ವಿರೋಧಿಸುತ್ತದೆ. ಪ್ರಾಣಿಗಳನ್ನು ಒಳ್ಳೆಯ ರೀತಿಯಲ್ಲಿ ನಡೆಸಿಕೊಳ್ಳಬೇಕೆಂಬ ನಿಯಮವಿದೆ. ಆದರೆ ಬರದಿ ಬೀಡಿನ ಕಂಬಳದಲ್ಲಿ ಕೋಣಕ್ಕೆ ಹಿಂಸಿಸಲಾಗುತ್ತದೆ ಎಂದು ಆರೋಪಿಸಿ, ಪೆಟಾ ವಿರೋಧ ವ್ಯಕ್ತಪಡಿಸಿದೆ. ಪೆಟಾ ನಡೆಗೆ ತುಳು ನಾಡಿನ ಮಂದಿಯೂ ಸೋಷಿಯಲ್ ಮೀಡಿಯಾದಲ್ಲಿ ವಿಧವಿಧವಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪೆಟಾ ಇಂಡಿಯಾದಿಂದ ತಪಾಸಣೆ ಮಾಡಲಾದ ಎಲ್ಲ 4 ಕಂಬಳಗಳಲ್ಲಿ ಕಂಬಳ ಓಟದ ಸ್ಪರ್ಧೆಗೆ ಅನುವು ಮಾಡಿಕೊಡುವ ರಾಜ್ಯದ ತಿದ್ದುಪಡಿಗಳು ಕೋಣಗಳನ್ನು ಹಿಂಸೆಯಿಂದ ರಕ್ಷಿಸುವಲ್ಲಿ ಎಷ್ಟು ಅನುಪಯುಕ್ತ ಎನ್ನುವುದನ್ನು ಎತ್ತಿ ತೋರಿಸುತ್ತದೆ.

ಪೆಟಾ ದಾಖಲು ಮಾಡಿರುವ ದೂರು ಕರ್ನಾಟಕದ ಹೊಸ ಕಾನೂನಿನ ಸಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸುತ್ತದೆ ಮತ್ತು ಅದನ್ನು ಕಿತ್ತು ಹಾಕಲು ನಿರ್ದೇಶನವನ್ನು ಕೋರುತ್ತದೆ ಎಂದು ಪೆಟಾದ ಪ್ರಕಟನೆ ತಿಳಿಸಿದೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago