Featured

ಕಚ್ಚೂರು ಮಾಲ್ತಿದೇವಿ ಬಬ್ಬುಸ್ವಾಮಿ ದೇವಸ್ಥಾನಕ್ಕೆ ಯಶ್ ಪಾಲ್ ಸುವರ್ಣ ಭೇಟಿ -Vishwanews24

ಕಚ್ಚೂರು ಮಾಲ್ತಿದೇವಿ ಬಬ್ಬುಸ್ವಾಮಿ ದೇವಸ್ಥಾನಕ್ಕೆ ಯಶ್ ಪಾಲ್ ಸುವರ್ಣ ಭೇಟಿ

ಉಡುಪಿ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ ಹಾಗೂ ಶಾಸಕ ರಘುಪತಿ ಭಟ್ ಕಚ್ಚೂರು ಮಾಲ್ತಿದೇವಿ ದೈವಸ್ಥಾನ ಶ್ರೀ ಬಬ್ಬಸ್ವಾಮಿ ಮೂಲಕ್ಷೇತ್ರಕ್ಕೆ ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದರು.

ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರಕಾರ ಪರಿಶಿಷ್ಟ ಜಾತಿಗೆ ಶಕ್ತಿ ತುಂಬುವ ನಿಟ್ಟಿನಲ್ಲಿ ಮೀಸಲಾತಿ ಹೆಚ್ಚಳ ಹಾಗೂ ಕಚ್ಚೂರು ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಬಿಜೆಪಿ ಸರಕಾರ ವಿಶೇಷ ಅನುದಾನ ಒದಗಿಸುವ ಮೂಲಕ ಪರಿಶಿಷ್ಟ ಜಾತಿಗೆ ವಿಶೇಷ ಮಾನ್ಯತೆ ನೀಡಿದೆ.

ಮುಂದಿನ ದಿನಗಳಲ್ಲಿಯೂ ದೇಗುಲದ ಅಭಿವೃದ್ದಿ ಹಾಗೂ ಸಮಾಜದ ಸರ್ವರ ಏಳಿಗೆಗೆ ಕಟಿಬದ್ದರಾಗಿ ಸೇವೆ ಸಲ್ಲಿಸಲು ಮತ್ತೊಮ್ಮೆ ಬಿಜೆಪಿಗೆ ಅವಕಾಶ ನೀಡಲು ಮತದಾನದ ಮೂಲಕ ಆಶೀರ್ವದಿಸುವಂತೆ ಯಶ್ ಪಾಲ್ ಸುವರ್ಣ ಕೋರಿದರು.

ಶಾಸಕ ರಘುಪತಿ ಭಟ್ ಮಾತನಾಡಿ ನನ್ನ ಶಾಸಕತ್ವ ಅವಧಿಯಲ್ಲಿ ಶ್ರೀ ಕ್ಷೇತ್ರದ ಅಭಿವೃದ್ಧಿ ಕಾಮಗಾರಿಗಳಿಗೆ ಸರ್ಕಾರದ ಮೂಲಕ ಗರಿಷ್ಠ ಅನುದಾನ ಒದಗಿಸಿದ್ದು, ಮುಂದಿನ ದಿನಗಳಲ್ಲಿಯೂ ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ ರನ್ನು ಗೆಲ್ಲಿಸುವ ಮೂಲಕ ಕ್ಷೇತ್ರದ ಸೇವೆಗೆ ಅವಕಾಶ ನೀಡುವಂತೆ ತಿಳಿಸಿದರು.

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿ ಧರ್ಮದರ್ಶಿ ಗೋಕುಲ್ ದಾಸ್ ಬಾರ್ಕೂರು, ದೇವಸ್ಥಾನದ ಅಧ್ಯಕ್ಷರಾದ ಶಿವಪ್ಪ ನಂತೂರು, ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರಾದ ದಿನಕರ ಬಾಬು, ತೆಂಕನಿಡಿಯೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಗಾಯತ್ರಿ, ಗಣ್ಯರಾದ ರಘುರಾಮ ಪುತ್ತೂರು, ಶಿವರಾಜ್ ಮಲ್ಲಾರು, ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರು, ಕಾರ್ಯಕರ್ತರು ಉಪಸ್ಥಿತರಿದ್ದರು.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

11 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

11 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago