Featured

ಕಟಪಾಡಿಯ ಮಸೀದಿಯಲ್ಲಿ ಸಿಡಿಯಿತು ಗುಂಡು ; ಕಮೀಟಿ ಅಧ್ಯಕ್ಷ ಹುದ್ದೆಗಾಗಿ ಬಡಿದಾಟ

ಉಡುಪಿ : ಕಟಪಾಡಿ ಜಮಾಅತ್ ಅಧ್ಯಕ್ಷರ ಆಯ್ಕೆ ವಿಚಾರಕ್ಕೆ ಸಂಬಂಧಿಸಿ ಮಾತಿನ ಚಕಮಕಿ ಉಂಟಾಗಿ ವ್ಯಕ್ತಿಯೋರ್ವ ಪಿಸ್ತೂಲ್‌ನಿಂದ ಗುಂಡು ಹಾರಿಸಿ ಆತಂಕದ ವಾತಾವರಣ ಸೃಷ್ಟಿಸಿದ ಘಟನೆ ಬುಧವಾರ ಸಂಜೆ ನಡೆದಿದೆ.

ಘಟನೆಯ ವಿವರ

ಕಟಪಾಡಿ ಜಮಾಅತ್‌ಗೆ ಇತ್ತೀಚೆಗೆ ಅಧ್ಯಕ್ಷರ ಆಯ್ಕೆ ನಡೆದಿದ್ದು, ಅದರಂತೆ ಕೆ.ಪಿ.ಎಚ್.ಇಸ್ಮಾಯೀಲ್ ಎಂಬವರು ಸರ್ವಾನುಮತದಿಂದ ಆಯ್ಕೆಗೊಂಡಿ ದ್ದರು. ಆದರೆ ಇದನ್ನು ವಿರೋಧಿಸಿದ್ದ ಸರಕಾರಿ ಗುಡ್ಡೆಯ ಅಕ್ಬರ್ ಎಂಬಾತ ಇಸ್ಮಾಯೀಲ್‌ಗೆ ದೂರವಾಣಿ ಕರೆ ಮಾಡಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಬೆದರಿಕೆಯೊಡ್ಡಿದ್ದನೆನ್ನಲಾಗಿದೆ. ಈ ವಿಚಾರವನ್ನು ಇಸ್ಮಾಯೀಲ್‌ ಜಮಾಅತ್ ಮುಂದಿಟ್ಟಿದ್ದರು. ಕಳೆದ ಶುಕ್ರವಾರ ಈ ಬಗ್ಗೆ ಮಾತುಕತೆ ನಡೆದು ಇಸ್ಮಾಯೀಲ್‌ರನ್ನೇ ಅಧ್ಯಕ್ಷರನ್ನಾಗಿ ಮುಂದುವರಿಸಲು ಸಭೆ ತಿರ್ಮಾನಿಸಲಾಯಿತು. ಈ ಸಂದರ್ಭ ಅಕ್ಬರ್ ಕ್ಷಮೆ ಕೂಡಾ ಯಾಚಿಸಿದ್ದನೆನ್ನಲಾಗಿದೆ.

ಬಳಿಕ ಹಠಾತ್ ಬೆಳವಣಿಗೆಯೊಂದರಲ್ಲಿ ಇಸ್ಮಾಯೀಲ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಈ ಹಿನ್ನೆಲೆಯಲ್ಲಿ ಇಂದು ನಡೆದ ಸಭೆಯಲ್ಲಿ ಅವರ ರಾಜೀನಾಮೆ ಅಂಗೀಕಾರ ದೊರೆತಿದ್ದು, ನೂತನ ಅಧ್ಯಕ್ಷರ ಬಗ್ಗೆ ಚರ್ಚೆ ನಡೆಯಿತು. ಈ ವೇಳೆ ಅಕ್ಬರ್ ತನ್ನ ಆಪ್ತ ಹಮೀದ್ ಎಂಬರನ್ನು ಸೂಚಿಸಿದರೆನ್ನಲಾಗಿದೆ. ಇದಕ್ಕೆ ಸಭೆಯಲ್ಲಿ ಆಕ್ಷೇಪ ವ್ಯಕ್ತವಾಗಿದ್ದು, ಅಧ್ಯಕ್ಷರ ಆಯ್ಕೆ ಮತದಾನದ ಮೂಲಕ ನಡೆಯಲಿ ಎಂದು ಪಟ್ಟು ಹಿಡಿದರು. ಈ ವೇಳೆ ಮಾತಿಗೆ ಮಾತು ಬೆಳೆದು ಅಕ್ಬರ್ ತನ್ನಲ್ಲಿದ್ದ ಪಿಸ್ತೂಲ್‌ನಿಂದ ಗುಂಡು ಹಾರಿಸಿ ಭಯದ ವಾತಾವರಣ ಸೃಷ್ಟಿಸಿದರೆನ್ನಲಾಗಿದೆ.

ಬಳಿಕ ನಡೆದ ತಳ್ಳಾಟದಲ್ಲಿ ಅಕ್ಬರ್ ಹಾಗೂ ಅನ್ವರ್ ಎಂಬವರು ಗಾಯಗೊಂಡಿದ್ದು, ಅವರು ಆಸ್ಪತ್ರೆ ದಾಖಲಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಕಾಪು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Vishwa News 24

Recent Posts

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು – vishwanews24

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು ಉಡುಪಿ: ಕಾರ್ಕಳದಲ್ಲಿ 2027ರಲ್ಲಿ ನಡೆಯಲಿರುವ…

1 hour ago

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ – vishwanews24

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ ಕಾಪು: ಕ್ಷುಲ್ಲಕ ಕಾರಣಕ್ಕಾಗಿ ಪತಿಯೊಂದಿಗೆ ಜಗಳವಾಡಿ ಬಳಿಕ…

2 hours ago

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ನಿಮ್ಮ ದೇಹದ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ ಎಂದು ತಿಳಿದುಕೊಳ್ಳಿ – vishwanews24

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ಒಳ್ಳೆಯದೋ? ಅಥವಾ ಕೆಟ್ಟದೋ? ಬೆಳಿಗ್ಗೆ ಖಾಲಿ ಹೊಟ್ಟೆಗೆ ಎಳನೀರು ಕುಡಿಯುವುದರಿಂದಾಗುವ ಪ್ರಯೋಜನಗಳೇನು ಗೊತ್ತಾ? ಇದು ನಿಮ್ಮ…

2 hours ago

ಕಾಪು: ತಮಿಳುನಾಡು ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಬಿದ್ದು ಮೀನುಗಾರ ನಾಪತ್ತೆ – vishwanews24

ಕಾಪು: ತಮಿಳುನಾಡು ಮೂಲದ ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಮೀನುಗಾರ ನಾಪತ್ತೆ  ಕಾಪು: ಕಾಪು ಕಡಲ ಕಿನಾರೆಯಲ್ಲಿ…

2 hours ago

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು – vishwanews24

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…

5 hours ago

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು – vishwanews24

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…

5 hours ago