ಮೈತ್ರಿ ಸರ್ಕಾರದಲ್ಲಿ ಸಚಿವ ಸ್ಥಾನದ ಅಕಾಂಕ್ಷಿಗಳು ಹೆಚ್ಚಾಗಿರುವ ಕಾರಣದಿಂದಾಗಿ ಅತೃಪ್ತರನ್ನು ಸಮಾಧಾನ ಮಾಡುವುದೇ ಕಗ್ಗಾಂಟಾಗಿ ಹೋಗಿದೆ.
ಈ ಮಧ್ಯೆ ಈ ಗೊಂದಲಮಯ ವಾತಾವರಣದಲ್ಲಿ ಸರ್ಕಾರ ಹೆಚ್ಚು ದಿನ ಇರಲಾರದು ಎಂದು ಭಾವಿಸಿರುವ ಕೆಲವು ಮುಖಂಡರು ಈಗಾಗಲೇ ಬಿಜೆಪಿ ಸಂಪರ್ಕದಲ್ಲಿ ಇದ್ದು ಅತಂತ್ರ ಸರ್ಕಾರದಲ್ಲಿ ಅಧಿಕಾರಕ್ಕಾಗಿ ಚಾತಕ ಪಕ್ಷಿಗಳಂತೆ ಕಾಯುವ ಬದಲು ಬಿಜೆಪಿಗೆ ಹೋಗುವುದೇ ಒಳ್ಳೆಯದು ಎನ್ನುವ ನಿರ್ಧಾರಕ್ಕೆ ಬಂದಿದ್ದಾರೆ ಎಂದು ಹೇಳಲಾಗಿದೆ.
ಬಿಜೆಪಿ ಪ್ರಯತ್ನ ಮಾಡಿದರೆ ಸರ್ಕಾರ ರಚಿಸುವುದು ಕಷ್ಟವೇನಲ್ಲ. ಆದರೆ ಬಿಜೆಪಿಯ ಆಪರೇಷನ್ ಕಮಲಕ್ಕೆ ಕೈ ಹಾಕದೆ ಮೌನಕ್ಕೆ ಶರಣಾಗಿದೆ. ಅವರಾಗಿ ಬರಲಿ ಎಂಬುದು ಬಿಜೆಪಿಯ ಮೌನಕ್ಕೆ ಕಾರಣವಿರಬಹುದು. ಬಿಜೆಪಿಯ ನಡಿಗೆಯು ನಿಗೂಢವಾಗಿದೆ.
ಅಧಿಕಾರಕ್ಕಾಗಿ ಕಿತ್ತಾಡಿಕೊಂಡು ಸರ್ಕಾರ ಮಾಡುವುದನ್ನು ಜನರೇ ನೋಡಿ ರೋಸಿ ಹೋಗುತ್ತಾರೆ ಹಾಗೆ ಆದರೆ ಬಿಜೆಪಿಗೇ ಲಾಭ ಎನ್ನುವುದನ್ನು ಅರ್ಥಮಾಡಿಕೊಂಡಿರುವ ಬಿಜೆಪಿ ಹೈ ಕಮಾಂಡ್ ಯಾವುದೇ ಕಾರಣಕ್ಕೂ ತಾವಾಗಿಯೇ ಬರುವವರೆವಿಗೂ ಯಾರನ್ನು ಆಪರೇಷನ್ ಮಾಡದಂತೆ ಎಚ್ಚರಿಕೆ ನೀಡಿದೆ.
ಒಂದೊಮ್ಮೆ ಯಾರಿಗೂ ಬಹುಮತ ಬಂದಿಲ್ಲ ಎಂದು ವಿಧಾನಸಭೆಯನ್ನು ವಿಸರ್ಜನೆ ಮಾಡಿದರೂ ಕೂಡ ಈ ಬಾರಿ ಬಿಜೆಪಿ 150 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವುದರ ಮೂಲಕ ಮತ್ತೆ ಅಧಿಕಾರಕ್ಕೆ ಬಿಜೆಪಿಯೇ ಬರಲಿದೆ ಎನ್ನುವ ಲೆಕ್ಕಚಾರವಿರುವ ಕಾರಣದಿಂದಾಗಿ ಬಿಜೆಪಿ ಕಾಂಗ್ರಸ್ ಮತ್ತು ಜೆಡಿಎಸ್ ನಾಯಕರ ಕಿತ್ತಾಟನ್ನ ಮನರಂಜನೆಯಾಗಿ ವೀಕ್ಷಿಸುತ್ತಿದೆ.
ಕೆಲವೇ ದಿನಗಳಲ್ಲಿ ಅತೃಪ್ತರು ಕಾಂಗ್ರೆಸ್ ಮತ್ತು ಜೆಡಿಎಸ್ ಪಾಲಿಗೆ ಕಂಟಕವಾಗಲಿದ್ದು ಆಗ ಬಿಜೆಪಿಗೆ ಬರುವ ಶಾಸಕರನ್ನುಟ್ಟುಕೊಂಡು ಮತ್ತೆ ಬಿಜೆಪಿ ಸರ್ಕಾರ ರಚನೆ ಮಾಡುವುದಕ್ಕೆ ಬಿಜೆಪಿ ಚಿಂತನೆ ನಡೆಸಿದ್ದು, ಬಿಎಸ್ವೈ ಮತ್ತೆ ಮುಖ್ಯಮಂತ್ರಿಯಾಗುವ ಖುಷಿಯಲ್ಲಿದ್ದಾರೆ ಎಂದು ಬಿಜೆಪಿ ಮೂಲಗಳ ಮಾತಾಗಿದೆ.
ಮಲ್ಪೆ : ಸೈಂಟ್ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…