Featured

ಕಚೇರಿಗಳಲ್ಲಿ ಮಹಿಳೆಯರಿಗೆ ಕಿರುಕುಳ ಉಂಟಾದರೆ ಜಿಲ್ಲಾ ಸಮಿತಿಗೆ ದೂರು ನೀಡಿ : ರಾಷ್ಟ್ರೀಯ ಮಹಿಳಾ ಆಯೋಗ ಸದಸ್ಯೆ ಶ್ಯಾಮಲಾ ಎಸ್. ಕುಂದರ್ -Vishwanews24

ಕಚೇರಿಗಳಲ್ಲಿ ಮಹಿಳೆಯರಿಗೆ ಕಿರುಕುಳ ಉಂಟಾದರೆ ಜಿಲ್ಲಾ ಸಮಿತಿಗೆ ದೂರು ನೀಡಿ : ರಾಷ್ಟ್ರೀಯ ಮಹಿಳಾ ಆಯೋಗ ಸದಸ್ಯೆ ಶ್ಯಾಮಲಾ ಎಸ್. ಕುಂದರ್ -Vishwanews24

ಮಂಗಳೂರು,: ಮಹಿಳಾ ಸಿಬ್ಬಂದಿಗಳು ಹೆಚ್ಚಾಗಿರುವ ಕಚೇರಿಗಳಲ್ಲಿ ಮಹಿಳೆಯರಿಗೆ ಕಿರುಕುಳ ಉಂಟಾದರೆ ಜಿಲ್ಲಾ ಮಟ್ಟದ ಸ್ಥಳೀಯ ದೂರು ಸಮಿತಿಗೆ ದೂರು ನೀಡುವಂತೆ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಶ್ಯಾಮಲಾ ಎಸ್ ಕುಂದರ್ ಸೂಚಿಸಿದರು.

ಅವರು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‍ನಲ್ಲಿ “ಮಹಿಳೆಯರ ಮತ್ತು ಮಕ್ಕಳ ಮೇಲಿನ ದೌರ್ಜನ್ಯ” ಕುರಿತು ಪೊಲೀಸ್ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳ ಸಭೆಯನ್ನುದ್ಧೇಶಿಸಿ ಮಾತನಾಡಿದರು.

ಸಖಿ ಕೇಂದ್ರದಲ್ಲಿ ಒಂದೇ ಸೂರಿನಡಿ ಮಹಿಳೆಯರಿಗೆ ಆಪ್ತ ಸಮಾಲೋಚನೆ, ಕಾನೂನು ನೆರವು, ಪೊಲೀಸ್ ನೆರವು, ತಾತ್ಕಾಲಿಕ ಆಶ್ರಯಗಳನ್ನು ಒದಗಿಸಲಾಗುತ್ತಿದೆ. ಸಖಿ ಕೇಂದ್ರದ ಸ್ವಂತ ಕಟ್ಟಡ ಕಾಮಗಾರಿ ಪೂರ್ಣಗೊಂಡಿದ್ದು, ಕಟ್ಟಡವು ಇಲಾಖೆಗೆ ಹಸ್ತಾಂತರಗೊಂಡ ಕೂಡಲೇಉದ್ಘಾಟನೆ ನಡೆಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಿಗೆ ತಿಳಿಸಿದರು.

ಕೆಲಸದ ಸ್ಥಳಗಳಲ್ಲಿ ಮಹಿಳೆಯರ ಮೇಲೆ ಲೈಂಗಿಕ ಕಿರುಕುಳ (ತಡೆಗಟ್ಟುವಿಕೆ, ನಿಷೇಧಿಸುವಿಕೆ, ನಿವಾರಿಸುವಿಕೆ) ಅಧಿನಿಯಮ 2013 ರಡಿ 10 ಕ್ಕಿಂತಕಡಿಮೆ ಮಹಿಳಾ ಉದ್ಯೋಗಿಗಳು ಇರುವ ಸರ್ಕಾರಿ, ಖಾಸಗಿ ಕಛೇರಿಗಳು, ನಿಗಮ, ಮಂಡಳಿ, ಸಾರ್ವಜನಿಕ ಉದ್ಯಮಗಳು, ಫ್ಯಾಕ್ಟರಿಗಳು ಇತ್ಯಾದಿ ಎಲ್ಲಾ ಕಛೇರಿಗಳಲ್ಲೂ ಕಡ್ಡಾಯವಾಗಿ ಆಂತರಿಕ ದೂರು ಸಮಿತಿಯನ್ನು ರಚಿಸುವಂತೆ ತಿಳಿಸಿದರು.

ಜಿಲ್ಲಾ ಲೇಡಿಗೋಶನ್ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಖಿ(ಒಎಸ್‍ಸಿ) ಕೇಂದ್ರಕ್ಕೆ ಭೇಟಿ ನೀಡಿ ದಾಖಲಾಗಿರುವ ಪ್ರಕರಣಗಳ ಬಗ್ಗೆ ಮಾಹಿತಿಯನ್ನು ಪಡೆದ ಅವರು, ಸಂತ್ರಸ್ಥ ಮಹಿಳೆಯನ್ನು ಭೇಟಿ ಮಾಡಿ, ಸಾಂತ್ವನ ಹೇಳಿ ಧೈರ್ಯ ತುಂಬಿದರು.

ಈ ಸಂದರ್ಭದಲ್ಲಿ ಲೇಡಿಗೋಶನ್ ಆಸ್ಪತ್ರೆಯ ಹಿರಿಯ ವೈದ್ಯಾಧಿಕಾರಿ ಶಕುಂತಲಾ ಎಂ.ಎಂ, ಮಹಿಳಾ ಮತ್ತು ಮಕ್ಕಳಾ ಅಭಿವೃದ್ಧಿಯ ಇಲಾಖೆಯ ಉಪನಿರ್ದೇಶಕ ಪಾಪಭೋವಿ, ಸಖಿ ಕೇಂದ್ರದ ಸೆಂಟರ್ ಅಡ್ಮಿನಿಸ್ಟ್ರೇಟರ್, ಮತ್ತಿತರರು ಉಪಸ್ಥಿತರಿದ್ಧರು.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

4 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

4 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago