Featured

ಕಚೇರಿಗೆ ಕಚೇರಿಗೆ ಬರುವ ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸಬೇಕು, ಕಡೆಗಣಿಸುವುದು ಸರಿಯಲ್ಲ : ಜಿಲ್ಲಾಧಿಕಾರಿ ಜಿ.ಜಗದೀಶ್‌ -Vishwanews24

ಉಡುಪಿ: ಸರಕಾರಿ ಉದ್ಯೋಗದಲ್ಲಿರುವ ಅಧಿಕಾರಿಗಳು ಸೇವೆಯ ನಿಮಿತ್ತ ಕಚೇರಿಗೆ ಬರುವ ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸಬೇಕು , ಕಡೆಗಣಿಸುವುದು ಸರಿಯಲ್ಲ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್‌ ತಿಳಿಸಿದರು.

ಜಿಲ್ಲಾ ಗ್ರಾಮಲೆಕ್ಕಾಧಿಕಾರಿಗಳ ಸಂಘ, ಮುನಿಯಾಲು ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಎನ್‌ಎಸ್‌ಎಸ್‌ ಘಟಕ, ಜಿಲ್ಲಾ ರಕ್ತ ನಿಧಿ ಸಹಯೋಗದಲ್ಲಿ ಬುಧವಾರ ಮಿಷನ್‌ ಕಂಪೌಂಡ್‌ ಸಮೀಪ ಆಯೋಜಿಸಿದ್ದ 5ನೇ ವರ್ಷದ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿದರು.

ದಾನದಲ್ಲಿ ಅತ್ಯಂತ ಶ್ರೇಷ್ಠ ರಕ್ತದಾನ. ನಾವು ಮಾಡುವ ರಕ್ತದಾನ ಇನ್ನೊಬ್ಬರ ಜೀವವನ್ನು ಉಳಿಸುತ್ತದೆ. ಜಿಲ್ಲೆಯಲ್ಲಿ ರಕ್ತದಾನದ ಕುರಿತು ಸಾಕಷ್ಟು ಅರಿವು ಇದೆ. ರಾಜ್ಯದಲ್ಲಿ ಅತ್ಯಧಿಕ ಪ್ರಮಾಣದಲ್ಲಿ ರಕ್ತವನ್ನು ಸಂಗ್ರಹಿಸುವ ಜಿಲ್ಲೆಯಾಗಿ ಗುರುತಿಸಿಕೊಂಡಿದೆ. ಗ್ರಾಮ ಲೆಕ್ಕಾಧಿಕಾರಿಗಳು ಇಂತಹ ಸಮಾಜಮುಖೀ ಕಾರ್ಯಕ್ರಮದಲ್ಲಿ ತೊಡಗಿಸಿಕೊಂಡಿರುವುದು ಶ್ಲಾಘನೀಯ ಎಂದರು.

ಅಪರ ಜಿಲ್ಲಾಧಿಕಾರಿ ಬಿ.ಸದಾಶಿವ ಪ್ರಭು, ಉಡುಪಿ ತಾಲೂಕು ತಹಶಿಲ್ದಾರ್‌ ಪ್ರದೀಪ್‌ ಎಸ್‌. ಕುರುಡೇಕರ್‌, ಕಾಪು ತಾಲೂಕು ತಹಶೀಲ್ದಾರ್‌ ಮಹಮ್ಮದ್‌ ಇಸಾಕ್‌, ಜಿಲ್ಲಾಸ್ಪತ್ರೆ ಅಜ್ಜರಕಾಡು ರಕ್ತನಿಧಿ ವೈದ್ಯಾಧಿಕಾರಿ ಡಾ| ವೀಣಾ ಕುಮಾರಿ ಎಂ., ಮುನಿಯಾಲು ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಪ್ರಾಂಶುಪಾಲ ಡಾ| ಸತ್ಯನಾರಾಯಣ ಬಿ. ಉಪಸ್ಥಿತರಿದ್ದರು. ಗ್ರಾಮಲೆಕ್ಕಾಧಿಕಾರಿಗಳ ಸಂಘದ ತಾಲೂಕು ಕಾರ್ಯದರ್ಶಿ ಕಾರ್ತಿಕೇಯ ಭಟ್‌ ವಂದಿಸಿದರು. ಮಾಳಪ್ಪ ಸ್ವಾಗತಿಸಿ ನಿರ್ವಹಿಸಿದರು.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

9 hours ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

1 day ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

1 day ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

1 day ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

1 day ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

1 day ago