Featured

ಕಟಪಾಡಿಯ ಮಸೀದಿಯಲ್ಲಿ ಸಿಡಿಯಿತು ಗುಂಡು ; ಕಮೀಟಿ ಅಧ್ಯಕ್ಷ ಹುದ್ದೆಗಾಗಿ ಬಡಿದಾಟ

ಉಡುಪಿ : ಕಟಪಾಡಿ ಜಮಾಅತ್ ಅಧ್ಯಕ್ಷರ ಆಯ್ಕೆ ವಿಚಾರಕ್ಕೆ ಸಂಬಂಧಿಸಿ ಮಾತಿನ ಚಕಮಕಿ ಉಂಟಾಗಿ ವ್ಯಕ್ತಿಯೋರ್ವ ಪಿಸ್ತೂಲ್‌ನಿಂದ ಗುಂಡು ಹಾರಿಸಿ ಆತಂಕದ ವಾತಾವರಣ ಸೃಷ್ಟಿಸಿದ ಘಟನೆ ಬುಧವಾರ ಸಂಜೆ ನಡೆದಿದೆ.

ಘಟನೆಯ ವಿವರ

ಕಟಪಾಡಿ ಜಮಾಅತ್‌ಗೆ ಇತ್ತೀಚೆಗೆ ಅಧ್ಯಕ್ಷರ ಆಯ್ಕೆ ನಡೆದಿದ್ದು, ಅದರಂತೆ ಕೆ.ಪಿ.ಎಚ್.ಇಸ್ಮಾಯೀಲ್ ಎಂಬವರು ಸರ್ವಾನುಮತದಿಂದ ಆಯ್ಕೆಗೊಂಡಿ ದ್ದರು. ಆದರೆ ಇದನ್ನು ವಿರೋಧಿಸಿದ್ದ ಸರಕಾರಿ ಗುಡ್ಡೆಯ ಅಕ್ಬರ್ ಎಂಬಾತ ಇಸ್ಮಾಯೀಲ್‌ಗೆ ದೂರವಾಣಿ ಕರೆ ಮಾಡಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಬೆದರಿಕೆಯೊಡ್ಡಿದ್ದನೆನ್ನಲಾಗಿದೆ. ಈ ವಿಚಾರವನ್ನು ಇಸ್ಮಾಯೀಲ್‌ ಜಮಾಅತ್ ಮುಂದಿಟ್ಟಿದ್ದರು. ಕಳೆದ ಶುಕ್ರವಾರ ಈ ಬಗ್ಗೆ ಮಾತುಕತೆ ನಡೆದು ಇಸ್ಮಾಯೀಲ್‌ರನ್ನೇ ಅಧ್ಯಕ್ಷರನ್ನಾಗಿ ಮುಂದುವರಿಸಲು ಸಭೆ ತಿರ್ಮಾನಿಸಲಾಯಿತು. ಈ ಸಂದರ್ಭ ಅಕ್ಬರ್ ಕ್ಷಮೆ ಕೂಡಾ ಯಾಚಿಸಿದ್ದನೆನ್ನಲಾಗಿದೆ.

ಬಳಿಕ ಹಠಾತ್ ಬೆಳವಣಿಗೆಯೊಂದರಲ್ಲಿ ಇಸ್ಮಾಯೀಲ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಈ ಹಿನ್ನೆಲೆಯಲ್ಲಿ ಇಂದು ನಡೆದ ಸಭೆಯಲ್ಲಿ ಅವರ ರಾಜೀನಾಮೆ ಅಂಗೀಕಾರ ದೊರೆತಿದ್ದು, ನೂತನ ಅಧ್ಯಕ್ಷರ ಬಗ್ಗೆ ಚರ್ಚೆ ನಡೆಯಿತು. ಈ ವೇಳೆ ಅಕ್ಬರ್ ತನ್ನ ಆಪ್ತ ಹಮೀದ್ ಎಂಬರನ್ನು ಸೂಚಿಸಿದರೆನ್ನಲಾಗಿದೆ. ಇದಕ್ಕೆ ಸಭೆಯಲ್ಲಿ ಆಕ್ಷೇಪ ವ್ಯಕ್ತವಾಗಿದ್ದು, ಅಧ್ಯಕ್ಷರ ಆಯ್ಕೆ ಮತದಾನದ ಮೂಲಕ ನಡೆಯಲಿ ಎಂದು ಪಟ್ಟು ಹಿಡಿದರು. ಈ ವೇಳೆ ಮಾತಿಗೆ ಮಾತು ಬೆಳೆದು ಅಕ್ಬರ್ ತನ್ನಲ್ಲಿದ್ದ ಪಿಸ್ತೂಲ್‌ನಿಂದ ಗುಂಡು ಹಾರಿಸಿ ಭಯದ ವಾತಾವರಣ ಸೃಷ್ಟಿಸಿದರೆನ್ನಲಾಗಿದೆ.

ಬಳಿಕ ನಡೆದ ತಳ್ಳಾಟದಲ್ಲಿ ಅಕ್ಬರ್ ಹಾಗೂ ಅನ್ವರ್ ಎಂಬವರು ಗಾಯಗೊಂಡಿದ್ದು, ಅವರು ಆಸ್ಪತ್ರೆ ದಾಖಲಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಕಾಪು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Vishwa News 24

Recent Posts

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

12 minutes ago

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

23 minutes ago

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…

35 minutes ago

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

42 minutes ago

ಉಡುಪಿ: ಎಸ್.ಟಿ ಮೋರ್ಚಾದ ನೂತನ ಪದಾಧಿಕಾರಿಗಳಿಗೆ ನಿಯುಕ್ತಿ ಪತ್ರ ವಿತರಣೆ – vishwanews24

ಉಡುಪಿ: ಎಸ್.ಟಿ ಮೋರ್ಚಾದ ನೂತನ ಪದಾಧಿಕಾರಿಗಳಿಗೆ ನಿಯುಕ್ತಿ ಪತ್ರ ವಿತರಣೆ ಉಡುಪಿ: ಭಾರತೀಯ ಜನತಾ ಪಾರ್ಟಿಯ ಎಸ್.ಟಿ ಮೋರ್ಚಾ ಜಿಲ್ಲಾ…

50 minutes ago

ಮೊದಲ ಬಾರಿಗೆ NCERT 9ನೇ ಕ್ಲಾಸ್‌ನಲ್ಲಿ ತುರ್ತು ಪರಿಸ್ಥಿತಿ ಪಠ್ಯ ಅಧಿಕೃತವಾಗಿ ಸೇರ್ಪಡೆ – vishwanews24

ದೇಶದ ಶೈಕ್ಷಣಿಕ ಇತಿಹಾಸದಲ್ಲೇ ಅತ್ಯಂತ ದೊಡ್ಡ ಪಠ್ಯ ಪರಿಷ್ಕರಣೆ.. ಮೊದಲ ಬಾರಿಗೆ NCERT 9ನೇ ಕ್ಲಾಸ್‌ನಲ್ಲಿ ತುರ್ತು ಪರಿಸ್ಥಿತಿ ಪಠ್ಯ…

4 hours ago