ರಾಜ್ಯ ನ್ಯೂಸ್

ಕಗ್ಗಾಂಟಾದ ಅತೃಪ್ತರು ಬಿಜೆಪಿ ಸಂಪರ್ಕದಲ್ಲಿ – ಸಿಎಂ ಆಗುವುದಕ್ಕೆ ಬಿಎಸ್​ವೈ ಸಿದ್ದತೆ…!!

ಮೈತ್ರಿ ಸರ್ಕಾರದಲ್ಲಿ ಸಚಿವ ಸ್ಥಾನದ ಅಕಾಂಕ್ಷಿಗಳು ಹೆಚ್ಚಾಗಿರುವ ಕಾರಣದಿಂದಾಗಿ ಅತೃಪ್ತರನ್ನು ಸಮಾಧಾನ ಮಾಡುವುದೇ ಕಗ್ಗಾಂಟಾಗಿ ಹೋಗಿದೆ.
ಈ ಮಧ್ಯೆ ಈ ಗೊಂದಲಮಯ ವಾತಾವರಣದಲ್ಲಿ ಸರ್ಕಾರ ಹೆಚ್ಚು ದಿನ ಇರಲಾರದು ಎಂದು ಭಾವಿಸಿರುವ ಕೆಲವು ಮುಖಂಡರು ಈಗಾಗಲೇ ಬಿಜೆಪಿ ಸಂಪರ್ಕದಲ್ಲಿ ಇದ್ದು ಅತಂತ್ರ ಸರ್ಕಾರದಲ್ಲಿ ಅಧಿಕಾರಕ್ಕಾಗಿ ಚಾತಕ ಪಕ್ಷಿಗಳಂತೆ ಕಾಯುವ ಬದಲು ಬಿಜೆಪಿಗೆ ಹೋಗುವುದೇ ಒಳ್ಳೆಯದು ಎನ್ನುವ ನಿರ್ಧಾರಕ್ಕೆ ಬಂದಿದ್ದಾರೆ ಎಂದು ಹೇಳಲಾಗಿದೆ.

ಬಿಜೆಪಿ ಪ್ರಯತ್ನ ಮಾಡಿದರೆ ಸರ್ಕಾರ ರಚಿಸುವುದು ಕಷ್ಟವೇನಲ್ಲ. ಆದರೆ ಬಿಜೆಪಿಯ ಆಪರೇಷನ್ ಕಮಲಕ್ಕೆ ಕೈ ಹಾಕದೆ ಮೌನಕ್ಕೆ ಶರಣಾಗಿದೆ. ಅವರಾಗಿ ಬರಲಿ ಎಂಬುದು ಬಿಜೆಪಿಯ ಮೌನಕ್ಕೆ ಕಾರಣವಿರಬಹುದು. ಬಿಜೆಪಿಯ ನಡಿಗೆಯು ನಿಗೂಢವಾಗಿದೆ.
ಅಧಿಕಾರಕ್ಕಾಗಿ ಕಿತ್ತಾಡಿಕೊಂಡು ಸರ್ಕಾರ ಮಾಡುವುದನ್ನು ಜನರೇ ನೋಡಿ ರೋಸಿ ಹೋಗುತ್ತಾರೆ ಹಾಗೆ ಆದರೆ ಬಿಜೆಪಿಗೇ ಲಾಭ ಎನ್ನುವುದನ್ನು ಅರ್ಥಮಾಡಿಕೊಂಡಿರುವ ಬಿಜೆಪಿ ಹೈ ಕಮಾಂಡ್​ ಯಾವುದೇ ಕಾರಣಕ್ಕೂ ತಾವಾಗಿಯೇ ಬರುವವರೆವಿಗೂ ಯಾರನ್ನು ಆಪರೇಷನ್​ ಮಾಡದಂತೆ ಎಚ್ಚರಿಕೆ ನೀಡಿದೆ.

ಒಂದೊಮ್ಮೆ ಯಾರಿಗೂ ಬಹುಮತ ಬಂದಿಲ್ಲ ಎಂದು ವಿಧಾನಸಭೆಯನ್ನು ವಿಸರ್ಜನೆ ಮಾಡಿದರೂ ಕೂಡ ಈ ಬಾರಿ ಬಿಜೆಪಿ 150 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವುದರ ಮೂಲಕ ಮತ್ತೆ ಅಧಿಕಾರಕ್ಕೆ ಬಿಜೆಪಿಯೇ ಬರಲಿದೆ ಎನ್ನುವ ಲೆಕ್ಕಚಾರವಿರುವ ಕಾರಣದಿಂದಾಗಿ ಬಿಜೆಪಿ ಕಾಂಗ್ರಸ್​ ಮತ್ತು ಜೆಡಿಎಸ್​ ನಾಯಕರ ಕಿತ್ತಾಟನ್ನ ಮನರಂಜನೆಯಾಗಿ ವೀಕ್ಷಿಸುತ್ತಿದೆ.

ಕೆಲವೇ ದಿನಗಳಲ್ಲಿ ಅತೃಪ್ತರು ಕಾಂಗ್ರೆಸ್​ ಮತ್ತು ಜೆಡಿಎಸ್​ ಪಾಲಿಗೆ ಕಂಟಕವಾಗಲಿದ್ದು ಆಗ ಬಿಜೆಪಿಗೆ ಬರುವ ಶಾಸಕರನ್ನುಟ್ಟುಕೊಂಡು ಮತ್ತೆ ಬಿಜೆಪಿ ಸರ್ಕಾರ ರಚನೆ ಮಾಡುವುದಕ್ಕೆ ಬಿಜೆಪಿ ಚಿಂತನೆ ನಡೆಸಿದ್ದು, ಬಿಎಸ್​ವೈ ಮತ್ತೆ ಮುಖ್ಯಮಂತ್ರಿಯಾಗುವ ಖುಷಿಯಲ್ಲಿದ್ದಾರೆ ಎಂದು ಬಿಜೆಪಿ ಮೂಲಗಳ ಮಾತಾಗಿದೆ.

Vishwa News 24

Recent Posts

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

2 days ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…

2 days ago

ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ -vishwanews24

ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…

2 days ago

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…

2 days ago

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

2 days ago

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…

2 days ago